Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕರಿಮೆಣಸು ಕೊಯ್ಲು: ಜೀವಕ್ಕೆ ಆಪತ್ತು...

ಕರಿಮೆಣಸು ಕೊಯ್ಲು: ಜೀವಕ್ಕೆ ಆಪತ್ತು ತಂದೊಡ್ಡುತ್ತಿರುವ ಅಲ್ಯೂ ಮಿನಿಯಂ ಏಣಿ

6 ವರ್ಷಗಳಲ್ಲಿ ಕೊಡಗಿನಲ್ಲಿ 36ಕ್ಕೂ ಹೆಚ್ಚು ಕಾರ್ಮಿಕರು ಬಲಿ

ಕೆ.ಎಂ. ಇಸ್ಮಾಯಿಲ್ ಕಂಡಕರೆಕೆ.ಎಂ. ಇಸ್ಮಾಯಿಲ್ ಕಂಡಕರೆ14 March 2025 11:55 AM IST
share
ಕರಿಮೆಣಸು ಕೊಯ್ಲು: ಜೀವಕ್ಕೆ ಆಪತ್ತು ತಂದೊಡ್ಡುತ್ತಿರುವ ಅಲ್ಯೂ ಮಿನಿಯಂ ಏಣಿ

ಮಡಿಕೇರಿ: ಕೊಡಗು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಕಾಫಿ ಕೊಯ್ಲು ಪೂರ್ಣಗೊಂಡಿದ್ದು, ಇದೀಗ ಬೆಳೆಗಾರರು ಕರಿಮೆಣಸು ಕೊಯ್ಲಿನತ್ತ ಮುಖ ಮಾಡಿದ್ದಾರೆ. ಜಿಲ್ಲೆಯಲ್ಲಿ ಮಾರ್ಚ್‌ನಿಂದ ಮೇವರೆಗೆ ಸಾಮಾನ್ಯವಾಗಿ ಕರಿಮೆಣಸು ಕೊಯ್ಲು ನಡೆಯುತ್ತಿರುತ್ತದೆ. ಏತನ್ಮಧ್ಯೆ ಕರಿಮೆಣಸು ಕೊಯ್ಲು ಮಾಡಲು ಬಳಸುವ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ವರ್ಷಂಪ್ರತಿ ಕಾರ್ಮಿಕರು ಸಾವನ್ನಪ್ಪುತ್ತಿದ್ದಾರೆ.

ಕೊಡಗಿನಲ್ಲಿ ಕಳೆದ ಆರು ವರ್ಷಗಳಲ್ಲಿ ಕರಿಮೆಣಸು ಮತ್ತು ಇನ್ನಿತರ ಮರ ಕೆಲಸಗಳಿಗೆ ಅಲ್ಯೂಮಿನಿಯಂ ಏಣಿ ಬಳಸುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಸ್ಪರ್ಶಿಸಿ 36ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಬಲಿಯಾಗಿದ್ದಾರೆ.

ಕರಿಮೆಣಸು ಕೊಯ್ಲು ಅವಧಿಯಲ್ಲಿ ಅಲ್ಯೂಮಿನಿಯಂ ಏಣಿ ಬಳಸುವಾಗ ಹಲವು ಬಾರಿ ಜಿಲ್ಲಾಡಳಿತ ಬೆಳೆಗಾರರಿಗೆ ಎಚ್ಚರಿಕೆ ನೀಡುತ್ತಾ ಬಂದಿದೆ. ಅಲ್ಲದೆ, ಜಿಲ್ಲೆಯಲ್ಲಿ ಅಲ್ಯೂಮಿನಿಯಂ ಏಣಿ ನಿಷೇಧ ಮಾಡಬೇಕೆಂಬ ಕೂಗು ಹಲವು ಬಾರಿ ಕೇಳಿ ಬಂದಿದೆ. ಆದರೂ ಅಲ್ಯೂಮಿನಿಯಂ ಏಣಿ ಬಳಕೆ ನಿಂತಿಲ್ಲ.

ತೋಟಗಳಿಂದ ಮಾಯವಾದ ಬಿದಿರಿನ ಏಣಿ: ಕೊಡಗು ಜಿಲ್ಲೆಯಲ್ಲಿ ಈ ಹಿಂದೆ ಸಾಮಾನ್ಯವಾಗಿ ಮರಗಳಲ್ಲಿ ಹಬ್ಬಿರುವ ಕರಿಮೆಣಸು ಫಸಲನ್ನು ಕೊಯ್ಲು ಮಾಡಲು ಬಿದಿರಿನ ಏಣಿಗಳನ್ನು ಬಳಸಿ ಕರಿಮೆಣಸು ಕೊಯ್ಲು ಮಾಡುತ್ತಿದ್ದರು. ಆದರೆ, ಕಳೆದ ಒಂದು ದಶಕಗಳಿಂದ ಜಿಲ್ಲೆಯ ಬಹುತೇಕ ಕಾಫಿ ತೋಟಗಳಲ್ಲಿ ಬಿದಿರಿನ ಏಣಿಗಳು ಸಂಪೂರ್ಣ ದೂರವಾಗುತ್ತಿದೆ.

ಅತೀ ಕಡಿಮೆ ತೂಕದ ಅಲ್ಯೂಮಿನಿಯಂ ಏಣಿಗಳು ಮಾರುಕಟ್ಟೆಗೆ ಲಗ್ಗೆಯಿಟ್ಟ ದಿನಗಳಿಂದ ಜಿಲ್ಲೆಯಲ್ಲಿ ಬಿದಿರಿನ ಏಣಿಗಳ ಬಳಕೆ ಕಡಿಮೆಯಾಗುತ್ತಾ ಬಂದಿದೆ. ವಿಶೇಷವಾಗಿ ಕಳೆದ ಐದು ವರ್ಷಗಳಿಂದ ಕರಿಮೆಣಸು ಕೊಯ್ಲು ಮಾಡಲು ಯಥೇಚ್ಛವಾಗಿ ಅಲ್ಯೂಮಿನಿಯಂ ಏಣಿಯನ್ನೇ ಬೆಳೆಗಾರರು ಬಳಸುತ್ತಿದ್ದಾರೆ. ಮತ್ತೊಂದೆಡೆ ಬಿದಿರಿನ ನಾಶದಿಂದ ಬಿದಿರಿನ ಏಣಿಗಳೂ ಸಿಗದೆ ಅನಿವಾರ್ಯವಾಗಿ ಬೆಳೆಗಾರರು ಅಲ್ಯೂಮಿನಿಯಂ ಏಣಿಗಳತ್ತ ಮುಖ ಮಾಡಿದ್ದಾರೆ. ಅಲ್ಯೂಮಿನಿಯಂ ಏಣಿಗಳನ್ನು ಇತ್ತೀಚಿನ ದಿನಗಳಲ್ಲಿ ಮರ ಕಪಾತ್ ಮಾಡಲೂ ಬಳಸುತ್ತಿದ್ದಾರೆ.

ಬಿದಿರಿನ ಏಣಿಗಳು ಹೆಚ್ಚಿನ ತೂಕ ಇರುವುದರಿಂದ ಕರಿಮೆಣಸು ಕೊಯ್ಲು ಸಂದರ್ಭದಲ್ಲಿ ಒಂದು ಬಳ್ಳಿಯಿಂದ ಮತ್ತೊಂದು ಕರಿಮೆಣಸು ಬಳ್ಳಿಗೆ ಸುಲಭದಲ್ಲಿ ಎತ್ತಿಕೊಂಡು ಹೋಗಲು ಕಷ್ಟಸಾಧ್ಯ. ಇದರ ನಡುವೆ ಮಾರುಕಟ್ಟೆಗೆ ಅಲ್ಯೂಮಿನಿಯಂ ಏಣಿಗಳು ಲಗ್ಗೆಯಿಟ್ಟ ದಿನಗಳಿಂದ ಬೆಳೆಗಾರರು ಕರಿಮೆಣಸು ಕೊಯ್ಲು ಮಾಡಲು ಅಲ್ಯೂಮಿನಿಯಂ ಏಣಿಗಳನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ.

ಅಮಾಯಕ ಕಾರ್ಮಿಕರು ಬಲಿ: ಕೊಡಗಿನ ಬಹುತೇಕ ತೋಟಗಳ ಮಧ್ಯದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು, ಕರಿಮೆಣಸು, ಮರದ ಕೊಂಬೆಗಳನ್ನು ಕಡಿಯಲು ಅಲ್ಯೂಮಿನಿಯಂ ಏಣಿಗಳನ್ನು ಬಳಸುವಾಗ ವಿದ್ಯುತ್ ತಂತಿಗೆ ತಗಲಿ ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ. ಕೊಡಗಿನಲ್ಲಿ ಕಳೆದ ಆರು ವರ್ಷಗಳಲ್ಲಿ ಅಲ್ಯೂಮಿನಿಯಂ ಏಣಿ ಬಳಸುವಾಗ ವಿದ್ಯುತ್ ತಂತಿ ಸ್ಪರ್ಶಿಸಿ 36ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಬಲಿಯಾಗಿದ್ದಾರೆ. ಇದರಲ್ಲಿ ಹೊರ ಜಿಲ್ಲೆ ಮತ್ತು ಹೊರ ರಾಜ್ಯದ ಕಾರ್ಮಿಕರೂ ಮೃತಪಟ್ಟಿದ್ದಾರೆ.

ವಿದ್ಯುತ್ ತಂತಿ ಹಾದು ಗೋಗಿರುವ ಕಾಫಿ ತೋಟಗಳಲ್ಲಿ ಕರಿಮೆಣಸು ಕೊಯ್ಲು ಮಾಡುವ ಸಮಯದಲ್ಲಿ ಕಾರ್ಮಿಕರು ಎಚ್ಚರ ವಹಿಸದಿದ್ದರೆ ಜೀವಕ್ಕೆ ಆಪತ್ತು ಗ್ಯಾರಂಟಿಯಾಗಿದೆ. ಕಾಫಿತೋಟಗಳಲ್ಲಿ ಕರಿಮೆಣಸು, ಮರದ ಕೊಂಬೆಗಳನ್ನು ಕಡಿಯಲು ಅಲ್ಯೂಮಿನಿಯಂ ಏಣಿಗಳನ್ನು ಮತ್ತು ತೋಟಗಳಿಗೆ ನೀರು ಹಾಯಿಸಲು ಅಲ್ಯೂಮಿನಿಯಂ ಸ್ಪಿಂಕ್ಲರ್‌ಗಳನ್ನು ಬಳಸದೆ ಇದಕ್ಕೆ ಬದಲಾಗಿ ಫೈಬರ್ ಏಣಿಗಳನ್ನು ಮತ್ತು ಫೈಬರ್ ಪೈಪ್‌ಗಳನ್ನು ಬಳಸುವ ಅಗತ್ಯ ಎದುರಾಗಿದೆ. ಇಲ್ಲದಿದ್ದರೆ ವರ್ಷಪ್ರಂತೀ ಅಲ್ಯೂಮಿನಿಯಂ ಏಣಿ ಬಳಕೆಯಿಂದ ಜೀವ ಹಾನಿಯಾಗುವ ಸಾಧ್ಯತೆ ಇದೆ.

ತೋಟಗಳಲ್ಲಿ ವಿದ್ಯುತ್ ಲೈನ್‌ಗಳಿದ್ದು, ಅಲ್ಯೂಮಿನಿಯಂ ಏಣಿ ಬಳಸುವಾಗ ಎಚ್ಚರಿಕೆಯಿಂದ ಕರಿಮೆಣಸು ಕೊಯ್ಲು ಮಾಡುತ್ತಿದ್ದೇವೆ. ರಸ್ತೆ ಬದಿಗಳಲ್ಲಿ ವಿದ್ಯುತ್ ಲೈನ್ ಕಂಬಗಳು ಇರುವುದರಿಂದ ಅಲ್ಲಿಯೂ ಕರಿಮೆಣಸು ಕೊಯ್ಲು ಮಾಡುವಾಗ ಅತೀ ಎಚ್ಚರಿಕೆಯಿಂದ ಇರುತ್ತೇವೆ. ಹಿಂದೆ ಬಿದಿರಿನ ಏಣಿಗಳನ್ನು ಬಳಸಿ ನಾವು ಕಾಳುಮೆಣಸು ಕೊಯ್ಲು ಮಾಡುತ್ತಿದ್ದೆವು. ಆದರೆ, ಅಲ್ಯೂಮಿನಿಯಂ ಏಣಿಗಳು ಹಗುರವಾಗಿರುವುದರಿಂದ ಕರಿಮೆಣಸು ಕೊಯ್ಲು ಮಾಡುವಾಗ ಒಂದು ಬಳ್ಳಿಯಿಂದ ಮತ್ತೊಂದು ಬಳ್ಳಿಗೆ ಏಣಿ ಎತ್ತಿಕೊಂಡು ಹೋಗಲು ಸುಲಭವಾಗುತ್ತದೆ.

ಸರ್ದಾರ್, ಕರಿಮೆಣಸು ಕೊಯ್ಲು ಕಾರ್ಮಿಕ, ಅಸ್ಸಾಂ

Tags

black pepper harvesting
share
ಕೆ.ಎಂ. ಇಸ್ಮಾಯಿಲ್ ಕಂಡಕರೆ
ಕೆ.ಎಂ. ಇಸ್ಮಾಯಿಲ್ ಕಂಡಕರೆ
Next Story
X