Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು | ಮಂಗನ ಕಾಯಿಲೆಗೆ ವೃದ್ದೆ...

ಚಿಕ್ಕಮಗಳೂರು | ಮಂಗನ ಕಾಯಿಲೆಗೆ ವೃದ್ದೆ ಬಲಿ : 4ಕ್ಕೇರಿದ ಸೋಂಕಿತರ ಸಾವಿನ ಸಂಖ್ಯೆ

ವಾರ್ತಾಭಾರತಿವಾರ್ತಾಭಾರತಿ26 March 2024 4:31 PM IST
share
ಚಿಕ್ಕಮಗಳೂರು | ಮಂಗನ ಕಾಯಿಲೆಗೆ ವೃದ್ದೆ ಬಲಿ : 4ಕ್ಕೇರಿದ ಸೋಂಕಿತರ ಸಾವಿನ ಸಂಖ್ಯೆ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಮಂಗನಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಕೆಲ ದಿನಗಳ ಹಿಂದೆ ಮಂಗನಕಾಯಿಲೆಗೆ ತುತ್ತಾಗಿದ್ದ ವೃದ್ದೆಯೊಬ್ಬರು ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಯಿಂದಾಗಿ ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆಯಿಂದಾಗಿ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ.

ಮೃತರನ್ನು ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನಾ(68) ಎಂದು ಗುರುತಿಸಲಾಗಿದೆ. ರತ್ನಾ ಅವರಿಗೆ ಕೆಲ ದಿನಗಳ ಹಿಂದೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ವೇಳೆ ಅವರಲ್ಲಿ ಮಂಗನಕಾಯಿಲೆ ಇರುವ ಲಕ್ಷಣ ಕಂಡು ಬಂದಿತ್ತು. ಕೂಡಲೇ ವೈದ್ಯರು ರತ್ನಾ ಅವರ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಪರೀಕ್ಷಾ ವರದಿಯಲ್ಲಿ ರತ್ನಾ ಅವರಿಗೆ ಮಂಗನಕಾಯಿಲೆ ಇರುವುದು ದೃಢಪಟ್ಟಿದ್ದರಿಂದ ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಕಾಯಿಲೆಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ವೃದ್ಧೆ ರತ್ನಾ ಚಿಕಿತ್ಸೆ ಫಲಕಾರಿಯಾಗದೇ ಕಳೆದ ಮಂಗಳವಾರ ಮಧ್ಯರಾತ್ರಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಸದ್ಯ ಜಿಲ್ಲೆಯಲ್ಲಿ 11 ಮಂದಿಯಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡಿದ್ದು, ಎಲ್ಲ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಎಫ್‍ಡಿ ಸೋಂಕಿತ 11 ಮಂದಿ ಚಿಕಿತ್ಸೆಯಿಂದಾಗಿ ಚೇತರಿಸಿಕೊಂಡಿದ್ದಾರೆ. ಸೋಂಕು ಹೆಚ್ಚು ಕಂಡು ಬಂದಿರುವ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಸೋಂಕು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಕಾಡಿಗೆ ಹೋಗುವ ಸಂದರ್ಭದಲ್ಲಿ ಡಿಎಂಪಿ ತೈಲ ಮೈಗೆ ಹಚ್ಚಿಕೊಂಡು ತೆರಳುವಂತೆ ಸೂಚಿಸುತ್ತಿದ್ದಾರೆ. ಈ ಭಾಗದ ಎಸ್ಟೇಟ್ ಕಾರ್ಮಿಕರಿಗೆ ಡಿಎಂಪಿ ತೈಲವನ್ನೂ ಪೂರೈಕೆ ಮಾಡಲಾಗಿದೆ, ಅರಣ್ಯ ಇಲಾಖೆ ಸಿಬ್ಬಂದಿಗೂ ಡಿಎಂಪಿ ತೈಲ ಪೂರೈಕೆ ಮಾಡಲಾಗಿದೆ.

ಮಲೆನಾಡು ಭಾಗದಲ್ಲಿ ಮಂಗಗಳು ಸತ್ತಿರುವುದು ಕಂಡು ಬಂದಲ್ಲಿ ಆರೋಗ್ಯ ಇಲಾಖೆ ಅಥವಾ ಪಶು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುವಂತೆಯೂ ಅಧಿಕಾರಿಗಳು ಗ್ರಾಮಸ್ಥರಿಗೆ ಸೂಚಿಸಿದ್ದು, ಸತ್ತ ಮಂಗಗಳ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಕೆಎಫ್‍ಡಿ ಸೋಂಕು ಇರುವುದನ್ನು ಪತ್ತೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags

Chikmagalurmonkey diseaseಚಿಕ್ಕಮಗಳೂರುಮಂಗನ ಕಾಯಿಲೆ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X