Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ದತ್ತಾತ್ರೇಯ ಬಾಬಾ ಬುಡಾನ್ ದರ್ಗಾ ವಿವಾದ...

ದತ್ತಾತ್ರೇಯ ಬಾಬಾ ಬುಡಾನ್ ದರ್ಗಾ ವಿವಾದ | ಶಾಶ್ವತ ಪರಿಹಾರಕ್ಕೆ ಸಚಿವ ಸಂಪುಟ ಉಪಸಮಿತಿಗೆ ಮನವಿ: ಮುಹಮ್ಮದ್ ಶಾಹಿದ್ ರಝ್ವಿ

ವಾರ್ತಾಭಾರತಿವಾರ್ತಾಭಾರತಿ20 Jan 2025 11:05 PM IST
share
ದತ್ತಾತ್ರೇಯ ಬಾಬಾ ಬುಡಾನ್ ದರ್ಗಾ ವಿವಾದ | ಶಾಶ್ವತ ಪರಿಹಾರಕ್ಕೆ ಸಚಿವ ಸಂಪುಟ ಉಪಸಮಿತಿಗೆ ಮನವಿ: ಮುಹಮ್ಮದ್ ಶಾಹಿದ್ ರಝ್ವಿ

ಚಿಕ್ಕಮಗಳೂರು : ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಜ.17ರಂದು ರಾಜ್ಯ ಸರಕಾರ ನೇಮಿಸಿರುವ ಸಚಿವ ಸಂಪುಟ ಉಪಸಮಿತಿಯು ಶ್ರೀಗುರು ದತ್ತಾತ್ರೇಯ ಬಾಬಾ ಬುಡಾನ್ ದರ್ಗಾ ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎರಡು ಸಮುದಾಯದ ಮುಖಂಡರು, ಪ್ರತಿನಿಧಿಗಳ ವಿಧಾನಸಭೆ ಸಭೆ ನಡೆಸಿದ್ದು, ಈ ಸಭೆಯ ಮುಂದೆ ಎರಡೂ ಸಮುದಾಯದ ಪ್ರತಿನಿಧಿಗಳು ತಮ್ಮ ಅಭಿಪ್ರಾಯ ಮುಂದಿಟ್ಟು ವಿವಾದಾತ್ಮಕ ಸಂಸ್ಥೆಯಲ್ಲಿ ಸೌಹಾರ್ದತೆ, ಸಾಮಾರಸ್ಯ ಕಾಪಾಡುವ ನಿಟ್ಟಿನಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಮನವಿ ಮಾಡಿದ್ದಾರೆ ಎಂದು ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮಹಮ್ಮದ್ ಶಾಹಿದ್ ರಝ್ವಿ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಶಾಸಕರೂ ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ, ಸೌಹಾರ್ದ ವಾತಾವರಣವನ್ನು ಬಲಿಷ್ಠಗೊಳಿಸಬೇಕೆಂಬ ಮನವಿಯನ್ನು ಸಮಿತಿ ಮುಂದಿಟ್ಟಿದ್ದಾರೆ. ಜಿಲ್ಲೆಯ ಹಿತದೃಷ್ಟಿಯಿಂದ ಇದು ಅತ್ಯುತ್ತಮ ಬೆಳವಣಿಗೆಯಾಗಿದೆ ಎಂದರು.

ರಾಜ್ಯ ಸರಕಾರದ ಸಚಿವ ಸಂಪುಟದ ಉಪಸಮಿತಿ ನಡೆಸಿರುವ ಸಭೆ ಮಹತ್ವದ ಸಭೆಯಾಗಿದ್ದು, ಈ ಸಭೆಯಲ್ಲಿ ಜಿಲ್ಲೆಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟದಿಂದ ವಿವಾದಾಸ್ಪದ ಸಮಸ್ಯೆಗೆ ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಸಮಿತಿಗೆ ಸಲ್ಲಿಸಲಾಗಿದೆ. ಈ ಮೂಲಕ ಸುಪ್ರೀಂ ಕೋರ್ಟ್‌ನ ಆದೇಶ ಸಂಖ್ಯೆ ಎಂ-5, ಡಿವಿಎಸ್ 88-89, 25.02.1989ರ ಹಿಂದಿನ ಯಥಾಸ್ಥಿತಿ ಕಾಪಾಡಿಕೊಂಡು ಬರುವಂತೆ ಮನವಿ ಮಾಡಲಾಗಿದೆ. ಅಲ್ಲದೆ ಧಾರ್ಮಿಕ ಪೂಜಾ ಸ್ಥಳಗಳ ಸಂರಕ್ಷಣಾ ಕಾಯ್ದೆ 1991ರಂತೆ ಕ್ರಮ ಕೈಗೊಳ್ಳುವುದು, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿಯನ್ನು ಪರಿಗಣಿಸಿ, ಅಂಗೀಕರಿಸಿ ಅನುಷ್ಠಾನಗೊಳಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಬಾಬಾ ಬುಡಾನ್ ದರ್ಗಾವು ಈ ಹಿಂದೆ ಎರಡೂ ಸಮುದಾಯದವರ ಶ್ರದ್ಧಾಭಕ್ತಿಯ ಕೇಂದ್ರವಾಗಿತ್ತು. ಕಳೆದೆರಡು ದಶಕಗಳಿಂದ ಈ ಕೇಂದ್ರ ವಿವಾದಾತ್ಮಕ ಕೇಂದ್ರವಾಗಿ ದೇಶಾದ್ಯಂತ ಗಮನಸೆಳೆದಿದೆ. ಇದು ಮುಸ್ಲಿಮರ ಭಾವನೆಗಳಿಗೆ ನೋವುಂಟು ಮಾಡಿದೆ. ಈ ವಿವಾದದಿಂದಾಗಿ ಜಿಲ್ಲೆಯಲ್ಲಿ ಪರಸ್ಪರ ಸಂಬಂಧ, ಶಾಂತಿ ಸಾಮರಸ್ಯಗಳಲ್ಲಿ ಬಿರುಕು ಉಂಟಾಗಿದೆ. ಇದು ಕೊನೆಗಾಣಬೇಕು. ನಾವೆಲ್ಲರೂ ಈ ದೇಶದ ಮಕ್ಕಳಾಗಿದ್ದು, ಇಲ್ಲಿ ಎಲ್ಲರೂ ಬಾಂಧವ್ಯದಿಂದ ಬದುಕಬೇಕಾಗಿದೆ. ಆದ್ದರಿಂದ ಇತಿಹಾಸವನ್ನು ಆಧರಿಸಿ ಶಾಂತಿ, ಸಹಜೀವನಕ್ಕಾಗಿ ವಿವಾದವನ್ನು ಶಾಶ್ವತವಾಗಿ ಬಗೆಹರಿಸಿಕೊಳ್ಳುವುದು ನಮ್ಮ ಆಧ್ಯ ಕರ್ತವ್ಯವಾಗಿದೆ ಎಂದು ಕರೆ ನೀಡಿದರು.

ಈ ವಿವಾದದ ವಿಚಾರವಾಗಿ ಬಾಹ್ಯ ಶಕ್ತಿಗಳಿಂದ ಪ್ರಚೋದನೆಗೆ ಒಳಗಾಗದೆ ಜಿಲ್ಲೆಯ ಶಾಂತಿ ಸೌಹಾರ್ದ, ಸಾಮರಸ್ಯ, ಸಹಬಾಳ್ವೆಯ ಪರಂಪರೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸರಕಾರದೊಂದಿಗೆ ಸಹಕರಿಸಬೇಕು. ಭಿನ್ನಾಭಿಪ್ರಾಯ, ವಿವಾದ ಬಗೆಹರಿಸಲು ಎರಡೂ ಸಮುದಾಯದವರು ಪರಸ್ಪರ ಮಾತುಕತೆ ಮೂಲಕ ಶಾಶ್ವತ ಪರಿಹಾರ ಕಂಡು ಕೊಳ್ಳಬೇಕೆಂದು ಸಲಹೆ ನೀಡಿದ ರಝ್ವಿ, ಸಚಿವ ಸಂಪುಟ ಉಪಸಮಿತಿ ಮುಂದೆ ಎರಡೂ ಸಮುದಾಯದವರ ಮನವಿ ಸಕಾರಾತ್ಮಕವಾಗಿದ್ದು, ಸರಕಾರ ಉತ್ತಮ ನಿರ್ಣಯದೊಂದಿಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಯೂಸುಫ್ ಹಾಜಿ, ಫೈರೋಝ್ ಅಹ್ಮದ್ ರಝ್ವಿ, ಸಿರಾಜ್ ಅಹ್ಮದ್, ಜಂಶೀದ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X