Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ವಿವಿಧ ಕಳ್ಳತನ ಪ್ರಕರಣ | ಮಾದಕ ವಸ್ತು,...

ವಿವಿಧ ಕಳ್ಳತನ ಪ್ರಕರಣ | ಮಾದಕ ವಸ್ತು, ಬೈಕ್ ಸೇರಿ ಇತರ ವಸ್ತು ಜಪ್ತಿ, ಆರೋಪಿಗಳ ಬಂಧನ : ಎಸ್ಪಿ ಪ್ರದೀಪ್ ಗುಂಟಿ

ವಾರ್ತಾಭಾರತಿವಾರ್ತಾಭಾರತಿ22 Aug 2025 4:40 PM IST
share
ವಿವಿಧ ಕಳ್ಳತನ ಪ್ರಕರಣ | ಮಾದಕ ವಸ್ತು, ಬೈಕ್ ಸೇರಿ ಇತರ ವಸ್ತು ಜಪ್ತಿ, ಆರೋಪಿಗಳ ಬಂಧನ : ಎಸ್ಪಿ ಪ್ರದೀಪ್ ಗುಂಟಿ

ಬೀದರ್ : ವಿವಿಧ ಪ್ರಕರಣ ಭೇದಿಸಿ ಮಾದಕ ವಸ್ತು, ಕಳುವಾದ ಬೈಕ್ ಗಳು ಹಾಗೂ ಚಿನ್ನ ಸೇರಿದಂತೆ ಒಟ್ಟು 15 ಲಕ್ಷ 55 ಸಾವಿರ ರೂ. ಕ್ಕಿಂತ ಹೆಚ್ಚಿನ ಮೌಲ್ಯದ ವಸ್ತುಗಳು ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ತಿಳಿಸಿದರು.

ಇಂದು ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಕಚೇರಿಯ ಮೈದಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಕೆಟ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ದೀನದಯಾಳ ನಗರ (ಮಾಂಗರವಾಡಿ ಗಲ್ಲಿ) ದ ಹನುಮಾನ ಮಂದಿರದ ಒಂದು ಮನೆಯ ಹತ್ತಿರ ಇಬ್ಬರು ವ್ಯಕ್ತಿಗಳು ಬಾಟಲ್ ಹಾಗೂ ಗುಳಿಗೆ ಮಾರಾಟ ಮಾಡುವುದು ಕಂಡು ಬಂದಿತ್ತು. ಅವರ ಮನೆ ಮೇಲೆ ದಾಳಿ ಮಾಡಿ ವಶಕ್ಕೆ ಪಡೆದು ವಿಚಾರಿಸಿದಾಗ ಹೈದ್ರಾಬಾದ್ ನ ಬಿ. ಎಚ್. ಇ. ಎಲ್ ಏರಿಯಾದ ಒರ್ವ ವ್ಯಕ್ತಿ ಈ ಮಾದಕ ವಸ್ತುಗಳು ಮಾರಾಟಕ್ಕಾಗಿ ಮಾದಕ ವಸ್ತುಗಳನ್ನು ನೀಡಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ ಎಂದು ಹೇಳಿದರು.

ಆರೋಪಿಗಳಿಂದ ಒಟ್ಟು 1 ಲಕ್ಷ 48 ಸಾವಿರ ರೂ. ಕ್ಕೂ ಅಧಿಕ ಮೌಲ್ಯದ ಮಾದಕ ದ್ರವ್ಯ ಹಾಗೂ ಗುಳಿಗೆಗಳು ವಶಕ್ಕೆ ಪಡೆಯಲಾಗಿದೆ. ಹಾಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನೊರ್ವ ಆರೋಪಿಯ ಪತ್ತೆಗಾಗಿ ಅಪರಾಧ ವಿಭಾಗದ ತಂಡ ರಚಿಸಿದ್ದು, ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದರು.

ಚಿಟಗುಪ್ಪಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣ ಭೇಧಿಸಿ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಚಿಟಗುಪ್ಪಾ ಅಲ್ಲದೇ ಬಸವಕಲ್ಯಾಣ, ಕಲಬುರಗಿ ಜಿಲ್ಲೆಯ ಸುಲೇಪೇಟ್, ನರೋಣ, ರಟಕಲ್ ಹಾಗೂ ಕಮಲಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿಯು ಬೈಕ್ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರೋಪಿಗಳಿಂದ ಸುಮಾರು 9 ಲಕ್ಷ 25 ಸಾವಿರ ರೂ. ಬೆಲೆ ಬಾಳುವ 13 ಬೈಕ್ ಗಳು ವಶಕ್ಕೆ ಪಡೆದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.

ಬೀದರ್ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ನಡೆದ ಕಳ್ಳತನ ಪ್ರಕರಣ ಭೇಧಿಸಿ, ನಾಲ್ಕು ತೊಲೆ ಬೆಳ್ಳಿ ಕಾಲಕಡಗ, 10 ಗ್ರಾಂ ಚಿನ್ನದ ಮಂಗಳಸೂತ್ರದ ಗುಂಡು, 5 ಗ್ರಾಂ ಚಿನ್ನದ ಕಿವಿಯ ಹೂ ಹಾಗೂ ಸರಪಳಿ, 4 ಗ್ರಾಂ ಚಿನ್ನದ ಉಂಗುರು ಹಾಗೂ 10 ಗ್ರಾಂ ಚಿನ್ನದ ಲಾಕೇಟ್ ಹೀಗೆ ಒಟ್ಟು 1 ಲಕ್ಷ 57 ಸಾವಿರ ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಲಾಗಿದೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು.

ಬೇಮಳಖೇಡಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಜಾನುವಾರುಗಳ ಕಳ್ಳತನ ಪ್ರಕರಣದಲ್ಲಿ ದೇವಗಿರಿ ತಾಂಡಾದ ಒರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯು ಜಾನುವಾರು ಕಳ್ಳತನ ಮಾಡಿ ತೆಲಂಗಾಣ ರಾಜ್ಯದ ಜಹಿರಾಬಾದ್ ನಲ್ಲಿ ಮಾರಾಟ ಮಾಡಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಆತನಿಂದ 25 ಸಾವಿರ ರೂ. ನಗದು ಹಣ ಮತ್ತು ಕೃತ್ಯಕ್ಕೆ ಬಳಸಲಾದ ಸುಮಾರು 3 ಲಕ್ಷ ರೂ. ಗೆ ಬೆಲೆ ಬಾಳುವ ಒಂದು ಅಶೋಕ್ ಲೈಲ್ಯಾಂಡ್ ವಾಹನ ಜಪ್ತಿ ಮಾಡಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರೀಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ, ಸಿಪಿಐ ಫಾಲಕ್ಷಯ್ಯ ಹಿರೇಮಠ್, ಸಿಪಿಐ ಶ್ರೀನಿವಾಸ್ ಅಲ್ಲಾಪುರ್ ಹಾಗೂ ಪಿಎಸ್ಐ ತಸ್ಲೀಮಾ ಬೇಗಂ ಸೇರಿದಂತೆ ಇತರ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X