ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ ಕೇರಳ ಪೊಲೀಸ್

ಬಿ.ಜಿ. ಕೃಷ್ಣಮೂರ್ತಿ
ಚಿಕ್ಕಮಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರನ್ನು ಚಿಕ್ಕಮಗಳೂರು ನ್ಯಾಯಲಯಕ್ಕೆ ಹಾಜರು ಪಡಿಸಲಾಯಿತು.
ಚಿಕ್ಕಮಗಳೂರು ಜಿಲ್ಲೆಯ ಹಲವು ಪ್ರಕರಣ ಸಂಬಂಧ ಕೇರಳ ಪೊಲೀಸರು ಬಿಗಿ ಬಂದೋಬಸ್ತ್ನಲ್ಲಿ ಕರೆತಂದು ಹಾಜರುಪಡಿಸಿದರು.
ಮುಂದಿನ ತಿಂಗಳು 21ಕ್ಕೆ ಪ್ರಕರಣದ ವಿಚಾರಣೆಯನ್ನು ಜೆಎಂಎಫ್ ಸಿ ನ್ಯಾಯಲಯ ಮುಂದೂಡಿದೆ.
ಕೇರಳದಲ್ಲಿ ಶರಣಾಗತಿಯಾಗಿದ್ದ ಬಿ. ಜಿ. ಕೃಷ್ಣಮೂರ್ತಿ ,ಸಾಕೇತ್ ರಾಜನ್ ನಂತರ ರಾಜ್ಯದಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ನಕ್ಸಲ್ ನಾಯಕತ್ವ ವಹಿಸಿದ್ದರು.
ಕಳೆದ ವರ್ಷ ಕೇರಳದಲ್ಲಿ ಶರಣಾಗತಿಯಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮೇಲೆ ನಕ್ಸಲ್ ಚಟುವಟಿಕೆ ಸಂಬಂಧ 66 ಪ್ರಕರಣಗಳು ದಾಖಲಾಗಿವೆ.
ಚಿಕ್ಕಮಗಳೂರು-ಉಡುಪಿ-ದಕ್ಷಿಣ ಕನ್ನಡದಲ್ಲಿಯೂ ಬಿ.ಜಿ. ಕೃಷ್ಣಮೂರ್ತಿ ವಿರುದ್ದ ಪ್ರಕರಣಗಳಿದ್ದು, ದಶಕದ ಹಿಂದೆ ಕೇರಳದತ್ತ ಬಿ.ಜಿ. ಕೃಷ್ಣಮೂರ್ತಿ ಹಾಗೂ ಇತರ ನಕ್ಸಲರು ಮುಖ ಮಾಡಿದ್ದರು.
ವಿಕ್ರಂಗೌಡ ಅವರ ಹತ್ಯೆ ನಂತರ ಹಲವು ನಕ್ಸಲರು ಶರಣಾಗಿದ್ದರು.





