Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಕಾಫಿನಾಡಲ್ಲಿ ವಿದೇಶಿ ವಿಂಟೇಜ್ ಕಾರುಗಳ...

ಕಾಫಿನಾಡಲ್ಲಿ ವಿದೇಶಿ ವಿಂಟೇಜ್ ಕಾರುಗಳ ಕಲರವ

ವಾರ್ತಾಭಾರತಿವಾರ್ತಾಭಾರತಿ18 Nov 2024 7:48 PM IST
share
ಕಾಫಿನಾಡಲ್ಲಿ ವಿದೇಶಿ ವಿಂಟೇಜ್ ಕಾರುಗಳ ಕಲರವ

ಚಿಕ್ಕಮಗಳೂರು: ಕಾಫಿನಾಡಿನ ರಸ್ತೆಗಳಲ್ಲಿ ಅಪರೂಪದ ದೇಶಿ-ವಿದೇಶಗಳ ವಿಂಟೇಜ್ ಕಾರುಗಳು ನೋಡುಗರನ್ನು ಆಕರ್ಷಿಸುವ ಮೂಲಕ ಹಳೆಯ ನೆನಪುಗಳನ್ನು ಮೆಲುಕು ಹಾಕಿದರೆ, ಯುವಸಮೂಹಕ್ಕೆ ವಿಂಟೇಜ್ ಕಾರುಗಳು ವಿಭಿನ್ನ ರೀತಿಯ ಅನುಭವಗಳನ್ನು ನೀಡಿದವು.

ಆಸ್ಟ್ರೇಲಿಯಾ, ನ್ಯೂಝಿಲ್ಯಾಂಡ್ ಬೆಲ್ಜಿಯಂ, ಇಟಲಿ, ಜರ್ಮನಿ ದೇಶಗಳ ಪೋರ್ಶೆ, ಬೆಂಝ್, ಫೆರಾರಿ, ಲ್ಯಾಂಬೋರ್ಗಿನಿ, ರೋಲ್ಸ್ ರಾಯ್ಸ್ ಸೇರಿದಂತೆ 50ರಿಂದ 90ವರ್ಷ ಹಳೆಯ 20ಕ್ಕೂ ಹೆಚ್ಚು ವೆಂಟೇಜ್ ಕಾರುಗಳು ದಕ್ಷಿಣ ಭಾರತದ ಪ್ರವಾಸಕ್ಕೆ ಆಗಮಿಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಪ್ರವಾಸವನ್ನು ಕೈಗೊಂಡ ವಿಂಟೇಜ್ ಕಾರುಗಳು ಹುಬ್ಬಳ್ಳಿ, ಹಂಪಿಯ ಪ್ರವಾಸವನ್ನು ಮುಗಿಸಿ ಕಾಫಿನಾಡಿನ ಸ್ವಿಲ್ವರ್ ಸೈ ರೆಸಾರ್ಟ್‍ನಲ್ಲಿ ತಂಗಿದ ಬಳಿಕ ಸೋಮವಾರ ಮಡಿಕೇರಿ ಜಿಲ್ಲೆಗೆ ಪ್ರವಾಸ ಬೆಳೆಸಿದವು. ಚಿಕ್ಕಮಗಳೂರು ಪ್ರವಾಸ ಮುಗಿಸಿ ಮಡಿಕೇರಿ, ಮೈಸೂರಿನ ಮೂಲಕ ವಾಪಸ್ ಬೆಂಗಳೂರಿಗೆ ತೆರಳಲಿದ್ದಾರೆ.

ರೆಸಾರ್ಟ್ ಮಾಲಕ ಚೇತನ್ ಮಾತನಾಡಿ, ವಿಂಟೇಜ್ ಕಾರುಗಳ ತಂಡಗಳು ಪ್ರತಿವರ್ಷವು ಭಾರತಾದ್ಯಂತ ಪ್ರವಾಸ ಕೈಗೊಳ್ಳುತ್ತವೆ. ಈ ಬಾರಿಯು ದಕ್ಷಿಣ ಭಾರತ ಪ್ರವಾಸಕೈಗೊಂಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿಂಟೇಜ್ ಕಾರುಗಳ ಪ್ರವಾಸಕ್ಕೆ ಸಚಿವ ಎಚ್‍ಕೆ.ಪಾಟೀಲ್ ಚಾಲನೆ ನೀಡಿದ್ದಾರೆ. ಈ ಕಾರುಗಳು ರಾಜ್ಯದ ಅನೇಕ ಜಿಲ್ಲೆಗಳ ಪ್ರವಾಸ ಮುಗಿಸಿ ಕಾಫಿನಾಡಿಗೆ ಬಂದಿರುವುದು ಖುಷಿಯ ಸಂಗತಿ ಎಂದರು.

ನೂರಾರು ವರ್ಷಗಳ ವಿಂಟೇಜ್ ಕಾರುಗಳನ್ನು ಅಲ್ಲಲ್ಲಿ ಏರ್ಪಡಿಸುವ ಪ್ರದರ್ಶನದಲ್ಲಿ ಗಮನಿಸಿದ್ದೇವೆ. ಆದರೆ ಸಂಚರಿಸುವುದನ್ನು ಇದೇ ಮೊದಲು ಕಂಡಿದ್ದೇವೆ. ತಂತ್ರಜ್ಞಾನ ವೃದ್ಧಿಗೊಂಡಂತೆ ಹೊಸ ಕಾರುಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಆದರೆ 90 ವರ್ಷಗಳ ಇತಿಹಾಸವುಳ್ಳ ಪುರಾತನ ಕಾರುಗಳು ನೋಡಲು ಸಿಗುವುದು ಅಪರೂಪ. ಇಂತಹ ಕಾರುಗಳು ಸದ್ಯ ರಾಜ್ಯಾದ್ಯಂತ ಸಂಚರಿಸುತ್ತಿದ್ದು, ವಿಂಟೇಜ್ ಕಾರುಗಳನ್ನು ನೋಡುವುದೇ ಒಂದು ಹೊಸ ಅನುಭವ. ರಾಜ್ಯದ ಜನರು ಇಂತಹ ಕಾರುಗಳನ್ನು ಕಣ್ಣಾರೆ ಕಂಡು ಆನಂದಿಸಲು ಈ ಪ್ರವಾಸ ಸಹಕಾರಿಯಾಗಿದೆ ಎಂದರು.

ಈ ವೇಳೆ ವಿಂಟೇಜ್ ಕಾರುಗಳ ವಿದೇಶಿ ಪ್ರವಾಸಿಗರು ಮಾತನಾಡಿ, ಭಾರತದ ರಸ್ತೆಗಳು ವಿಭಿನ್ನ ಅನುಭವವನ್ನು ನೀಡುತ್ತಿವೆ. ಎತ್ತರ, ಇಳಿಜಾರಿನಿಂದ ಕೂಡಿದ ರಸ್ತೆಗಳಲ್ಲಿ ಪ್ರಯಾಣ ಬೆಳೆಸುವುದು ಹೊಸ ಅನುಭವ ನೀಡುತ್ತಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X