ಗುಂಡ್ಲುಪೇಟೆ | ಬೈಕಿಗೆ -ಕಾರು ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಚಾಮರಾಜನಗರ: ಬೈಕ್ ಹಾಗೂ ಕಾರು ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗೇಟ್ ಬಳಿ ನಡೆದಿದೆ.
ಮೃತರನ್ನು ಹಾಸನ ಜಿಲ್ಲೆಯ ಸಕಲೇಶಪುರದ ಮಂಜುನಾಥ್(32) ಎಂದು ಗುರುತಿಸಲಾಗಿದೆ.
ಮಂಜುನಾಥ್ ಬೈಕಿನಲ್ಲಿ ಚಾಮರಾಜನಗರ ಕಡೆಯಿಂದ ಬರುತ್ತಿದ್ದ ವೇಳೆ ಗುಂಡ್ಲುಪೇಟೆಯಿಂದ ತೆರಳುತಿದ್ದ ಕಾರು ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಗೆ ಕಾರು ಚಾಲಕನ ಅತಿವೇಗವೇ ಕಾರಣ ಎಂದು ಪೊಲೀಸರು ಮಾಹಿತಿ ನೀಡಿದ್ದು, ಕಾರು ಢಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಮಂಜುನಾಥ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮಾಹಿತಿ ಅರಿತ ತೆರಕಣಾಂಬಿ ಠಾಣೆ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಬೈಕ್ ಹಾಗೂ ಕಾರನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story