Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಮೂಡಿಗೆರೆ | ಸಿಸಿ ಕ್ಯಾಮರದಲ್ಲಿ ಹುಲಿ...

ಮೂಡಿಗೆರೆ | ಸಿಸಿ ಕ್ಯಾಮರದಲ್ಲಿ ಹುಲಿ ಸಂಚಾರ ಸೆರೆ; ಗ್ರಾಮಸ್ಥರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ12 Dec 2025 11:16 PM IST
share
ಮೂಡಿಗೆರೆ | ಸಿಸಿ ಕ್ಯಾಮರದಲ್ಲಿ ಹುಲಿ ಸಂಚಾರ ಸೆರೆ; ಗ್ರಾಮಸ್ಥರಲ್ಲಿ ಆತಂಕ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ವನ್ಯಪ್ರಾಣಿಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮೂಡಿಗೆರೆ ತಾಲೂಕಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಸಿಸಿ ಟಿವಿ ಕ್ಯಾಮರದಲ್ಲಿ ಹುಲಿಯ ಚಲನವಲನ ಸೆರೆಯಾಗಿದ್ದು, ಜನರಲ್ಲಿ ಭಯ ಹುಟ್ಟಿಸಿದೆ.

ಮೂಡಿಗೆರೆ ತಾಲೂಕಿನ ಭಾರತೀಬೈಲು, ಬಿ.ಹೊಸಳ್ಳಿ ಗ್ರಾಮದಲ್ಲಿ ಹುಲಿಯ ಚಲನವಲನ ಕಾಣಿಸಿಕೊಂಡಿದ್ದು ಇಲ್ಲಿನ ಗ್ರಾಮಸ್ಥರಲ್ಲಿ ಭಯ ಸೃಷ್ಟಿಸಿದೆ. ಹುಲಿ ಹಸುಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ದೂರು ಕೇಳಿ ಬಂದ ಹಿನ್ನಲೆಯಲ್ಲಿ ಭಾರತೀಬೈಲು ಗ್ರಾಮ ಸಮೀಪದ ಅರಣ್ಯದಲ್ಲಿ ಸಿಸಿ ಟಿವಿ ಕ್ಯಾಮಾರ ಅಳವಡಿಸಲಾಗಿತ್ತು. ಸಿಸಿ ಟಿವಿಯಲ್ಲಿ ಹುಲಿಯ ಚಲನವಲನ ಸೆರೆಯಾಗಿದೆ. ಹುಲಿ ಕಾಣಿಸಿಕೊಂಡ ಪರಿಣಾಮ ಇಲ್ಲಿನ ಜನರಲ್ಲಿ ಆತಂಕ ಮೂಡಿಸಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿಯಿಂದ ಕಾಫಿ, ಅಡಿಕೆ ಬೆಳೆಗಾರರು ಹೈರಾಣಾಗಿ ಹೋಗಿದ್ದಾರೆ, ಅನೇಕ ಮಂದಿ ರೈತರು, ಕಾರ್ಮಿಕರು ಕಾಡಾನೆಗಳ ದಾಳಿಯಿಂದಾಗಿ ಈಗಾಗಲೇ ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಯೋಜನೆ ರೂಪಿಸಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ. ಈ ಬೇಡಿಕೆಗೆ ಸರಕಾರ ಇದುವರೆಗೂ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ, ಈ ನಡುವೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಹುಲಿ, ಚಿರತೆಗಳ ಹಾವಳಿ ಹೆಚ್ಚಾಗುತ್ತಿರುವುದು ರೈತರನ್ನು ನಿದ್ದೆ ಗೆಡುವಂತೆ ಮಾಡಿದೆ.

ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ, ಕುದುರೆಮುಖ, ಹೊರನಾಡು ಭಾಗದಲ್ಲಿ ಚಿರತೆಯೊಂದು ಸಾಕು ನಾಯಿಗಳನ್ನು ಹೊತ್ತೊಯ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಸದ್ಯ ಮೂಡಿಗೆರೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿರುವುದು ರೈತರನ್ನು ಆತಂಕಕ್ಕೀಡು ಮಾಡಿದೆ.

ಮುಳ್ಳಯ್ಯನಗಿರಿ ಭಾಗದಲ್ಲೂ ಹುಲಿಗಳ ಸಂಚಾರ

ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಮುಳ್ಳಯ್ಯನಗಿರಿ ಭಾಗದಲ್ಲಿ ಶುಕ್ರವಾರ ಸ್ಥಳೀಯರಿಗೆ ಮೂರು ಹುಲಿಗಳು ಕಾಣಿಸಿಕೊಂಡಿದ್ದು, ಇದು ಸ್ಥಳೀಯರೂ ಸೇರಿದಂತೆ ಪ್ರವಾಸಿಗರು, ಕಾಫಿ ತೋಟಗಳ ಕಾರ್ಮಿಕರಲ್ಲಿ ಆತಂಕ ಮೂಡಿಸಿದೆ.

ಮುಳ್ಳಯ್ಯನ ಗಿರಿ ಸಮೀಪದ ಸೀತಾಳಯ್ಯನಗಿರಿ, ಪಾಂಡರವಳ್ಳಿ ಭಾಗದಲ್ಲಿ ಮರಿ ಹುಲಿ ಸೇರಿದಂತೆ ಒಟ್ಟು ಮೂರು ಹುಲಿಗಳು ಸಂಚಾರ ಮಾಡುತ್ತಿರುವುದನ್ನು ಸ್ಥಳೀಯರು ಕಂಡಿದ್ದು, ಆತಂಕಗೊಂಡಿರುವ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಲಾಖೆ ಅಧಿಕಾರಿಗಳು ಹುಲಿಗಳು ಸಂಚರಿಸಿದ್ದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುಲಿಗಳ ಸಂಚಾರವನ್ನು ಖಾತ್ರಿ ಪಡಿಸಿದ್ದಾರೆ. ಅಲ್ಲದೇ ಪ್ರವಾಸಿಗರು, ಸ್ಥಳೀಯರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ಈ ಭಾಗದಲ್ಲಿ ಅನೇಕ ಕಾಫಿ ತೋಟಗಳಿದ್ದು, ಸದ್ಯ ಕಾಫಿ ಕಟಾವು ನಡೆಯುತ್ತಿರುವುದರಿಂದ ಹುಲಿಗಳ ಒಡಾಟದ ಸುದ್ದಿ ಕಾರ್ಮಿಕರಲ್ಲೂ ಆತಂಕ ಮೂಡಿಸಿದೆ. ಮುಳ್ಳಯ್ಯನಗಿರಿ ನೋಡಲು ವಾರಾಂತ್ಯಗಳಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಬರುವುದು ಸಾಮಾನ್ಯವಾಗಿದ್ದು, ಹುಲಿಗಳ ಸಂಚಾರ ಪ್ರವಾಸಿಗರಲ್ಲೂ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಹುಲಿಗಳ ಸಂಚಾರದಿಂದ ಉಂಟಾಗಿರುವ ಆತಂಕವನ್ನು ದೂರ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X