ಚಿಕ್ಕಮಗಳೂರು | ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು; ಮುಂದುವರೆದ ಶೋಧ ಕಾರ್ಯ

ಜಲಾಲ್(25)
ಚಿಕ್ಕಮಗಳೂರು : ಭದ್ರಾ ನದಿಗೆ ಈಜಲು ಸ್ನೇಹಿತರೊಂದಿಗೆ ತರಳಿದ್ದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ರವಿವಾರ(ಫೆ.16) ನಡೆದಿದೆ.
ಜಲಾಲ್(25) ನೀರುಪಾಲಾದ ಯುವಕ ಎಂದು ತಿಳಿದು ಬಂದಿದೆ. ಮೂವರು ಸ್ನೇಹಿತರು ಬಾಳೆಹೊನ್ನೂರಿನ ಭದ್ರಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿ ನೀರು ಪಾಲಾಗಿದ್ದಾನೆ. ಸ್ನೇಹಿತರು ಆತನನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.
ಘಟನೆ ಸಂಬಂಧ ಸ್ಥಳಕ್ಕಾಗಮಿಸಿದ ಪೊಲೀಸರು , ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಜಲಾಲ್ ದೇಹಕ್ಕಾಗಿ ಶೋಧಕಾರ್ಯಾಚರಣೆ ನಡೆಸಿದರು. ಆದರೆ ನಿನ್ನೆ(ಫೆ.16) ಸಂಜೆವರೆಗೂ ದೇಹ ಪತ್ತೆಯಾಗದೆ ಹುಡುಕಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.
ಇಂದು(ಫೆ.17) ಮುಳುಗು ತಜ್ಞರು ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ ಮುಂದುವರಿದಿದೆ.
Next Story





