ಚಾಮರಾಜನಗರ | ಸರಕಾರಿ ಬಸ್ ಪಲ್ಟಿ: 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಳುಬೆಟ್ಟ ಮಹದೆಶ್ವರಬೆಟ್ಟ ಮಾರ್ಗ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ.
ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಈ ಬಸ್ ಚಾಲಕನ ನಿಯಂತ್ರಣ ತಪ್ಪಿ ತಾಳುಬೆಟ್ಟ ಮಹದೆಶ್ವರಬೆಟ್ಟ ಮಾರ್ಗ ಸಮೀಪ ಪಲ್ಟಿಯಾಗಿದೆ. ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರ ಪೈಕಿ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮುಡುಕನಪುರ ಗ್ರಾಮದ ರಾಜಮಣಿ, ಕೃತಿಕಾ ರುಕ್ಮಿಣಿ ಮಂಜುನಾಥ್ ಸಂಜೀವ್ ಮಹೇಶ್ ಕಾವ್ಯಾ ಪ್ರತಾಪ್ ಮಹೇಶ್, ನಿಂಗಯ್ಯ, ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮೆಲ್ಲಳ್ಳಿ ಗ್ರಾಮದ ಜ್ಯೋತಿ ಎಂಬವರು ಗಾಯಗೊಂಡಿದ್ದಾರೆ.
ತಕ್ಷಣ ದಾರಿ ಹೋಕರು ತುರ್ತು ಆಂಬುಲೆನ್ಸ್ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಹಲವು ಅರ್ಧ ತಾಸುಗಳು ಆಂಬುಲೆನ್ಸ್ ಸಿಗದೆ ಪರದಾಡಿದ್ದಾರೆ
ಬಳಿಕ ಪ್ರಾಧಿಕಾರದ ಆಂಬುಲೆನ್ಸ್ ಸೇರಿ ಗಾಯಾಳುಗಳನ್ನು ಖಾಸಗಿ ವಾಹನಗಳ ಮುಖಾಂತರ ಮಹದೇಶ್ವರಬೆಟ್ಟ ಕೊಳ್ಳೇಗಾಲ ಆಸ್ಪತ್ರೆ ಗೆ ಚಿಕಿತ್ಸೆ ರವಾನಿಸಲಾಗಿದೆ.