Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಚಾಮರಾಜನಗರ | ಜಮೀನಿನಲ್ಲಿ ಕನ್ನಡ, ತಮಿಳು...

ಚಾಮರಾಜನಗರ | ಜಮೀನಿನಲ್ಲಿ ಕನ್ನಡ, ತಮಿಳು ಬಾಷೆಯ 10ನೇ ಶತಮಾನದ ಶಾಸನಗಳು ಪತ್ತೆ

ವಾರ್ತಾಭಾರತಿವಾರ್ತಾಭಾರತಿ26 Jun 2025 4:47 PM IST
share
ಚಾಮರಾಜನಗರ | ಜಮೀನಿನಲ್ಲಿ ಕನ್ನಡ, ತಮಿಳು ಬಾಷೆಯ 10ನೇ ಶತಮಾನದ ಶಾಸನಗಳು ಪತ್ತೆ

ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಹೋಬಳಿಯ ಯಣಗುಂಬದಲ್ಲಿ 10 ನೇ ಶತಮಾನದ್ದು ಎನ್ನಲಾಗಿರುವ ಶಾಸನ, ವೀರಗಲ್ಲುಗಳು ಪತ್ತೆಯಾಗಿದ್ದು, ತಮಿಳು ಮತ್ತು ಕನ್ನಡ ಭಾಷೆಯ ಶಾಸನಗಳು ಇವಾಗಿವೆ.

ಚಾಮರಾಜನಗರ ತಾಲೂಕಿನ ಯಣಗುಂಬ ಗ್ರಾಮದ ಮಂಜುನಾಥ್ ಎಂಬವರ ಜಮೀನು ಮತ್ತು ಜಮೀನಿನ ಸುತ್ತಮುತ್ತಲು ತುರುಗೋಲು ಶಾಸನಗಳು ಪತ್ತೆಯಾಗಿದ್ದು, 2 ಶಾಸನಗಳಲ್ಲಿ ತಮಿಳು, 5 ಶಾಸನಗಳಲ್ಲಿ ಕನ್ನಡ ಭಾಷೆಯ ಲಿಪಿಗಳಿಂದ ಕೂಡಿದೆ.

ಚಾಮರಾಜನಗರ ತಾಲೂಕಿನ ಯಣಗುಂಬ ಗ್ರಾಮವನ್ನು ಕನ್ನಡ ಶಾಸನದಲ್ಲಿ ಯರಮಗುಂಬ ಎಂದು ಉಲ್ಲೇಖಿಸಿದ್ದು, ತಮಿಳು ಶಾಸನದಲ್ಲಿ ಯರಮೈಗುಂಬ ಎಂದಿದೆ. ಯಣಗುಂಬ ಸಮೀಪದ ಮೇಳೂರನ್ನು ಮೋಳೂರು ಎಂದಿದ್ದು, ಆಗಿನ ಕಾಲದಲ್ಲಿ ಎಮ್ಮೆ ಸಾಕಾಣಿಕೆ ಈ ಭಾಗದಲ್ಲಿ ಹೆಚ್ಚಿದಿದ್ದು ಶಾಸನದಿಂದ ತಿಳಿದು ಬಂದಿದೆ.

ಭಾರತೀಯ ಪುರಾತ್ವ ಇಲಾಖೆಯ ಕನ್ನಡ ಶಾಸನ ತಜ್ಞ ಡಾ. ಅನಿಲ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ʼಒಂದು ಶಾಸನದಲ್ಲಿ ಭೂದಾನ ಕೊಟ್ಟ ಬಗ್ಗೆ ಮಾಹಿತಿ ಇದೆ. ಮತ್ತೊಂದರಲ್ಲಿ ಕೇಸಣ್ಣ ಎಂಬಾತ ಹಸುಗಳನ್ನು ಕದ್ದೊಯ್ಯುವಾಗ ಯರಮಗುಂಬದ ಕಾಳ ಎಂಬಾತ ಹೋರಾಡಿ ವೀರ ಮರಣವನ್ನಪ್ಪಿದ ಮಾಹಿತಿ, ತಮಿಳು ಶಾಸನದಲ್ಲಿ ಮುನಿವರ ಕಂದಾಚಾರಿ ಎಂಬಾತನ ಮಗ ಕೊಲನ್ ಎಂಬ ವೀರನ ಬಗ್ಗೆ ಮಾಹಿತಿ ಇದೆ. ಇನ್ನೊಂದು ಶಾಸನದಲ್ಲಿ ರಾಜ ಲಾಂಛನ, ಛತ್ರಿ- ಕುದುರೆಗಳಿದ್ದು, ಓದಲು ಅಸ್ಪಷ್ಟವಾಗಿದೆ. ಈ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಲಾಗುವುದು. ತಮಿಳು ಶಾಸನಗಳನ್ನು ಡಾ.ಬಾಲಮುರುಗನ್ ಎಂಬವರು ಅಧ್ಯಯನ ಮಾಡುತ್ತಿದ್ದು, ನಾಗೇಂದ್ರ, ಗೌರವ್ ಎಂಬವರು ನಮ್ಮ ತಂಡದಲ್ಲಿದ್ದಾರೆ' ಎಂದು ತಿಳಿಸಿದ್ದಾರೆ.

ಜಮೀನಿನ ಮಾಲೀಕ ಮಂಜುನಾಥ್ ಈ ಬಗ್ಗೆ ಮಾಹಿತಿ ನೀಡಿ, ʼಜಮೀನಿನಲ್ಲಿ ಕೆಲಸ ನಿರ್ವಹಿಸುವಾಗ ಭೂ ಗರ್ಭದಲ್ಲಿ ಹುದುಗಿದ್ದ ಶಾಸನಗಳು ಪತ್ತೆಯಾದವು. ಶಿವನ ಸಣ್ಣ ಗುಡಿ ಕೂಡ ನಮ್ಮ ಜಮೀನಿನಲ್ಲಿದ್ದು, ಅದೂ ಕೂಡ ಬೇಲಿಗಳಿಂದ ಮುಚ್ಚಿಹೋಗಿತ್ತು. ಅದನ್ನು ತೆರವು ಮಾಡಿದ ಬಳಿಕ ಭೂದಾನ ಶಾಸನ ದೊರಕಿದೆ. ನಮ್ಮ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಅಧ್ಯಯನ ನಡೆಸಿ ಶಾಸನ ಮತ್ತು ವೀರಗಲ್ಲುಗಳನ್ನು ಸಂರಕ್ಷಿಸಬೇಕು' ಎಂದು ಅವರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X