Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು: ಕಾಡುಕೋಣ ಬೇಟೆ; ಆರು...

ಚಿಕ್ಕಮಗಳೂರು: ಕಾಡುಕೋಣ ಬೇಟೆ; ಆರು ಮಂದಿಯ ಬಂಧನ, ನಾಲ್ವರು ಪರಾರಿ

ವಾರ್ತಾಭಾರತಿವಾರ್ತಾಭಾರತಿ8 Nov 2025 2:02 PM IST
share
ಚಿಕ್ಕಮಗಳೂರು: ಕಾಡುಕೋಣ ಬೇಟೆ; ಆರು ಮಂದಿಯ ಬಂಧನ, ನಾಲ್ವರು ಪರಾರಿ

ಚಿಕ್ಕಮಗಳೂರು: ಕಾಫಿ ಎಸ್ಟೇಟ್ ಒಂದರಲ್ಲಿ ಮಾಂಸಕ್ಕಾಗಿ ಕಾಡುಕೋಣವನ್ನು ಶಿಕಾರಿ ಮಾಡಿದ್ದ ಆರೋಪದ ಮೇಲೆ ಎಸ್ಟೇಟ್ ಮ್ಯಾನೇಜರ್ ಸೇರಿ ಆರು ಮಂದಿಯನ್ನು ಬಂಧಿಸಿದ್ದು, ಎಸ್ಟೇಟ್ ಮಾಲೀಕ ಸೇರಿ ಇನ್ನೂ ನಾಲ್ಕು ಮಂದಿ ಪರಾರಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದಲ್ಲಿ ಶುಕ್ರವಾರ ನಡೆದಿರುವ ಬಗ್ಗೆ ವರದಿಯಾಗಿದೆ.

ಆರೋಪಿಗಳನ್ನು ಕಲ್ಮನೆ ಎಸ್ಟೇಟ್, ತೋಟದ ಫೀಲ್ಡ್ ಆಫೀಸರ್ ರವೀಶ್ ಬಿ.ಎಸ್. (35), ರೈಟರ್ ಪ್ರದೀಪ್ ದೇವಾಡಿಗ (41), ತೋಟದ ಮೇಸ್ತ್ರಿಗಳಾದ ದೇಜಪ್ಪ (46), ಸೀನ (50) ತೋಟದ ವಾಹನ ಚಾಲಕ ಮಂಜಯ್ಯ (48) ಕೂಲಿಕೆಲಸಗಾರ ಸುಂದರ(50), ಸುಂದರೇಶ್ (45), ದಿಲೀಪ್ (45) ಜೀವನ್ (42) ಕಲ್ಮನೆ ಎಸ್ಟೇಟ್ ಮಾಲೀಕ ಮಾಲೀಕ ಧೀರಜ್ (42) ಎಂದು ಗುರುತಿಸಲಾಗಿದೆ.

ಘಟನೆ ವಿವರ

ನ.7 ರಂದು ಬೆಳಿಗ್ಗೆ ಭಾರತೀಬೈಲ್ ಶಾಖೆ ವ್ಯಾಪ್ತಿಯ ಬಾಳೂರು ಗ್ರಾಮದ ಮಂಜಯ್ಯ ಎಂಬವರ ಮನೆಯಲ್ಲಿ ಕಾಡುಪ್ರಾಣಿಯೊಂದನ್ನು ಬೇಟೆಯಾಡಿ ಮಾಂಸವನ್ನು ಶೇಖರಿಸಿರುವುದಾಗಿ ಮಾಹಿತಿ ಲಭ್ಯವಾಗಿತ್ತು. ಖಚಿತ ಮಾಹಿತಿ ಮೇರೆಗೆ ಮಂಜಯ್ಯ ಅವರ ಮನೆಯನ್ನು ತಪಾಸಣೆ ಮಾಡಿದಾಗ ಒಂದು ಪಾತ್ರೆಯಲ್ಲಿ ಅರೆಬೇಯಿಸಿದ ಸುಮಾರು 1 ಕೆ.ಜಿ.ಯಷ್ಟು ಮಾಂಸವಿರುವುದು ಕಂಡುಬಂತು. ಮಾಂಸವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಯಾವುದೋ ಕಾಡುಪ್ರಾಣಿಯ ಮಾಂಸ ಇರಬಹುದೆಂದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಮಂಜಯ್ಯನನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಮೂಡಿಗೆರೆ ವಲಯ ಅರಣ್ಯಾಧಿಕಾರಿಗಳ ಕಛೇರಿಯಿಂದ ಮಾಹಿತಿ ಲಭಿಸಿದೆ.

ನಿಡುವಾಳೆ ಗ್ರಾಮದ ಕಲ್ಮನೆ ಎಸ್ಟೇಟ್ ಮಾಲೀಕರ ಡಿ.ಬಿ.ಬಿ.ಎಲ್. ಬಂದೂಕಿನಿಂದ ಜೀವನ್ ಎಂಬವರು ಕಾಡುಕೋಣವನ್ನು ಗುಂಡಿಕ್ಕಿ ಬೇಟೆಯಾಡಿದ್ದು, ಸೇಂಟ್ ಮೇರಿಸ್ ಕಲ್ಮನೆ ಎಸ್ಟೇಟ್ ಮರ್ಕಲ್ ನಲ್ಲಿ ಮಾಂಸ ಮಾಡಿ ಎಲ್ಲರೂ ಹಂಚಿಕೊಂಡಿರುವುದಾಗಿ ಮಂಜಯ್ಯ ತಿಳಿಸಿದ್ದಾನೆ. ನಂತರ ಕಲ್ಮನೆ ಎಸ್ಟೇಟ್ ಗೆ ತೆರಳಿ 6 ಆರೋಪಿಗಳನ್ನು ಇಲಾಖೆಯ ವಶಕ್ಕೆ ಪಡೆದು ವಿಚಾರಿಸಲಾಗಿದ್ದು, ಕಲ್ಮನೆ ಎಸ್ಟೇಟ್ ಮಾಲೀಕ ಧೀರಜ್ ಪ್ರಭು ಅವರ ತೋಟದ ಮಾಲೀಕತ್ವದ ಬಂದೂಕಿನಿಂದ ಬೇಟೆಯಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಆರೋಪಿಗಳು ತೋರಿಸಿದ ಮರ್ಕಲ್ ಕೆರೆಯ ಸುತ್ತ ಪರಿಶೀಲಿಸಿದಾಗ ಕೆರೆಯ ನೀರಿನಲ್ಲಿ ಕಾಡುಕೋಣದ ತಲೆಬುರುಡೆ ತೇಲುತಿರುವುದು ಕಂಡುಬಂದಿದ್ದು,ಇತರ ಅಂಗಾಂಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ತಲೆಬುರುಡೆ, ಮಂಜಯ್ಯನ ಮನೆಯಲ್ಲಿ ದೊರೆತ ಅರೆಬೇಯಿಸಿದ ಸುಮಾರು 1 ಕೆ.ಜಿ. ಕಾಡುಕೋಣದ ಮಾಂಸ ಮತ್ತು ಬೇಟೆಗೆ ಉಪಯೋಗಿಸಿದ ಡಿ.ಬಿ.ಬಿ.ಎಲ್.ಬಂದೂಕನ್ನು ವಶಪಡಿಸಲಾಗಿದೆ.

ಆರೋಪಿಗಳನ್ನು ಬಂಧಿಸಿ ವನ್ಯಪ್ರಾಣಿ ಹತ್ಯೆ ಪ್ರಕರಣ ಸಂಖ್ಯೆ:04/2025-26 ಯಡಿ ಪ್ರಕರಣ ದಾಖಲು ಮಾಡಲಾಗಿದೆ, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು ತನಿಖೆಯು ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ರ.ಸಂ 1 ರಿಂದ ಕ್ರಸಂ 6 ರವರೆಗಿನ ಆರೋಪಿಗಳನ್ನು ಬಂಧಿಸಲಾಗಿದೆ. ಕ್ರಸಂ 7ರಿಂದ ಕ್ರಸಂ 10 ರವರೆಗಿನ ಆರೋಪಿಗಳು ತಲೆಮರೆಸಿಕೊಂಡಿದ್ದು ಶೋಧ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದು ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಯಶ್‌ಪಾಲ್ ಕ್ಷೀರಸಾಗರ್, ಅರಣ್ಯ ಸಂರಕ್ಷಣಾಧಿಕಾರಿಗಳು, ರಮೇಶ್ ಬಾಬು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಆಕರ್ಷ್ ಟಿ.ಎಮ್. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳವರ ಮಾರ್ಗದರ್ಶನದಲ್ಲಿ, ಕಾರ್ಯಾಚರಣೆಯ ನೇತೃತ್ವವನ್ನು ಮಂಜುನಾಥ ಜಿ. ವಲಯ ಅರಣ್ಯಾಧಿಕಾರಿ, ಸುಹಾಸ್ ಕೆ.ಟಿ. ಉಪ ವಲಯ ಅರಣ್ಯಾಧಿಕಾರಿ, ಗಸ್ತು ಅರಣ್ಯ ಪಾಲಕರಾದ ರಘು, ಎಸ್.ಆರ್, ಉಮೇಶ್ ಎ.ಬಿ. ಲಕ್ಷ್ಮಣ್ ಬಿ.ಎಂ, ಹಾಗೂ ಸಿಬ್ಬಂದಿಗಳಾದ ಸುಮಂತ್, ನವರಾಜ್, ಸುಧೀರ್, ಕೃಷ್ಣಮೂರ್ತಿ, ಗಿರೀಶ್ ಇವರುಗಳು ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X