ಕಳಸ | ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಮರದ ಕೊಂಬೆ ತಲೆ ಮೇಲೆ ಬಿದ್ದು ಸವಾರ ಮೃತ್ಯು

ಚಿಕ್ಕಮಗಳೂರು: ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಮರದ ಕೊಂಬೆಯೊಂದು ಮುರಿದು ಮೈಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಳಸ ತಾಲೂಕಿನ ಸಂಸೆ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ಮೃತರನ್ನು ಹೊಸಮಠದ ಕೃಷ್ಣಗೌಡ ಎಂಬವರ ಪುತ್ರ ರಘು (38) ಎಂದು ಗುರುತಿಸಲಾಗಿದೆ.
ರಘು ಅವರು ಬಾಳಗಲ್ ಸಮೀಪ ಕಟ್ಟುನೀರು ಹಳ್ಳದ ಬಳಿ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ತಲೆಯ ಮೇಲೆ ಮರದ ರೆಂಬೆಯೊಂದು ಮುರಿದುಬಿದ್ದಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




