Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು: ಕೆಡಿಪಿ ಸಭೆಯಲ್ಲಿ ವೇದಿಕೆ...

ಚಿಕ್ಕಮಗಳೂರು: ಕೆಡಿಪಿ ಸಭೆಯಲ್ಲಿ ವೇದಿಕೆ ಮೇಲಿನ ಕುರ್ಚಿಗಾಗಿ ಕಾಂಗ್ರೆಸ್, ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ

ವಾರ್ತಾಭಾರತಿವಾರ್ತಾಭಾರತಿ12 July 2024 9:16 PM IST
share
ಚಿಕ್ಕಮಗಳೂರು: ಕೆಡಿಪಿ ಸಭೆಯಲ್ಲಿ ವೇದಿಕೆ ಮೇಲಿನ ಕುರ್ಚಿಗಾಗಿ ಕಾಂಗ್ರೆಸ್, ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ

ಚಿಕ್ಕಮಗಳೂರು: ಇಲ್ಲಿನ ಜಿಪಂ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯ ಆರಂಭದಲ್ಲಿ ವೇದಿಕೆಯ ಕುರ್ಚಿಗಳ ಮೇಲೆ ಯಾರೆಲ್ಲ ಕೂರಬಹುದು ಎಂಬ ವಿಚಾರ ಭಾರೀ ಚರ್ಚೆಗೆ ಗ್ರಾಸವಾಯಿತು. ಈ ವಿಚಾರ ಸಂಬಂಧ ಕಾಂಗ್ರೆಸ್ ಶಾಸಕರು ಮತ್ತು ಬಿಜೆಪಿ, ಜೆಡಿಎಸ್ ಮೈತ್ರಿ ಪಕ್ಷಗಳ ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ, ವಾಗ್ವಾದಕ್ಕೂ ಸಭೆ ಸಾಕ್ಷಿಯಾಯಿತು.

ಶುಕ್ರವಾರ ಸಚಿವ ಕೆ.ಜೆ.ಜಾರ್ಜ್ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯ ಆರಂಭವಾಗುತ್ತಿದ್ದಂತೆ ಸಚಿವರೂ ಸೇರಿದಂತೆ ಕಾಂಗ್ರೆಸ್ ಶಾಸಕರು, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸಭೆಯ ವೇದಿಕೆಯ ಮೇಲಿದ್ದ ಕುರ್ಚಿಗಳ ಮೇಲೆ ಕುಳಿತಿದ್ದರು. ಈ ವೇಳೆ ಸಭೆಗೆ ಆಗಮಿಸಿದ್ದ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಹಾಗೂ ಎಸ್.ಎಲ್.ಭೋಜೇಗೌಡ ಅವರನ್ನು ಸಚಿವ ಜಾರ್ಜ್ ವೇದಿಕೆ ಮೇಲೆ ಆಹ್ವಾನಿಸಿದರು.

ಶಿಷ್ಟಾಚಾರದ ಪ್ರಕಾರ ಸಭೆಯ ಅಧ್ಯಕ್ಷರು, ಅಧಿಕಾರಿಗಳು ಸಭೆಯ ವೇದಿಕೆಯಲ್ಲಿರಬೇಕು, ಶಾಸಕರು ವೇದಿಕೆಯಲ್ಲಿ ಕೂರುವಂತಿಲ್ಲ ಎಂದು ಭೋಜೇಗೌಡ ಪ್ರತಿಕ್ರಿಯಿಸಿದರು. ಆಗ ಸಚಿವ ಜಾರ್ಜ್, ಸಿ.ಟಿ.ರವಿ ಹಾಗೂ ಭೋಜೇಗೌಡ ಅವರನ್ನು ವೇದಿಕೆಗೆ ಆಹ್ವಾನಿಸಿ ತಮ್ಮ ಪಕ್ಕದಲ್ಲೇ ಕೂರಿಸಿಕೊಂಡರು. ಸಚಿವ ಜಾರ್ಜ್, ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್, ಕಾಂಗ್ರೆಸ್ ಶಾಸಕರಾದ ಎಚ್.ಡಿ.ತಮ್ಮಯ್ಯ, ಕಡೂರು ಶಾಸನ ಕೆ.ಎಸ್.ಆನಂದ್, ಮೂಡಿಗೆರೆ ಶಾಸಕಿ ನಯನಾ, ತರೀಕೆರೆ ಶಾಸಕ ಶ್ರೀನಿವಾಸ್ ಮೊದಲೇ ವೇದಿಕೆಯಲ್ಲಿ ಆಸನರಾಗಿದ್ದರು.

ಸಭೆ ಆರಂಭವಾಗುತ್ತಿದ್ದಂತೆ ಶಿಷ್ಟಾಚಾರದ ವಿಚಾರವಾಗಿ ಮತ್ತೆ ತಗಾದೆ ತೆಗೆದ ಜೆಡಿಎಸ್ ವಿಪ ಸದಸ್ಯ ಭೋಜೇಗೌಡ, ಶಿಷ್ಟಾಚಾರದ ಪ್ರಕಾರ ವಿಧಾನಸಭೆ ಸದಸ್ಯರು, ವಿಪ ಸದಸ್ಯರು ವೇದಿಕೆ ಮೇಲೆ ಕೂರುವಂತಿಲ್ಲ, ಸಭೆಯ ಅಧ್ಯಕ್ಷರು, ಅಧಿಕಾರಿಗಳು ಮಾತ್ರ ವೇದಿಕೆಯಲ್ಲಿರಬೇಕು, ವಿಧಾನಪರಿಷತ್ ಉಪಸಭಾಪತಿ ಆಗಿರುವ ಕಾರಣಕ್ಕೆ ಪ್ರಾಣೇಶ್ ಅವರು ವೇದಿಕೆ ಮೇಲೆ ಕೂರಬಹುದು. ನಾನು ಹಲವು ಜಿಲ್ಲೆಗಳ ಕೆಡಿಪಿ ಸಭೆಯಲ್ಲಿ ಭಾಗವಹಿಸಿದ್ದೇನೆ, ಶಾಸಕರು, ವಿಪ ಸದಸ್ಯರು ವೇದಿಕೆ ಮೇಲೆ ಕೂತಿದ್ದನ್ನು ಎಲ್ಲೂ ನೋಡಿಲ್ಲ ಎಂದರು.

ಈ ವೇಳೆ ಕಾಂಗ್ರೆಸ್ ಶಾಸಕ ಕೆ.ಎಸ್.ಆನಂದ್ ಮಾತನಾಡಿ, ವಿಧಾನಸಭೆ ಸದಸ್ಯರು ಕೆಡಿಪಿ ಸಭೆಗಳಲ್ಲಿ ವೇದಿಕೆ ಮೇಲೆ ಕೂರಲು ಸಂವಿಧಾನಿಕ ಹಕ್ಕಿದೆ, ಆದರೆ ವಿಪ ಸದಸ್ಯರಿಗೆ ಸಂವಿಧಾನಿಕ ಹಕ್ಕಿಲ್ಲ ಎಂದರು, ಇದಕ್ಕೆ ಭೋಜೇಗೌಡ ಆಕ್ರೋಶಗೊಂಡು ಅಸಮಾಧಾನ ಹೊರಹಾಕಿದರು. ಈ ವೇಳೆ ಶಾಸಕ ಆನಂದ್ ಹಾಗೂ ಭೋಜೇಗೌಡ ನಡುವೆ ಮಾತಿನ ಚಕಮಕಿ ನಡೆಯಿತು. ಭೋಜೇಗೌಡ ಮಾತಿಗೆ ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಬೆಂಬಲ ಸೂಚಿಸಿದ್ದರಿಂದ ಪ್ರಾಣೇಶ್ ಹಾಗೂ ಆನಂದ್ ನಡುವೆಗೂ ವಾಗ್ವಾದ ನಡೆಯಿತು. ಈ ವೇಳೆ ಸಚಿವ ಜಾರ್ಜ್ ಎಲ್ಲರನ್ನು ಸಮಾಧಾನ ಪಡಿಸಲು ಮುಂದಾದರೂ ಭೋಜೇಗೌಡ ಹಾಗೂ ಸಿ.ಟಿ.ರವಿ ವೇದಿಕೆಯಿಂದ ಕೆಳಗಿಳಿದು ವೇದಿಕೆ ಮುಂದಿನ ಸಾಲಿನಲ್ಲಿ ಕುಳಿತರು. ಶಾಸಕ ಆನಂದ್ ಅವರಿಗೆ ತಿಳುವಳಿಕೆಯ ಕೊರತೆ ಇದೆ, ಸರಿಯಾದ ತಿಳುವಳಿಕೆ ಪಡೆದು ಮಾತನಾಡಬೇಕು ಎಂದು ಭೋಜೇಗೌಡ ಆನಂದ್ ವಿರುದ್ಧ ಹರಿಹಾಯ್ದರು. ಈ ವೇಳೆ ಮತ್ತೆ ವಾಗ್ವಾದ ನಡೆಯಿತು.

ಸಚಿವ ಜಾರ್ಜ್ ಮಾತನಾಡಿ, ಶಾಸಕ ಆನಂದ್ ಮಾತನಾಡಿದ ರೀತಿ ಸರಿಯಲ್ಲ, ಶಾಸಕರಿಗಿರುವಷ್ಟೇ ಅಧಿಕಾರ ವಿಪಕ್ಷ ಸದಸ್ಯರಿಗೂ ಇದೆ. ಸಭೆಯಲ್ಲಿ ಹೀಗೆಲ್ಲ ಮಾತನಾಡಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿ, ಶಿಷ್ಟಾಚಾರದ ಬಗ್ಗೆ ಮುಂದಿನ ಸಭೆಯಲ್ಲಿ ಸ್ಪಷ್ಟ ಮಾಹಿತಿ ಪಡೆದು ಅದರಂತೆ ಸಭೆ ನಡೆಸಲಾಗುವುದು, ಈ ಸಭೆಯಲ್ಲಿ ವಿಪಕ್ಷ ಸದಸ್ಯರು ವೇದಿಕೆ ಮೇಲೆ ಕೂರಬೇಕು ಎಂದು ವೇದಿಕೆಗೆ ಆಹ್ವಾನಿಸಿದರು. ಈ ಆಹ್ವಾನವನ್ನು ಭೋಜೇಗೌಡ, ಸಿ.ಟಿ.ರವಿ ನಯವಾಗಿ ತಿರಸ್ಕರಿಸಿ, ವೇದಿಕೆ ಮುಂದಿನ ಸಾಲಿನಲ್ಲೇ ಕೂರುವುದಾಗಿ ಪಟ್ಟು ಹಿಡಿದು, ಕೆಳಗೇ ಕುಳಿತುಕೊಂಡರು.

ಕುರ್ಚಿಗಾಗಿ ನಡೆದ ಈ ವಾದ, ವಿವಾದವನ್ನು ಸಭೆಯಲ್ಲಿದ್ದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಟಾರಿಯ ಸೇರಿದಂತೆ ಡಿಸಿ, ಎಸ್ಪಿ, ಜಿಪಂ ಸಿಇಒ ಹಾಗೂ ಅಧಿಕಾರಿಗಳು ಮೌನವಾಗಿ ವೀಕ್ಷಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X