Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರಿನಲ್ಲಿ ಕ್ಷೀಣಿಸಿದ ಮಳೆ;...

ಚಿಕ್ಕಮಗಳೂರಿನಲ್ಲಿ ಕ್ಷೀಣಿಸಿದ ಮಳೆ; ಹೆಚ್ಚಿದ ಬಿರುಗಾಳಿ ಆರ್ಭಟ

ತುಂಬಿ ಹರಿಯುತ್ತಿರುವ ನದಿಗಳು; ತೋಟ, ಹೊಲಗಳು ಜಲಾವೃತ

ವಾರ್ತಾಭಾರತಿವಾರ್ತಾಭಾರತಿ27 July 2024 10:55 PM IST
share
ಚಿಕ್ಕಮಗಳೂರಿನಲ್ಲಿ ಕ್ಷೀಣಿಸಿದ ಮಳೆ; ಹೆಚ್ಚಿದ ಬಿರುಗಾಳಿ ಆರ್ಭಟ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಶನಿವಾರ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ, ಆದರೆ ಬಿರುಗಾಳಿಯ ಆರ್ಭಟ ಮತ್ತಷ್ಟು ಬಿರುಸುಗೊಂಡಿದ್ದು, ಮರಗಳು, ವಿದ್ಯುತ್ ಕಂಬಗಳು ಧರಾಶಾಹಿಯಾಗುವಂತಹ ಘಟನೆಗಳು ಮುಂದುವರಿದಿದೆ. ಮಲೆನಾಡು ಭಾಗದಲ್ಲಿ ಸುರಿದ ಭಾರೀ ಮಳೆ ಪರಿಣಾಮ ಮಲೆನಾಡಿನ ಪ್ರಮುಖ ನದಿಗಳು ಅಪಾಯದ ಮಟ್ಟದಲ್ಲೇ ಹರಿಯುತ್ತಿದ್ದು, ಅಲ್ಲಲ್ಲಿ ನದಿಗಳ ನೆರೆ ನೀರು ನದಿ ಪಾತ್ರದ ಹೊಲ ಗದ್ದೆಗಳಿಗೆ ನುಗ್ಗಿ ಅಪಾರ ಹಾನಿ ಸಂಭವಿಸಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ವಿದ್ಯುತ್ ಕಡಿತಗೊಂಡಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಶನಿವಾರ ಮಳೆಯ ತೀವ್ರತೆ ಕಡಿಮೆಯಾಗಿದ್ದರೂ ಅಲ್ಲಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯೊಂದಿಗೆ ಭಾರೀ ಗಾಳಿ ಬೀಸುತ್ತಿದೆ. ಗಾಳಿಯ ತೀವ್ರತೆಗೆ ಅಲ್ಲಲ್ಲಿ ಮರಗಳು ಧರೆಗುರುಳಿವೆ. ಶುಕ್ರವಾರ ರಾತ್ರಿ ಚಾರ್ಮಾಡಿ ಘಾಟಿ ರಸ್ತೆಯ 10ನೇ ತಿರುವಿನಲ್ಲಿ ಮರಬಿದ್ದು ಅಲ್ಪಪ್ರಮಾಣದಲ್ಲಿ ಧರೆಕುಸಿದಿದೆ. ಪರಿಣಾಮ ರಾತ್ರಿ ಸುಮಾರು 3ಗಂಟೆಗಳ ಕಾಲ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದ ಕೊಟ್ಟಿಗೆಹಾರ ಚೆಕ್‍ಪೋಸ್ಟ್‍ನಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ಮರ ಮತ್ತು ಮಣ್ಣು ತೆರವುಗೊಳಿಸಿದ ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಲಾಯಿತು. ಮಳೆ ಮುಂದುವರಿದರೆ ಚಾರ್ಮಾಡಿಘಾಟಿ ರಸ್ತೆಯಲ್ಲಿ ಧರೆಕುಸಿಯುವ ಆತಂಕ ಎದುರಾಗಿದೆ.

ಮಲೆನಾಡಿನಲ್ಲಿ ಮರ ಬಿದ್ದು ಅನೇಕ ಮನೆಗಳಿಗೆ ಹಾನಿಯಾಗಿದೆ. ಮಳೆಯಿಂದಾಗಿ ರಸ್ತೆಗಳಿಗೂ ಹಾನಿಯಾಗಿದ್ದು, ಕೊಪ್ಪ-ನಾರ್ವೆ-ಜಯಪುರ ರಸ್ತೆಯಲ್ಲಿ ಭೂಕುಸಿತದಿಂದಾಗಿ ವಾಹನ ಸಂಚಾರ ಕಡಿತಗೊಂಡಿದೆ. ಪರ್ಯಾಯ ರಸ್ತೆ ಮೂಲಕ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಭದ್ರಾ ನದಿಯಲ್ಲಿ ನಾಲ್ಕು ಬಾರಿ ಮುಳಿಗಿದ್ದ ಹೆಬ್ಬಾಳೆ ಸೇತುವೆ ಶನಿವಾರ ಮಳೆ ಕಡಿಮೆಯಾದ ಪರಿಣಾಮ ಹೆಬ್ಬಾಳೆ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ. ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ಭಾರೀ ಮಳೆ ಪರಿಣಾಮ ಜಿಲ್ಲೆಯ ಐತಿಹಾಸಿಕ ಕೆರೆಗಳಾದ ಮದಗದ ಕೆರೆ ಮತ್ತು ಅಯ್ಯನ ಕೆರೆಗಳು ತುಂಬಿದ್ದು, ಕೋಡಿ ಬಿದ್ದಿವೆ. ಕೋಡಿ ಬಿದ್ದ ಕೆರೆ ನೀರು ನಾಲೆಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿದ್ದು, ಈ ಪ್ರದೇಶದಲ್ಲಿನ ಜಮೀನುಗಳಿಗೆ ನೀರು ನುಗ್ಗಿ ಅಡಿಕೆ ತೋಟ, ರೈತರ ಜಮೀನುಗಳು ಜಲಾವೃತಗೊಂಡಿದೆ. ನದಿಪಾತ್ರದಲ್ಲಿ ಮತ್ತು ಕೆರೆ ಕೋಡಿ ಬಿದ್ದ ನಾಲಾ ಪ್ರದೇಶದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ತರೆಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ತರೀಕೆರೆ ತಾಲೂಕಿನಲ್ಲಿನ ಕಲ್ಲತ್ತಗಿರಿ ಜಲಪಾತ ಉಕ್ಕಿ ಹರಿಯುತ್ತಿದೆ. ಜಲಪಾತದ ನೀರಿನಿಂದ ತರೀಕೆರೆ ಪಟ್ಟಣದ ಕೆರೆಗಳು ತುಂಬಿ ಹರಿಯುತ್ತಿವೆ. ಜಂಬದಳ್ಳ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದ್ದು, ಕೆರೆಪಾತ್ರದ ಅಡಿಕೆ ತೋಟ ಮತ್ತು ಜಮೀನುಗಳಿಗೆ ನೀರು ನುಗ್ಗಿದೆ.

ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಪ್ರಮಾಣ ಮಳೆಯಾದ ಪರಿಣಾಮ ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಹೇಮಾವತಿ ನದಿಯ ನೆರೆ ನೀರು ಅಕ್ಕಪಕ್ಕದ ಅಡಿಕೆ, ಕಾಫಿ ತೋಟ, ಶುಂಠಿ ಗದ್ದೆಗಳಿಗೆ ನುಗ್ಗಿ ಬೆಳೆಗಳು ಜಲಾವೃತಗೊಂಡಿವೆ. ಭದ್ರಾನದಿ ಉಕ್ಕಿ ಹರಿದಿದ್ದು ಬಾಳೆಹೊನ್ನೂರು, ಕೊಟ್ಟಿಗೆಹಾರ, ಕಳಸ ಸಂಪರ್ಕಿಸುವ ರಾಜ್ಯ ಹೆದ್ದಾರಿ ಜಲಾವೃತಗೊಂಡಿದೆ. ನಿರಂತರ ಮಳೆಯಿಂದ ಮಲೆನಾಡಿನ ಜನರು ರೋಸಿ ಹೋಗಿದ್ದಾರೆ. ಜನಜೀವನ ಅಸ್ತವ್ಯಸ್ತವಾಗಿದೆ.

ಇನ್ನು ಭಾರೀ ಗಾಳಿ ಪರಿಣಾಮ ಮಲೆನಾಡಿನಾದ್ಯಂತ ಮರಗಳು ಧರೆಗುರುಳುತ್ತಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಸಂಪರ್ಕದ ರಸ್ತೆಯಲ್ಲಿ ಶನಿವಾರ ಭಾರೀ ಗಾಳಿಗೆ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸುಮಾರು 2 ಗಂಟೆಗಳ ಕಾಲ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ಪರಿಣಾಮ ವಿದ್ಯುತ ಸಂಪರ್ಕ ಕಡಿತಗೊಂಡು ಗ್ರಾಮೀಣ ಪ್ರದೇಶದ ಜನರು ಕತ್ತಲೆಯಲ್ಲಿ ದಿನದೂಡುವಂತಾಗಿದೆ.

ಮಳೆ, ಗಾಳಿಯ ಆರ್ಭಟಕ್ಕೆ ಕಳೆದೊಂದು ವಾರದಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ. ಅಲ್ಲೆಂದರಲ್ಲಿ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ವಿದ್ಯುತ್ ಸಂಪರ್ಕ ಸರಿಪಡಿಸುವುದು ಮೆಸ್ಕಾಂ ಇಲಾಖೆಗೆ ಸವಾಲಾಗಿ ಪರಿಣಾಮಿಸಿದೆ. ಮೆಸ್ಕಾಂ ಸಿಬ್ಬಂದಿ ಪ್ರಾಣವನ್ನು ಪಣಕ್ಕಿಟ್ಟು ದುರಸ್ತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ವಿದ್ಯುತ್ ಮಾರ್ಗ ಸರಿಪಡಿಸಿದರೂ ಭಾರೀ ಗಾಳಿಯಿಂದಾಗಿ ಮರಗಳು ಉರುಳಿ ಮತ್ತೆ ಮತ್ತೆ ವಿದ್ಯುತ್ ಮಾರ್ಗಗಳಿಗೆ ಹಾನಿಯಾಗುತ್ತಿದೆ. ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಗಡಿಗೇಶ್ವರ ಬಳಿ ಹೊಳೆಯಲ್ಲಿ ಮುಳುಗಿದ್ದ ವಿದ್ಯುತ್ ತಂತಿಗಳನ್ನು ಪ್ರಾಣದ ಹಂಗು ತೊರೆದು ಜೆ.ಇ.ಗಣೇಶ್, ಕಾಂತರಾಜು, ಶಿವಕುಮಾರ್ ತೆಪ್ಪದಲ್ಲಿ ತೆರಳಿ ದುರಸ್ತಿ ಮಾಡಿದ್ದು, ಅಧಿಕಾರಿ, ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X