Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. "ಕೇಸರಿ ಶಾಲು ಹಾಕಿಕೊಂಡಿರುವುದು ನನ್ನ...

"ಕೇಸರಿ ಶಾಲು ಹಾಕಿಕೊಂಡಿರುವುದು ನನ್ನ ಧರ್ಮಕ್ಕಾಗಿ": ಮುತಾಲಿಕ್ ಜೊತೆ ವೇದಿಕೆ ಹಂಚಿಕೊಂಡ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ

ಚರ್ಚೆಗೆ ಗ್ರಾಸವಾದ ಶಾಸಕಿಯ ಪಕ್ಷಾಂತರ ಕುರಿತ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ29 July 2025 9:34 PM IST
share
ಕೇಸರಿ ಶಾಲು ಹಾಕಿಕೊಂಡಿರುವುದು ನನ್ನ ಧರ್ಮಕ್ಕಾಗಿ: ಮುತಾಲಿಕ್ ಜೊತೆ ವೇದಿಕೆ ಹಂಚಿಕೊಂಡ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ

ಮೂಡಿಗೆರೆ: ಮಂಗಳವಾರ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಸಾರ್ವಜನಿಕ ಶ್ರೀ ಹಿಂದೂ ಮಹಾಸಭಾ ಗಣಪತಿ ಸೇವಾ ಸಮಿತಿ ವತಿಯಿಂದ ನಡೆದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಪ್ರಮೋದ್ ಮುತಾಲಿಕ್ ಜೊತೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ವೇದಿಕೆ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಕೇಸರಿ ಶಾಲು ಹಾಕಿಕೊಂಡಿರುವುದು ಗಣಪತಿಗಾಗಿ, ನನ್ನ ಧರ್ಮಕ್ಕಾಗಿ. ನನ್ನ ಜೊತೆ ನನ್ನ ಪಕ್ಷದ ಕಾರ್ಯಕರ್ತರೂ ಬಂದಿದ್ದಾರೆ. ಹಿಂದೂವಾಗಿ, ದಲಿತೆಯಾಗಿ, ಮಹಿಳೆಯಾಗಿ ನನ್ನನ್ನು ದೇವರು ಇಲ್ಲಿ ಹುಟ್ಟಿಸಿದ್ದಾನೆ. ನಾನು ಆ ಅಸ್ತಿತ್ವದಲ್ಲಿ ಇಲ್ಲಿಗೆ ಬಂದಿದ್ದೇನೆ. ಶಾಸಕಿಯಾಗಿ ಪಕ್ಷವನ್ನು ಪ್ರತಿನಿಧಿಸುವುದು ಆಮೇಲೆ. ಈಗ ನಾನು ಗಣಪತಿ ಸಮಿತಿ ಕಾರ್ಯಾಧ್ಯಕ್ಷೆಯಾಗಿ ಇಲ್ಲಿ ಬಂದಿದ್ದೇನೆ. ನಾನು ಕಾಂಗ್ರೆಸ್ ನಲ್ಲೇ ಇರುತ್ತೇನೋ, ಬಿಜೆಪಿ, ಬಿಎಸ್ಪಿ, ಎಸ್ಡಿಪಿಐ ಸೇರುತ್ತೇನೋ ಎಂಬುದನ್ನು 3 ವರ್ಷಗಳ ಬಳಿಕ ನೋಡೋಣ ಎಂದು ಪ್ರತಿಕ್ರಿಯಿಸಿದರು.

ಇದು ಸಾರ್ವಜನಿಕ ಗಣಪತಿ ಉತ್ಸವವಾಗಿದ್ದರಿಂದ ತನ್ನನ್ನು ಒಂದು ಪಕ್ಷಕ್ಕೆ ಸೀಮಿತವಾಗಿ ನೋಡಬೇಡಿ. ಮುಂಬೈನ ‘ಲಾಲ್ಬಾಗ್ ಕಾ ರಾಜ’ ರೀತಿಯಲ್ಲಿ ಇಲ್ಲಿಯೂ ಅದ್ದೂರಿಯಾಗಿ ಗಣಪತಿ ಉತ್ಸವ ಆಚರಿಸಲು ಮುಂದಾಗೋಣ ಎಂದು ಕರೆ ನೀಡಿದರು.

ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಈ ಬಾರಿ ವಿಭಿನ್ನ ರೀತಿಯಲ್ಲಿ ಗಣೇಶ ಉತ್ಸವ ಆಚರಿಸಲು ಮುಂದಾಗಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಶ್ರೀ ಹಿಂದೂ ಮಹಾಸಭಾ ಗಣಪತಿ ಸೇವಾ ಸಮಿತಿ ಅಧ್ಯಕ್ಷ ಅನುಕುಮಾರ್ ವಹಿಸಿದ್ದರು. ಮುಖಂಡರಾದ ಎಂ.ಆರ್.ಜಗದೀಶ್, ಹಳಸೆ ಶಿವಣ್ಣ, ರಂಜನ್ ಅಜಿತ್ ಕುಮಾರ್, ಜವರಯ್ಯ, ಜೆ.ಎಸ್.ರಘು, ಎಚ್.ಡಿ.ರಾಮೇಗೌಡ, ವಿನೋದ್ ಕಣಚೂರು, ವಿನಯ್ ಹಳೆಕೋಟೆ, ಸುಧೀರ್, ಎಂ.ಎಸ್.ಸುಜಿತ್, ವಕೀಲ ಸಿದ್ದಯ್ಯ, ಪಟೇಲ್ ಮಂಜು, ವಿಜಯ್ ಕುಮಾರ್ ಮತ್ತಿತರರಿದ್ದರು.

ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಲಾಂಛನ ಬಿಡುಗಡೆ ಮಾಡಿದರು.

ಚರ್ಚೆಗೆ ಗ್ರಾಸವಾದ ಪಕ್ಷಾಂತರ ಕುರಿತ ಹೇಳಿಕೆ:

ಶಾಸಕಿ ನಯನಾ ಮೋಟಮ್ಮ ಅವರ ಪಕ್ಷಾಂತರದ ಕುರಿತ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಪ್ರಮೋದ್ ಮುತಾಲಿಕ್ ಕೂಡ ತಮ್ಮ ಭಾಷಣದಲ್ಲಿ ನಯನಾ ಮೋಟಮ್ಮ ಅವರನ್ನು ಹೊಗಳಿ ಮಾತನಾಡಿರುವ ವಿಚಾರ ಸ್ವತಃ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೂ ಸೇರಿದಂತೆ ದಲಿತ, ಪ್ರಗತಿಪರರ ಕೆಂಗಣ್ಣಿಗೆ ಗುರಿಯಾಗಿದೆ. ನಯನಾ ಅವರನ್ನು ಶಾಸಕಿಯನ್ನಾಗಿ ಮಾಡಲು ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಾಯಕರು, ಕಾರ್ಯಕರ್ತರು ಬೆವರು ಸುರಿಸಿದ್ದಾರೆ. ಇದನ್ನು ಕಡೆಗಣಿಸಿ ಸಂಘಪರಿವಾರದವರು ಒಂದು ಸಮುದಾಯ, ಪಕ್ಷದ ಪರವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದಲ್ಲದೆ ಪಕ್ಷಾಂತರದ ಮಾತುಗಳನ್ನಾಡಿರುವುದು ಪಕ್ಷದ ವರಿಷ್ಠರಿಗೆ ಮಾಡಿದ ಅಪಮಾನವಾಗಿದೆ ಎಂಬ ಟೀಕೆಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ.

Tags

Nayana MotammaMuthalikCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X