Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕ ಬಳ್ಳಾಪುರ
  4. ಕೋಲಾರ–ಚಿಕ್ಕಬಳ್ಳಾಪುರ ಶಾಸಕರ ಸಭೆ: ಸಚಿವ...

ಕೋಲಾರ–ಚಿಕ್ಕಬಳ್ಳಾಪುರ ಶಾಸಕರ ಸಭೆ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ4 Aug 2026 6:39 PM IST
share
ಕೋಲಾರ–ಚಿಕ್ಕಬಳ್ಳಾಪುರ ಶಾಸಕರ ಸಭೆ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ
► 7 ಕಾಂಗ್ರೆಸ್ ಶಾಸಕರಲ್ಲಿ ಒಬ್ಬರಿಗೂ ಅವಕಾಶ ನೀಡದಿರುವುದು ತೀವ್ರ ಅನ್ಯಾಯ : ಎಸ್.ಎನ್.ನಾರಾಯಣಸ್ವಾಮಿ ► ಕೆಲವರಿಗೆ 2-3 ಬಾರಿ ಅವಕಾಶ ನೀಡಿ ನಮ್ಮ ಜಿಲ್ಲೆಯನ್ನು ಮಾತ್ರ ಕಡೆಗಣಿಸಿರುವುದು ಯಾವ ನ್ಯಾಯ? : ಎಂ.ಸಿ.ಸುಧಾಕರ್

ಕೋಲಾರ : ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಕಾಂಗ್ರೆಸ್‌ನ ಹಿರಿಯ ನಾಯಕರು ಹಾಗೂ ಶಾಸಕರು ಬೆಂಗಳೂರಿನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಮಾಜಿ ಸಚಿವ ಹಾಗೂ ಚಿಂತಾಮಣಿ ಶಾಸಕ ಎಂ.ಸಿ.ಸುಧಾಕರ್, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಅವಿಭಜಿತ ಕೋಲಾರ ಜಿಲ್ಲೆ ಹಲವು ದಶಕಗಳಿಂದ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು, ಪಕ್ಷ ಸಂಕಷ್ಟದಲ್ಲಿದ್ದಾಗಲೆಲ್ಲಾ ಜಿಲ್ಲೆಯ ನಾಯಕರು ಹಾಗೂ ಕಾರ್ಯಕರ್ತರು ಪಕ್ಷವನ್ನು ಪುನರ್‌ ಸಂಘಟಿಸಿ ಅಧಿಕಾರಕ್ಕೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಪುನಶ್ಚೇತನಕ್ಕೆ ಜಿಲ್ಲೆಯ ನಾಯಕತ್ವವೇ ಕಾರಣವಾಗಿದೆ. ಆದರೂ ಸಚಿವ ಸಂಪುಟದಲ್ಲಿ ಜಿಲ್ಲೆಯ ಏಳು ಕಾಂಗ್ರೆಸ್ ಶಾಸಕರಲ್ಲಿ ಒಬ್ಬರಿಗೂ ಅವಕಾಶ ನೀಡದಿರುವುದು ತೀವ್ರ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ತಾವು 1999ರಿಂದ ಕಾಂಗ್ರೆಸ್ ಪಕ್ಷಕ್ಕಾಗಿ ನಿರಂತರವಾಗಿ ದುಡಿದಿದ್ದು, ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಪಕ್ಷಕ್ಕೆ ಎಂದಿಗೂ ದ್ರೋಹ ಮಾಡಿಲ್ಲ. ಬಿಜೆಪಿ ಸೇರಿದಂತೆ ಇತರ ಪಕ್ಷಗಳಿಂದ ಹಲವು ಬಾರಿ ಆಹ್ವಾನ ಬಂದರೂ ಕಾಂಗ್ರೆಸ್ ತೊರೆಯಲಿಲ್ಲ. ಇಂತಹ ನಿಷ್ಠಾವಂತ ನಾಯಕರಿಗೆ ಸಚಿವ ಸ್ಥಾನ ನಿರಾಕರಿಸಿರುವುದು ಕಾರ್ಯಕರ್ತರ ಮನೋಭಾವಕ್ಕೆ ಧಕ್ಕೆ ತಂದಿದೆ ಎಂದು ಹೇಳಿದರು.

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಭಿವೃದ್ಧಿಗೆ ಸಚಿವ ಸ್ಥಾನ ಅತ್ಯಗತ್ಯವಾಗಿತ್ತು. ಜಿಲ್ಲೆಯ ಜನರ ಸಮಸ್ಯೆಗಳನ್ನು ಸರಕಾರದ ಮಟ್ಟದಲ್ಲಿ ಸಮರ್ಥವಾಗಿ ಪ್ರತಿನಿಧಿಸಲು ಅವಕಾಶ ಸಿಗಬೇಕಿತ್ತು. ಆದರೆ ಹೈಕಮಾಂಡ್ ಎರಡೂ ಜಿಲ್ಲೆಗಳನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಇದರ ಪರಿಣಾಮವಾಗಿ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಉತ್ತರ ನೀಡುವುದೇ ಕಷ್ಟವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಮುಂದೆ ಮತ್ತೊಮ್ಮೆ ಜಿಲ್ಲೆಯ ಪರವಾಗಿ ನ್ಯಾಯ ಕೇಳಲು ತೀರ್ಮಾನಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಸಚಿವ ಸ್ಥಾನ ವಂಚಿತ ಶಾಸಕರೊಂದಿಗೆ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಚರ್ಚಿಸಲಾಗುವುದು ಎಂದು ಎಸ್.ಎನ್. ನಾರಾಯಣಸ್ವಾಮಿ ತಿಳಿಸಿದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಹಾಗೂ ಚಿಂತಾಮಣಿ ಶಾಸಕ ಎಂ.ಸಿ.ಸುಧಾಕರ್, ಸಂಪುಟದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡದಿರುವುದು ಕಾರ್ಯಕರ್ತರಿಗೆ ಮತ್ತು ನಾಯಕರಿಗೆ ತೀವ್ರ ನಿರಾಸೆ ಉಂಟುಮಾಡಿದೆ. ಆದರೆ ಈ ವಿಚಾರವಾಗಿ ಯಾವುದೇ ಶಾಸಕರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. "ನಾವು ಮಂತ್ರಿಗಳಾಗಿ ಆಯ್ಕೆಯಾಗಿಲ್ಲ; ಜನರಿಂದ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಆದ್ದರಿಂದ ಜನಸೇವೆ ಮುಂದುವರಿಸುತ್ತೇವೆ" ಎಂದು ಸ್ಪಷ್ಟಪಡಿಸಿದರು.

ಶಿಡ್ಲಘಟ್ಟದಲ್ಲಿ ಸುಮಾರು 200 ಕೋಟಿ ವೆಚ್ಚದ ಹೈಟೆಕ್ ಸಿಲ್ಕ್ ಮಾರ್ಕೆಟ್, ಚಿಕ್ಕಬಳ್ಳಾಪುರದ ಅಂತರರಾಷ್ಟ್ರೀಯ ಹೂವಿನ ಮಾರುಕಟ್ಟೆ, ನಂದಿ ಬೆಟ್ಟದ ರೋಪ್‌ವೇ, ಕೆ.ಸಿ. ವ್ಯಾಲಿ, ಎಚ್.ಎನ್. ವ್ಯಾಲಿ ಹಾಗೂ ಎತ್ತಿನಹೊಳೆ ಯೋಜನೆಗಳಂತಹ ಮಹತ್ವದ ಅಭಿವೃದ್ಧಿ ಯೋಜನೆಗಳನ್ನು ಸ್ಥಳೀಯ ನಾಯಕರು ಶ್ರಮಪಟ್ಟು ತಂದಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ಹಾಗೂ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತರಾಗಿದ್ದು, ಸ್ಥಳೀಯ ಅಭಿವೃದ್ಧಿಗೆ ನಿರೀಕ್ಷಿತ ಮಟ್ಟದ ಕೊಡುಗೆ ನೀಡುತ್ತಿಲ್ಲ ಎಂದು ಟೀಕಿಸಿದರು.

ಕೆಲವರು ಬೇರೆ ಜಿಲ್ಲೆಗಳಿಗೆ ತೆರಳಿದ್ದರೂ ಇನ್ನೂ ಕೋಲಾರ-ಚಿಕ್ಕಬಳ್ಳಾಪುರ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಸರಿಯಲ್ಲ. ಪಕ್ಷದಲ್ಲಿ ಎರಡೂವರೆ ವರ್ಷದ ಸಚಿವ ಸ್ಥಾನ ಬದಲಾವಣೆಯ ನಿಯಮ ಎಲ್ಲರಿಗೂ ಸಮಾನವಾಗಿ ಅನ್ವಯಿಸಿದ್ದರೆ ಯಾವುದೇ ಅಸಮಾಧಾನ ಇರಲಿಲ್ಲ. ಆದರೆ ಕೆಲವರಿಗೆ ಎರಡೆರಡು ಹಾಗೂ ಮೂರು ಬಾರಿ ಅವಕಾಶ ನೀಡಿ ನಮ್ಮ ಜಿಲ್ಲೆಯನ್ನು ಮಾತ್ರ ಕಡೆಗಣಿಸಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

"ನಮ್ಮಿಂದ ಯಾವುದೇ ಭ್ರಷ್ಟಾಚಾರ ನಡೆದಿದೆಯೇ? ಇಲಾಖೆಯನ್ನು ಸಮರ್ಥವಾಗಿ ನಿರ್ವಹಿಸಿಲ್ಲವೇ? ಹಾಗಿದ್ದರೆ ಅದನ್ನು ಹೈಕಮಾಂಡ್ ಬಹಿರಂಗವಾಗಿ ಹೇಳಬೇಕು. ಇಲ್ಲವಾದರೆ ನಮ್ಮನ್ನು ಕಡೆಗಣಿಸಿರುವುದಕ್ಕೆ ಕಾರಣವನ್ನು ಸ್ಪಷ್ಟಪಡಿಸಬೇಕು" ಎಂದು ಸುಧಾಕರ್ ಆಗ್ರಹಿಸಿದರು.

ಕೆಲವು ಸಣ್ಣ ಜಿಲ್ಲೆಗಳಿಗೆ ಎರಡು ಮತ್ತು ಮೂರು ಸಚಿವ ಸ್ಥಾನಗಳನ್ನು ನೀಡಲಾಗಿದೆ. ಆದರೆ ಏಳು ಕಾಂಗ್ರೆಸ್ ಶಾಸಕರಿರುವ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಒಂದೇ ಒಂದು ಸ್ಥಾನವೂ ನೀಡಿಲ್ಲ. ಈ ನಿರ್ಧಾರದಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರನ್ನು ಉತ್ಸಾಹದಿಂದ ಸಂಘಟಿಸುವುದು ಕಷ್ಟವಾಗಲಿದೆ ಎಂಬ ಆತಂಕವನ್ನು ನಾಯಕರು ವ್ಯಕ್ತಪಡಿಸಿದರು.

Tags

KolarChikkaballapurCabinet Expansion
share
ವಾರ್ತಾಭಾರತಿ
ವಾರ್ತಾಭಾರತಿ
Next Story
X