Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು | ಬಾಲಕಿ ಹತ್ಯೆ ಪ್ರಕರಣ...

ಚಿಕ್ಕಮಗಳೂರು | ಬಾಲಕಿ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಕುಡಿದ ಮತ್ತಿನಲ್ಲಿ ಪುತ್ರಿಯ ಹತ್ಯೆ ಮಾಡಿದ್ದ ತಂದೆ

ವಾರ್ತಾಭಾರತಿವಾರ್ತಾಭಾರತಿ25 Sept 2024 11:30 PM IST
share
ಚಿಕ್ಕಮಗಳೂರು | ಬಾಲಕಿ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಕುಡಿದ ಮತ್ತಿನಲ್ಲಿ ಪುತ್ರಿಯ ಹತ್ಯೆ ಮಾಡಿದ್ದ ತಂದೆ

ಚಿಕ್ಕಮಗಳೂರು: ನಿಗೂಢವಾಗಿ ಕೊಲೆಯಾಗಿದ್ದ 5 ವರ್ಷದ ಬಾಲಕಿಯ ಹತ್ಯೆ ಪ್ರಕರಣವನ್ನು ಬೇಧಿಸುವಲ್ಲಿ ಅಜ್ಜಂಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಕುಡಿದ ಮತ್ತಿನಲ್ಲೇ ತಂದೆಯೇ ಮಗಳನ್ನು ಹತ್ಯೆ ಮಾಡಿರುವುದನ್ನು ಪೊಲೀಸರು ಪತ್ತೆ ಮಾಡಿದ್ದು, ದಂಪತಿ ನಡುವಿನ ಜಗಳ ಮಗಳ ಹತ್ಯೆಯಲ್ಲಿ ಕೊನೆಗೊಂಡಿರುವುದು ಬೆಳಕಿಗೆ ಬಂದಿದೆ.

ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವನಿ ಗ್ರಾಮದ ದಂಪತಿ ಮಂಜುನಾಥ್ ಹಾಗೂ ಮಂಗಳಾ ಎಂಬವರ 5 ವರ್ಷದ ಮಗಳು ವೇದಾ ಸೆ.19ರಂದು ದಂಪತಿಯ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಮಧ್ಯಾಹ್ನ ಮನೆಗೆ ಬಂದ ದಂಪತಿ ಮಗಳು ಮೃತಪಟ್ಟಿರುವುದನ್ನು ಕಂಡು ಅಜ್ಜಂಪುರ ಪೊಲೀಸರಿಗೆ ದೂರು ನೀಡಿ, ತಾವು ಕೆಲಸಕ್ಕೆ ಹೋಗಿದ್ದ ವೇಳೆ ಅಪರಿಚಿತರು ಮಗಳನ್ನು ಹತ್ಯೆ ಮಾಡಿ ಮಗಳ ದೇಹದಲ್ಲಿದ್ದ ಓಲೆ, ಕಾಲು ಚೈನು ಕದ್ದು ಪರಾರಿಯಾಗಿದ್ದಾರೆ ಎಂದು ದೂರು ನೀಡಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ಅನುಮಾನದ ಮೇರೆಗೆ ಬಾಲಕಿ ತಂದೆಯನ್ನು ವಿಚಾರಣೆಗೊಳಪಡಿಸಿದಾಗ ತಂದೆಯೇ ಮಗಳನ್ನು ಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಬಾಲಕಿ ತಂದೆ ಮಂಜುನಾಥ್ ಹಾಗೂ ತಾಯಿ ಮಂಗಳಾ ಪ್ರೀತಿಸಿ ಮದುವೆಯಾಗಿದ್ದು, ಮಗಳ ಜನನವಾದ ಬಳಿಕ ಬಾಲಕಿ ಮಂಗಳಾ ಪತಿ ಮಂಜುನಾಥ್ ಮಗು ತನ್ನದಲ್ಲ ಎಂದು ಆರೋಪಿಸಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಅಲ್ಲದೇ ಪ್ರತಿದಿನ ಕುಡಿದು ಮನೆಗೆ ಬರುತ್ತಿದ್ದ ಎನ್ನಲಾಗಿದ್ದು, ಸೆ.19ರಂದು ಮಗಳಿಗೆ ಜ್ವರ ಇದೆ ಎಂದು ಹೇಳಿ ಆಕೆಯನ್ನು ಮನೆಯಲ್ಲೇ ಬಿಟ್ಟು ದಂಪತಿ ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ ಕುಡಿದು ಮನೆಗೆ ಬಂದಿದ್ದ ಮಂಜುನಾಥ್ ಕಂಡ ಬಾಲಕಿ, ಕುಡಿದ ವಿಚಾರಕ್ಕೆ ಬೈದಿದ್ದಾಳೆ, ಇಷ್ಟಕ್ಕೆ ಕುಪಿತನಾದ ತಂದೆ ಮಂಜುನಾಥ್, ಕಬ್ಬಿಣದ ಕೊಳೆಯಿಂದ ಬಾಲಕಿಯನ್ನು ಹೊಡೆದು ಸಾಯಿಸಿದ್ದಾನೆಂದು ಪೊಲೀಸ್ ಇಲಾಖೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಮಗಳನ್ನು ಹತ್ಯೆ ಮಾಡಿದ್ದ ಮಂಜುನಾಥ್ ಪೊಲೀಸರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮಗಳನ್ನು ಯಾರೋ ಕೊಲೆ ಮಾಡಿದ್ದಾರೆಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಪೊಲೀಸರ ತನಿಖೆಯಲ್ಲಿ ತಂದೆಯೇ ಮಗಳನ್ನು ಕೊಂದಿರುವುದು ಪತ್ತೆಯಾಗಿದ್ದು, ಘಟನೆ ಸಂಬಂಧ ಬಾಲಕಿ ತಂದೆ ಮಂಜುನಾಥ್‍ನನ್ನು ಪೊಲೀಸರು ಬಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X