Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. Mudigere | ಮುತ್ತಿಗೆಪುರ ಸರಕಾರಿ ಶಾಲೆ...

Mudigere | ಮುತ್ತಿಗೆಪುರ ಸರಕಾರಿ ಶಾಲೆ ಮಕ್ಕಳಿಗೆ ವಿಮಾನಯಾನ ಭಾಗ್ಯ; ವಿದ್ಯಾರ್ಥಿಗಳ ಕನಸು ನನಸು ಮಾಡಿದ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು

ವಾರ್ತಾಭಾರತಿವಾರ್ತಾಭಾರತಿ8 Jan 2026 11:16 PM IST
share
Mudigere | ಮುತ್ತಿಗೆಪುರ ಸರಕಾರಿ ಶಾಲೆ ಮಕ್ಕಳಿಗೆ ವಿಮಾನಯಾನ ಭಾಗ್ಯ; ವಿದ್ಯಾರ್ಥಿಗಳ ಕನಸು ನನಸು ಮಾಡಿದ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು

ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಯನ್ನೂ ಮೀರುವಂತೆ ವಿಭಿನ್ನ ಕಾರ್ಯವನ್ನು ಮಾಡಿದ್ದು, ಶಾಲೆಯ 32 ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣದ ಅನುಭವ ನೀಡುವ ಮೂಲಕ ಸರಕಾರಿ ಶಾಲೆಯೊಂದು ಏರ್ ಟೂರ್ ಕರೆದುಕೊಂಡು ಹೋಗಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಜ.7ರಂದು ಮುತ್ತಿಗೆಪುರ ಸರಕಾರಿ ಶಾಲೆಯಿಂದ ಹೊರಟ 32 ಮಕ್ಕಳು ಶಿಕ್ಷಕರೊಡನೆ ಶಿವಮೊಗ್ಗ ವಿಮಾನ ನಿಲ್ದಾಣವನ್ನು ತಲುಪಿ ಅಲ್ಲಿಂದ ವಿಮಾನ ಏರಿ ಬೆಂಗಳೂರು ತಲುಪಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ವಿಮಾನ ನಿಲ್ದಾಣವನ್ನು ವೀಕ್ಷಿಸಿ ಅಲ್ಲಿಂದ ವಿಧಾನಸೌಧವನ್ನು ಕಣ್ತುಂಬಿಕೊಂಡಿದ್ದಾರೆ. ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂ, ಬೆಂಗಳೂರು ಪ್ಯಾಲೇಸ್, ತಾರಾಲಯ ವೀಕ್ಷಿಸಿ ಅಲ್ಲಿಂದ ಅಂದು ರಾತ್ರಿ ವಾಹನದಲ್ಲಿ ಮುತ್ತಿಗೆಪುರ ಗ್ರಾಮವನ್ನು ತಲುಪಿದ್ದಾರೆ. ಈ ಮೂಲಕ ಏರ್ ಟೂರ್‌ನ ಅನುಭವವನ್ನು ಮಕ್ಕಳು ತಮ್ಮದಾಗಿಸಿಕೊಂಡಿದ್ದಾರೆ.

ವಿಮಾನ ಏರಿ ಪ್ರಯಾಣಿಸಬೇಕೆಂಬುದು ಮಕ್ಕಳ ಬಹುದಿನಗಳ ಕನಸಾಗಿತ್ತು. ನಾವೂ ವಿಮಾನದಲ್ಲಿ ಪ್ರಯಾಣಿಸಬೇಕೆಂಬ ತಮ್ಮ ಕನಸನ್ನು ಮಕ್ಕಳು ಶಿಕ್ಷಕರೊಂದಿಗೆ ಹಂಚಿಕೊಂಡಿದ್ದಾರೆ. ಮಕ್ಕಳ ಕನಸನ್ನು ಗಂಭೀರವಾಗಿ ಪರಿಗಣಿಸಿದ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು, ದಾನಿಗಳು ಆರ್ಥಿಕ ನೆರವು ನೀಡಿದ್ದು 2 ಲಕ್ಷ ರೂ. ವೆಚ್ಚದಲ್ಲಿ ಏರ್ ಟೂರ್ ಆಯೋಜಿಸಿ ಮಕ್ಕಳ ಕನಸನ್ನು ನನಸು ಮಾಡಿದ್ದಾರೆ. ಮುದ್ರೆಮನೆ ಕಾಫಿ ಕ್ಯೂರಿಂಗ್ ಮಾಲಕ ಸಂತೋಷ್ 10 ವಿದ್ಯಾರ್ಥಿಗಳ ಖರ್ಚು ವೆಚ್ವವನ್ನು ನೀಡಿದ್ದಾರೆ. ಒಟ್ಟಾರೆ ಎಳೆಯ ಮಕ್ಕಳ ಬಹುದಿನಗಳ ಕನಸು ಈ ಸರಕಾರಿ ಶಾಲೆ ನನಸಾಗಿಸಿದೆ.

ಶಾಲೆಯಲ್ಲಿ 422 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, 5, 6, 7ನೇ ತರಗತಿಯ 32 ಮಕ್ಕಳನ್ನು ಪೋಷಕರ ಒಪ್ಪಿಗೆಯ ಮೇರೆಗೆ ಈ ಏರ್ ಟೂರ್‌ಗೆ ಆಯ್ಕೆ ಮಾಡಲಾಗಿದೆ. ಶಾಲೆಯ ಈ ವಿಭಿನ್ನ ಪ್ರಯತ್ನಕ್ಕೆ ಗ್ರಾಮ ಪಂಚಾಯತ್, ಡಿಡಿಪಿಐ ತಿಮ್ಮರಾಜು, ಬಿಇಇ, ಶಿಕ್ಷಣ ಇಲಾಖೆಯೂ ಸಹಕಾರ ನೀಡಿದೆ ಎಂದು ಇಲ್ಲಿನ ಶಿಕ್ಷಕರು ಸ್ಮರಿಸಿದ್ದಾರೆ.

ವಿಮಾನದಲ್ಲಿ ಪ್ರಯಾಣಿಸಬೇಕೆಂಬ ಆಸೆ ಮಕ್ಕಳದಾಗಿತ್ತು. ಅವರು ನಮ್ಮೊಂದಿಗೆ ಹಂಚಿಕೊಂಡಾಗ ಏರ್‌ಟೂರ್ ಯೋಜನೆ ರೂಪಿಸಿದೆವು. ಶಿಕ್ಷಕರು, ಎಸ್‌ಡಿಎಂಸಿ ಹಾಗೂ ದಾನಿಗಳ ಸಹಕಾರದಿಂದ ಏರ್‌ಟೂರ್ ಏರ್ಪಡಿಸಲು ಸಾಧ್ಯವಾಯಿತು. 32 ಮಕ್ಕಳು ವಿಮಾನ ಪ್ರಯಾಣದ ಅನುಭವ ಪಡೆದುಕೊಂಡರು. ಮಕ್ಕಳಿಗೆ ವಿಭಿನ್ನವಾದ ಅನುಭವ ಹೊಂದಬೇಕೆಂಬ ಉದ್ದೇಶದಿಂದ ಏರ್‌ಟೂರ್ ಆಯೋಜನೆ ಮಾಡಲಾಗಿತ್ತು. ಮಕ್ಕಳ ಕನಸು ನನಸಾಗುವ ಜತೆಗೆ ಒಂದೊಳ್ಳೇ ಅನುಭವವನ್ನು ಪಡೆದುಕೊಂಡರು.

ಎಸ್.ಭಾರತಿ, ಮುತ್ತಿಗೆಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರಿ ಮುಖ್ಯ ಶಿಕ್ಷಕಿ

ಶಿಕ್ಷಣಕ್ಕೆ ಹೆಚ್ಚಿನ ಒತ್ತು :

ಖಾಸಗಿ ಶಾಲೆಗಳು ದಾಖಲಾತಿಗಾಗಿ ವಿಭಿನ್ನವಾದ ಪ್ರಯತ್ನವನ್ನು ಮಾಡುತ್ತಿವೆ. ಆದರೆ, ಸರಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳು ಹಿಂದುಳಿದ ವರ್ಗಗಳ ಮಕ್ಕಳಾಗಿದ್ದು, ಅವರಿಗೂ ವಿಭಿನ್ನ ಹಾಗೂ ಹೊಸ ಅನುಭವ ನೀಡುವ ಉದ್ದೇಶದಿಂದ ಏರ್‌ಟೂರ್ ಆಯೋಜಿಸಲಾಗಿತ್ತು. ಈ ಶಾಲೆ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಪ್ರತಿ ವರ್ಷವೂ ಒಂದೊಂದು ಹೊಸತನವನ್ನು ರೂಪಿಸುತ್ತಿದೆ. ಅದರಂತೆ ಏರ್‌ಟೂರ್ ಮೂಲಕ ಮತ್ತೊಂದು ಹೊಸತನಕ್ಕೆ ನಾಂದಿ ಹಾಡಿದೆ.

Tags

MudigereGovernment school
share
ವಾರ್ತಾಭಾರತಿ
ವಾರ್ತಾಭಾರತಿ
Next Story
X