Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು | ಕಾಡಾನೆ ದಾಳಿ:...

ಚಿಕ್ಕಮಗಳೂರು | ಕಾಡಾನೆ ದಾಳಿ: ಕಾರ್ಮಿಕನಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ24 Jun 2025 11:11 PM IST
share
ಚಿಕ್ಕಮಗಳೂರು | ಕಾಡಾನೆ ದಾಳಿ: ಕಾರ್ಮಿಕನಿಗೆ ಗಾಯ

ಚಿಕ್ಕಮಗಳೂರು: ಕಾಫಿ ತೋಟದ ಕೆಲಸದಿಂದ ಹಿಂತಿರುಗುತ್ತಿದ್ದಾಗ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಮಂಗಳವಾರ ಮೂಡಿಗೆರೆ ತಾಲೂಕಿನಲ್ಲಿ ವರದಿಯಾಗಿದೆ.

ಮೂಡಿಗೆರೆ ತಾಲ್ಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು, ಕಾಡಾನೆ ದಾಳಿಯಿಂದ ಕಾರ್ಮಿಕ ದಿನೇಶ್ (37) ತೀವ್ರವಾಗಿ ಗಾಯಗೊಂಡಿದ್ದಾರೆ.

ಬೈದುವಳ್ಳಿ ಗ್ರಾಮದ ಮೂರ್ತೇಶ್ ಎಂಬವರ ತೋಟಕ್ಕೆ ಕೆಲಸಕ್ಕೆ ಬಂದಿದ್ದ ವೇಳೆ ಈ ಘಟನೆ ನಡೆದಿದ್ದು, ಮೂಡಿಗೆರೆ ಸಮೀಪದ ಹೆಸಗಲ್ ಗ್ರಾಮದ ದಿನೇಶ್ ಹಾಗೂ ಇತರರು ತೋಟದ ಕೆಲಸಕ್ಕೆ ಆಗಮಿಸಿದ್ದರು. ತೋಟದ ಕೆಲಸ ಮುಗಿಸಿ ನಡೆದುಕೊಂಡು ಬರುತ್ತಿದ್ದಾಗ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದೆ. ಹಿಂಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ದಿನೇಶ್ ಅವರನ್ನು ಕಾಡಾನೆ ಸೊಂಡಿಲಿನಿಂದ ಎತ್ತಿ ಬಿಸಾಡಿದೆ. ನಂತರ ಕೆಲ ಹೊತ್ತು ಅಲ್ಲಿಯೇ ನಿಂತು ಹಿಂದಿರುಗಿದೆ.

ಕಾಡಾನೆ ಎತ್ತಿ ಎಸೆದ ರಭಸಕ್ಕೆ ದಿನೇಶ್ ಅವರ ಬೆನ್ನು, ಕುತ್ತಿಗೆ ಮತ್ತು ತಲೆ ಭಾಗಕ್ಕೆ ತೀವ್ರ ಗಾಯಗಳಾಗಿವೆ. ಈ ಸಂದರ್ಭದಲ್ಲಿ ತೋಟದ ಮಾಲಕ ಮೂರ್ತೇಶ್ ಮತ್ತು ಇತರ ಕಾರ್ಮಿಕರು ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ. ಗಾಯಗೊಂಡ ದಿನೇಶ್ ಅವರನ್ನು ತಕ್ಷಣ ಮೂಡಿಗೆರೆ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಮಗಳೂರಿಗೆ ಕರೆದೊಯ್ಯಲಾಗಿದೆ. ದಿನೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಗೆ ಮೂಡಿಗೆರೆ ಆರ್.ಎಫ್.ಓ. ಕಾವ್ಯ ಹಾಗೂ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ ಮತ್ತು ಗಾಯಾಳುವಿನ ಚಿಕಿತ್ಸೆಗೆ ಸ್ಪಂದಿಸಿದ್ದಾರೆ. ಬೈದುವಳ್ಳಿ, ಮೂಲರಹಳ್ಳಿ, ಗುತ್ತಿಹಳ್ಳಿ, ಕುಂಬರಡಿ ಮುಂತಾದ ಗ್ರಾಮಗಳಲ್ಲಿ ಕಾಡಾನೆಯೊಂದು ಕಳೆದ ಕೆಲವು ದಿನಗಳಿಂದ ಹಗಲು ರಾತ್ರಿಯೆನ್ನದೇ ಸಂಚರಿಸುತ್ತಿವೆ. ಇದರಿಂದ ಈ ಭಾಗದ ಜನ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕಾರ್ಮಿಕರು ತೋಟದ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಅರಣ್ಯ ಇಲಾಖೆ ಜೀವಹಾನಿ ಆಗುವ ಮೊದಲು ಈ ಕಾಡಾನೆಯನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Tags

wild elephantChikkamagalur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X