Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಇಂದಿನ ರಾಜಕಾರಣಿಗಳು ತಮ್ಮ...

ಇಂದಿನ ರಾಜಕಾರಣಿಗಳು ತಮ್ಮ ಅಧಿಕಾರಕ್ಕೋಸ್ಕರ ಇಡೀ ದೇಶವನ್ನೇ ನಾಶ ಮಾಡಲು ಹೇಸುವುದಿಲ್ಲ : ತುಷಾರ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ10 Jan 2025 8:31 PM IST
share
Photo of Program

ಬೀದರ್ : ಇಂದಿನ ರಾಜಕಾರಣಿಗಳು ತಮ್ಮ ಅಧಿಕಾರಕ್ಕೋಸ್ಕರ ಇಡೀ ದೇಶವನ್ನೇ ನಾಶ ಮಾಡಲು ಹೇಸುವುದಿಲ್ಲ ಎಂದು ಮಹಾತ್ಮಾ ಗಾಂಧೀಯ ಮರಿ ಮೊಮ್ಮಗ ತುಷಾರ್ ಗಾಂಧಿ ಹೇಳಿದರು.

ಇಂದು ನಗರದ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ವತಿಯಿಂದ 63 ದಿವಸದ ಅಕ್ಷರ ಜ್ಯೋತಿ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಯುವಜನರು ಇಂದಿನ ರಾಜಕಾರಣಿಗಳ ಉದಾಹರಣೆ ತೆಗೆದುಕೊಂಡು, ಅವರನ್ನು ಆದರ್ಶರನ್ನಾಗಿ ಮಾಡಿಕೊಂಡು ಬೆಳೆದರೆ ಯಾವುದೇ ಉಪಯೋಗವಿಲ್ಲ. ಒಂದು ವೇಳೆ ರಾಜಕೀಯ ಮಾಡುವುದೇ ಇದ್ದರೆ ಸೇವೆಯ ರಾಜಕೀಯ ಮಾಡಿ ಎಂದು ಯುವಕರಿಗೆ ತಿಳಿಸಿದರು.

ಇಂದಿನ ರಾಜಕಾರಣಿಗಳು ತಮ್ಮ ಅಧಿಕಾರಕ್ಕೋಸ್ಕರ ಇಡೀ ದೇಶವನ್ನೇ ನಾಶ ಮಾಡಲು ಹೇಸುವುದಿಲ್ಲ. ಈ ರೀತಿಯ ರಾಜಕೀಯ ನಮಗೆ ಬೇಕಿಲ್ಲ. 50 ವರ್ಷಕ್ಕಿಂತ ಮೊದಲು ಈ ದೇಶ ಬಾಲ್ಯವಸ್ಥೆಯಲ್ಲಿತ್ತು. ಆವಾಗ ಎಂಥ ರಾಜಕಾರಣಿಗಳು ಇದ್ದರೆ ಎಂದರೆ, ಈ ದೇಶ ಕಟ್ಟುವ ಸಲುವಾಗಿ ಯಾವತ್ತು ತನ್ನ ಮತ್ತು ತನ್ನ ಪಾರಿವಾರದವರ ಕಡೆಗೆ ನೋಡಲಿಲ್ಲ. ರಾಷ್ಟ್ರ ಕಟ್ಟಲು ಅವರು ಸಂಪೂರ್ಣವಾಗಿ ತಮ್ಮ ಜೀವನವನ್ನೇ ಸಮರ್ಪಣೆ ಮಾಡಿದ್ದರು ಎಂದರು.

ಇವಾಗ ಪ್ರಧಾನಿಯಿಂದ ಜನ ಸಾಮಾನ್ಯರವರೆಗೆ ಎಲ್ಲರೂ ಒಬ್ಬರು ಇನ್ನೊಬ್ಬರ ಜೊತೆ ದ್ವೇಷ ಹರಡುವ ಕೆಲಸ ಮಾಡುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಒಡಕು ಮೂಡುತ್ತಿದೆ. ಹಾಗಾಗಿ ನಾವು ಸಹೋದರತೆಯ, ಪ್ರೀತಿಯ ಮಾತುಗಳನ್ನಾಡುವುದು ತುಂಬಾ ಅವಶ್ಯಕವಾಗಿದೆ. ಧರ್ಮ, ಜಾತಿ, ಲಿಂಗ, ಭಾಷೆ, ಆರ್ಥಿಕ ಸ್ಥಾನಮಾನತೆ ಹೀಗೆ ಎಲ್ಲದರಲ್ಲಿಯೂ ನಾವು ಅಸಮಾನತೆಯನ್ನು ಹೊಂದಿದ್ದೇವೆ. ಸಮಾಜದಲ್ಲಿ ನಾವು ಪ್ರೀತಿಯ ಸಂದೇಶ ಸಾರುವ ಮೂಲಕ ಅದನ್ನು ದ್ವೇಷವನ್ನು ಅಳಿಸಬಹುದು ಎಂದು ನುಡಿದರು.

ಅಕ್ಕ ಐಎಎಸ್ ಅಕಾಡೆಮಿ ಮುಖ್ಯಸ್ಥ ಡಾ. ಶಿವಕುಮಾರ್ ಮಾತನಾಡಿ, ಓದಕ್ಕೆ ಬರದವರು ದಡ್ಡರಲ್ಲ. ಅವರಲ್ಲಿ ಯಾವುದಾದರೂ ಪ್ರತಿಭೆ ಇದ್ದೆ ಇರುತ್ತದೆ. ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದರೆ ದೊಡ್ಡ ಮಟ್ಟದಲ್ಲಿ ಬೆಳೆಯಬಹುದು ಎಂದರು.

ಕಾರ್ಯಕ್ರಮದಲ್ಲಿ ಪದ್ಮ ಶ್ರೀ ಪುರಸ್ಕೃತರಾದ ಹರೇಕಳ್ ಹಾಜಬ್ಬ, ಸುಧಾ ವರ್ಗಿಸ್, ಮಹಾಲಿಂಗ್ ನಾಯ್ಕ, ರಾಣಿ ಮಾಚಯ್ಯ, ಸತ್ಯನಾರಾಯಣ ಬೇಲೆರಿ, ಶಾ ರಶೀದ್ ಅಹಮ್ಮದ್ ಖಾದ್ರಿ, ಸೋಮಣ್ಣ ಹಾಗೂ ಹುಚ್ಚಮ್ಮ ಬಸಪ್ಪ ಚೌದ್ರಿ ಅವರನ್ನು ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಗುರುಬಸವ ಪಟ್ಟದೇವರು , ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ್ ಪಾಟೀಲ್, ಶಾಹಿನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದಿರ್, ಜಗನ್ನಾಥ್ ಹಲ್ಮಡಗಿ, ರಾಜೇಂದ್ರಕುಮಾರ್ ಮಣಗೆರೆ ಹಾಗೂ ಹಾವಾಶೆಟ್ಟಿ ಪಾಟೀಲ್ ಸೇರಿದಂತೆ ಅನೇಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X