Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಮೂಡಿಗೆರೆ | ಜೀವನಕ್ಕೆ ಆಸರೆಯಾಗಿದ್ದ...

ಮೂಡಿಗೆರೆ | ಜೀವನಕ್ಕೆ ಆಸರೆಯಾಗಿದ್ದ ಜಮೀನು ಸರ್ಫೇಸಿ ಕಾಯ್ದೆಯಿಂದ ಹರಾಜು

ದಯಾಮರಣಕ್ಕೆ ಅವಕಾಶ ಕೋರಿ ತಹಶೀಲ್ದಾರ್‌ಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ27 Jun 2025 11:21 PM IST
share
ಮೂಡಿಗೆರೆ | ಜೀವನಕ್ಕೆ ಆಸರೆಯಾಗಿದ್ದ ಜಮೀನು ಸರ್ಫೇಸಿ ಕಾಯ್ದೆಯಿಂದ ಹರಾಜು

ಮೂಡಿಗೆರೆ : ಜೀವನಕ್ಕೆ ಆಸರೆಯಾಗಿದ್ದ ಜಮೀನನ್ನು ಸರ್ಫೇಸಿ ಕಾಯ್ದೆ ಹೆಸರಿನಲ್ಲಿ ಬ್ಯಾಂಕಿನವರು ಹರಾಜು ಮಾಡಿರುವುದರಿಂದ ದಯಾಮರಣಕ್ಕೆ ಅವಕಾಶ ಕೋರಿ ರೈತ ಡಿ.ಆರ್.ವಿಜಯ ಮತ್ತು ಪತ್ನಿ ಎಚ್.ಎನ್.ಪಾರ್ವತಿ ದಂಪತಿ ಶುಕ್ರವಾರ ತಹಶೀಲ್ದಾರ್ ರಾಜಶೇಖರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಆರ್.ವಿಜಯ, ತಾಲೂಕಿನ ಕಲ್ಲೂಮ ಗ್ರಾಮದ ಸ.ನಂ 40/2 ರಲ್ಲಿ ತನ್ನ ಹೆಸರಿನಲ್ಲಿ 4 ಎಕರೆ ಕಾಫಿ ತೋಟದ ದಾಖಲೆ ನೀಡಿ 25.90 ಲಕ್ಷ ರೂ. ಹಾಗೂ ಪತ್ನಿ ಎಚ್.ಎನ್.ಪಾರ್ವತಿ ಕೆಲ್ಲೂರು ಗ್ರಾಮದ ಸ.ನಂ 40/1 ರಲ್ಲಿ 3.39 ಎಕರೆ ಜಮೀನಿನ ಮೇಲೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 6 ಲಕ್ಷ ರೂ. ಕೃಷಿ ಸಾಲ ಮಾಡಿದ್ದೆವು. ಬೆಳೆ ನಷ್ಟ, ಬೆಲೆ ಏರಿಳಿತ, ಕೋವಿಡ್ ಸಂಕಷ್ಟ, ಹವಾಮಾನ ವೈಪರೀತ್ಯ, ಕಾಡುಪ್ರಾಣಿಗಳ ಹಾವಳಿಯಿಂದಾಗಿ ಸಕಾಲದಲ್ಲಿ ಸಾಲವನ್ನು ಮರುಪಾವತಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

2024ರಲ್ಲಿ 5.30 ಲಕ್ಷ ರೂ. ಸಾಲದ ಬಾಬ್ತು ಪಾವತಿ ಮಾಡಲಾಗಿದ್ದು, ಸಾಲ ಮರುಪಾವತಿಸಲು ಕಾಲಾವಕಾಶ ನೀಡುತ್ತೇವೆಂದು ಬ್ಯಾಂಕ್‌ನವರು ತಿಳಿಸಿದ್ದರು. ಆದರೆ, ಬ್ಯಾಂಕ್‌ನವರು ನಮ್ಮ ಗಮನಕ್ಕೆ ಬಾರದ ಸರ್ಫೇಸಿ ಕಾಯ್ದೆ ಮುಂದಿಟ್ಟುಕೊಂಡು 3 ಕೋಟಿ ರೂ. ಬೆಲೆ ಬಾಳುವ ಆಸ್ತಿಯನ್ನು ಕೇವಲ 89.50 ಲಕ್ಷ ರೂ.ಗೆ ಆನ್‌ಲೈನ್ ಮೂಲಕ ಏಕಾಏಕಿ ಹರಾಜು ಮಾಡಿ, ಬೆಂಗಳೂರಿನವರಿಗೆ ನೀಡಲಾಗಿದೆ. ಇದರಿಂದ ನಮಗೆ ದಿಕ್ಕು ತೋಚದಂತಾಗಿದೆ. ನಮಗೆ ಈ ಜಮೀನು ಬಿಟ್ಟರೆ ಬೇರೆ ಜೀವನ ಮಾರ್ಗವಿಲ್ಲ. ನಾವು ಈಗಾಗಲೇ ಹಿರಿಯ ನಾಗರಿಕರಾಗಿದ್ದು, ಬೇರೆ ದುಡಿಮೆಯ ದಾರಿ ಯಾವುದೂ ತೋಚುತ್ತಿಲ್ಲವೆಂದು ವಿಜಯ ಅಳಲು ತೋಡಿಕೊಂಡರು.

ರೈತ ಹಿತ ರಕ್ಷಣಾ ವೇದಿಕೆ ಅಧ್ಯಕ್ಷ ಬಿ.ಕೆ.ಲಕ್ಷ್ಮಣ್‌ಕುಮಾರ್ ಮಾತನಾಡಿ, ಸರ್ಫೇಸಿ ಕಾಯ್ದೆಯಿಂದಾಗಿ ದಯಾಮರಣ ಕೋರಿರುವ ಘಟನೆ ಜಿಲ್ಲೆಯಲ್ಲಿಯೇ ಪ್ರಥಮವಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 2,700 ಸರ್ಫೇಸಿ ಕಾಯ್ದೆಯೊಳಪಟ್ಟ ರೈತರಿದ್ದಾರೆ. ಅದರಲ್ಲಿ 400 ರೈತರು ಸಾಲ ಮರುಪಾವತಿ ಮಾಡಿದ್ದು, ಉಳಿದ 2,300 ರೈತರು ಜಮೀನು ಕಳೆದುಕೊಳ್ಳುವ ಸ್ಥಿತಿ ಉಂಟಾಗಿದೆ. ಬ್ಯಾಂಕ್‌ನವರು ಈ ಕಾಯ್ದೆ ಹೆಸರಿನಲ್ಲಿ ಹರಾಜು ಮಾಡಿ ಕೋಟ್ಯಾಂತರ ರೂ. ಬೆಲೆ ಬಾಳುವ ಜಮೀನನ್ನು ಕಡಿಮೆ ಮೊತ್ತದಲ್ಲಿ ಭೂಮಾಲಕರಿಗೆ ಜಮೀನು ಒದಗಿಸುವ ತಂತ್ರ ನಡೆಯುತ್ತಿದೆ. ಈ ಬಗ್ಗೆ ಕೇಂದ್ರ ಸರಕಾರ ಎಚ್ಚೆತ್ತುಕೊಂಡು ಸರ್ಫೇಸಿ ಕಾಯ್ದೆ ರದ್ದುಪಡಿಸಿ ರೈತರ ನೆರವಿಗೆ ಬರಬೇಕೆಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X