Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು | ಉರೂಸ್ ವೇಳೆ ಶಾಖಾದ್ರಿ...

ಚಿಕ್ಕಮಗಳೂರು | ಉರೂಸ್ ವೇಳೆ ಶಾಖಾದ್ರಿ ಧಾರ್ಮಿಕ ಆಚರಣೆಗೆ ಅವಕಾಶ ನೀಡದ ಜಿಲ್ಲಾಡಳಿತ : ಗೌಸ್ ಮೊಹಿದ್ದೀನ್ ಶಾಖಾದ್ರಿ ಆರೋಪ

ವಾರ್ತಾಭಾರತಿವಾರ್ತಾಭಾರತಿ25 March 2024 10:32 PM IST
share
ಚಿಕ್ಕಮಗಳೂರು | ಉರೂಸ್ ವೇಳೆ ಶಾಖಾದ್ರಿ ಧಾರ್ಮಿಕ ಆಚರಣೆಗೆ ಅವಕಾಶ ನೀಡದ ಜಿಲ್ಲಾಡಳಿತ : ಗೌಸ್ ಮೊಹಿದ್ದೀನ್ ಶಾಖಾದ್ರಿ ಆರೋಪ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾ ಬುಡಾನ್‌ಗಿರಿ ದರ್ಗಾದಲ್ಲಿ ನಡೆಯುವ ಉರೂಸ್ ಸಂದರ್ಭ ಶಾಖಾದ್ರಿ ಅವರಿಗೆ ದರ್ಗಾದ ಗುಹೆಯೊಳಗೆ ದಾರ್ಮಿಕ ಆಚರಣೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ ಜಿಲ್ಲಾಡಳಿತ ಇದಕ್ಕೆ ಅವಕಾಶ ನೀಡಲು ನಿರಾಕರಿಸುತ್ತಿದೆ ಎಂದು ಗೌಸ್ ಮೊಹಿದ್ದೀನ್ ಶಾಖಾದ್ರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.26ರಂದು ಬಾಬಾ ಬುಡಾನ್‌ದರ್ಗಾದಲ್ಲಿ ಪ್ರತೀ ವರ್ಷದಂತೆ ಸಂದಲ್ ಉರೂಸ್ ನಡೆಯಲಿದ್ದು, ಈ ಉರೂಸ್ ಸಂದರ್ಭ ಶಾಖಾದ್ರಿ ಅವರಿಗೆ ಗುಹೆಯೊಳಗೆ ಪ್ರವೇಶಿಸಿ ಗಂಧ ಲೇಪನದೊಂದಿಗೆ ಹಿರಿಯರ ಗೋರಿಗಳಿಗೆ ಹಸಿರು ಹೊದಿಕೆ ಹಾಕಲು ಹಾಗೂ ಧಾರ್ಮಿಕ ವಿಧಿ ಕೈಗೊಳ್ಳಲು ನ್ಯಾಯಾಲಯ ಇತ್ತೀಚೆಗೆ ಆದೇಶ ನೀಡಿದೆ. ಆದರೆ, ನ್ಯಾಯಾಲಯದ ಆದೇಶದಲ್ಲಿ ಉರೂಸ್ ವೇಳೆ ಗುಹೆಯೊಳಗೆ ಪ್ರವೇಶ ನೀಡುವುದಾಗಿ ತಿಳಿಸಿದ್ದರೂ ಮಾ.26ರಂದು ನಡೆಯುವ ಧಾರ್ಮಿಕ ಆಚರಣೆ ನಡೆಸಲು ಜಿಲ್ಲಾಡಳಿತ ಅವಕಾಶ ನೀಡಿಲ್ಲ ಎಂದು ಆರೋಪಿಸಿದರು.

ಉರೂಸ್ ಆಚರಣೆ ಸಂಬಂಧ ಜನವರಿ 2024ರಂದು ಸುಪ್ರೀಂ ಕೋಟ್‌ನಲ್ಲಿ ದಾವೆ ಹೂಡಿದ್ದು, ಮಾ.15ಕ್ಕೆ ಈ ಸಂಬಂಧ ನ್ಯಾಯಾಲಯ ಆದೇಶ ನೀಡಿದೆ. ಆದೇಶದಲ್ಲಿ ಶಾಖಾದ್ರಿ ಅವರಿಗೆ ಗುಹೆ ಪ್ರವೇಶಕ್ಕೆ ಹಾಗೂ ಧಾರ್ಮಿಕ ವಿಧಿಗಳನ್ನು ಕೈಗೊಳ್ಳಲು ಅವಕಾಶ ನೀಡಬೇಕು ಎಂದು ಆದೇಶಿಸಿದೆ. ಈ ಆದೇಶವನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಆದೇಶದಿಂದ ಮಾ.26ರಂದು ನಡೆಯುವ ಉರೂಸ್ ವೇಳೆ ದರ್ಗಾದ ಗುಹೆಯೊಳಗೆ ಪ್ರವೇಶ ಹಾಗೂ ಧಾರ್ಮಿಕ ವಿಧಿಗಳನ್ನು ಕೈಗೊಳ್ಳಲು ಅವಕಾಶ ನೀಡಬೇಕೆಂದು ಕೇಳಿದ್ದೆವು. ಇದಕ್ಕೆ ಜಿಲ್ಲಾಡಳಿತ ಸರಿಯಾದ ಪ್ರತಿಕ್ರಿಯೆ ಸಿಗುತ್ತಿಲ್ಲ. ದರ್ಗಾದ ಮುಜಾವರ್ ಹಿಂಬದಿಯಲ್ಲಿ ನಿಂತು ಶಾಖಾದ್ರಿ ಪ್ರಾರ್ಥನೆ ಮಾಡಲು ನ್ಯಾಯಾಲಯದ ಆದೇಶದಲ್ಲಿ ಉಲ್ಲೇಖಿಸಿದೆ. ಗುಹೆಯೊಳಗೆ ಗಂಧ, ಹಸಿರು ಹೊದಿಕೆ ಹಾಕುವಂತಹ ಧಾರ್ಮಿಕ ವಿಧಿಗಳನ್ನು ಕೈಗೊಳ್ಳಲು ಆದೇಶಿಸಿಲ್ಲ ಎಂದು ಜಿಲ್ಲಾಧಿಕಾರಿ ಹೇಳುತ್ತಿದ್ದಾರೆ ಎಂದು ದೂರಿದರು.

ಮಾ.25ರಂದು ಮಂಗಳವಾರ ಉರೂಸ್ ನಡೆಯಲಿದ್ದು, ಈ ವೇಳೆ ನ್ಯಾಯಾಲಯದ ಆದೇಶದಂತೆ ಉರೂಸ್ ಸಂಪ್ರದಾಯದಂತೆ ಗುಹೆಯೊಳಗೆ ಗಂಧ ಲೇಪನ ಹಾಗೂ ಹಸಿರು ಬಟ್ಟೆ ಹಾಕಲು ಶಾಖಾದ್ರಿಯಾದ ತನಗೆ ಜಿಲ್ಲಾಡಳಿತ ಅವಕಾಶ ನೀಡಬೇಕು. ತಪ್ಪಿದಲ್ಲಿ ಉರೂಸ್ ಬಹಿಷ್ಕರಿಸುವ ಮೂಲಕ ಸರಕಾರ, ಜಿಲ್ಲಾಡಳಿತದ ನಡೆಯನ್ನು ಖಂಡಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X