Chamarajanagar | ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ

ಚಾಮರಾಜನಗರ : ತಾಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಗಂಡು ಚಿರತೆ ಸೆರೆಯಾಗಿದೆ.
ಚಾಮರಾಜನಗರ ತಾಲ್ಲೂಕಿನ ಬೇಡರಪುರ ಗ್ರಾಮದ ಮಲ್ಲಣ್ಣ ಎಂಬುವವರ ಕಬ್ಬಿನ ಗದ್ದೆಯಲ್ಲಿ ಕಳೆದ ಹದಿನೈದು ದಿನಗಳ ಹಿಂದೆ ಬಿಆರ್ಟಿ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಸುಮಾರು 4-5 ವರ್ಷದ ಗಂಡು ಚಿರತೆಯೊಂದು ಸೆರೆಯಾಗಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಚಿರತೆ ಸೆರೆಯಾಗಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ತೆರಳಿ ಚಿರತೆಯನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳದಲ್ಲಿ ಬಿಡಲಾಗಿದೆ.
ತಿಂಗಳಲ್ಲಿ ಎರಡು ಚಿರತೆ ಸೆರೆ: ಕಳೆದ ಒಂದು ತಿಂಗಳ ಹಿಂದೆ ಇದೇ ಜಮೀನಿನಲ್ಲಿ ಹೆಣ್ಣು ಚಿರತೆಯನ್ನು ಸೆರೆ ಹಿಡಿಯಲಾಗಿತ್ತು. ಈಗ ಅದೇ ಜಾಗದಲ್ಲಿ ಮತ್ತೊಂದು ಗಂಡು ಚಿರತೆಯನ್ನು ಸೆರೆ ಹಿಡಿದು ರಕ್ಷಣೆ ಮಾಡಲಾಗಿದೆ ಎಂದು ಹಿರಿಯ ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
Next Story




