Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ನ.30ರೊಳಗೆ ವನ್ಯಜೀವಿ ಬೆಳೆ ಹಾನಿ ಪರಿಹಾರ...

ನ.30ರೊಳಗೆ ವನ್ಯಜೀವಿ ಬೆಳೆ ಹಾನಿ ಪರಿಹಾರ ಪಾವತಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ23 Nov 2025 11:46 PM IST
share
ನ.30ರೊಳಗೆ ವನ್ಯಜೀವಿ ಬೆಳೆ ಹಾನಿ ಪರಿಹಾರ ಪಾವತಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ
ಚಿರತೆ ಸೆರೆಗೆ 4 ಹೆಚ್ಚುವರಿ ಬೋನುಗಳನ್ನು ಇಡಲು ಅರಣ್ಯ ಸಚಿವ ಆದೇಶ

ತರೀಕೆರೆ: ವನ್ಯಜೀವಿಯಿಂದ ಆಗಿರುವ ಎಲ್ಲ ಬೆಳೆ ಹಾನಿ ಪರಿಹಾರವನ್ನು ಈ ತಿಂಗಳಾಂತ್ಯದೊಳಗೆ ಪಾವತಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತರೀಕೆರೆಯಲ್ಲಿಂದು ಶಿವಮೊಗ್ಗ, ಉಂಬ್ಳೆಬೈಲು ಮತ್ತು ಚಿಕ್ಕಮಗಳೂರು ವಿಭಾಗದ ಹಿರಿಯ ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಡು ಪ್ರಾಣಿಗಳು ತೋಟ, ಹೊಲ, ಗದ್ದೆಗೆ ನುಗ್ಗಿ ಬೆಳೆ ನಷ್ಟ ಮಾಡಿದರೆ, ಆದಷ್ಟು ಶೀಘ್ರ ಪರಿಹಾರ ಪಾವತಿಸುವಂತೆ ಇತ್ತೀಚೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸೂಚಿಸಿದರು.

ಇತ್ತೀಚೆಗೆ ನವಿಲೇಕಲ್ ಗುಡ್ಡದಲ್ಲಿ 5 ವರ್ಷದ ಬಾಲಕಿಯನ್ನು ಚಿರತೆ ಹೊತ್ತೊಯ್ದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಸಚಿವರು, ವನ್ಯಜೀವಿಯಿಂದ ಒಂದೇ ಒಂದು ಸಾವು ಸಂಭವಿಸಬಾರದು, ಆದರೆ ಕೈಮೀರಿ ಇಂತಹ ದುರ್ಘಟನೆಗಳು ನಡೆಯುತ್ತಿವೆ. ಕೂಡಲೇ ಹಾಲಿ ಇರುವ 8 ಬೋನಿನ ಜೊತೆಗೆ ಇನ್ನೂ 4 ಹೆಚ್ಚುವರಿ ಬೋನುಗಳನ್ನಿಟ್ಟು, ನಾಡಿಗೆ ಬರುವ ಚಿರತೆಗಳ ಸೆರೆಗೆ ತುರ್ತು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

2015ರ ನಂತರ ಯಾವುದೇ ಹೊಸ ಅರಣ್ಯ ಒತ್ತುವರಿ ಆಗಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಉಪಗ್ರಹ ಚಿತ್ರ ಆಧರಿಸಿ ಅರಣ್ಯ ಒತ್ತುವರಿ ಪತ್ತೆ ಹಚ್ಚಿ ಪ್ರಕರಣ ದಾಖಲಿಸಬೇಕು. ಇಲ್ಲವಾದರೆ ಆಯಾ ವಲಯದ ಅರಣ್ಯಾಧಿಕಾರಿ (ಆರ್.ಎಫ್.ಒ)ಗಳನ್ನೇ ಹೊಣೆ ಮಾಡಲಾಗುವುದು ಎಂದು ಈಶ್ವರ ಖಂಡ್ರೆ ಎಚ್ಚರಿಸಿದರು.

ಕಾಳಿಂಗ ಸರ್ಪಗಳು ತೋಟ, ಮನೆಯ ಬಳಿ ಬಂದ ಬಗ್ಗೆ ದೂರು ಬಂದರೆ ಅರಣ್ಯ ಇಲಾಖೆಯ ಸಿಬ್ಬಂದಿಯೇ ಅದನ್ನು ಹಿಡಿಯಬೇಕು. ಇದಕ್ಕಾಗಿ ಮಲೆನಾಡು ಮತ್ತು ಕೊಡಗು ಜಿಲ್ಲೆಯಲ್ಲಿನ ಪ್ರತಿ ವಲಯದಲ್ಲಿ ಕನಿಷ್ಠ 5 ಸಿಬ್ಬಂದಿಗೆ ಕಾಳಿಂಗ ಸರ್ಪ ರಕ್ಷಣೆಯ ತರಬೇತಿ ಕೊಡಿಸಬೇಕು. ಕಾಳಿಂಗ ಸರ್ಪಗಳ ರಕ್ಷಣೆಗೆ ಖಾಸಗಿ ಸಂಸ್ಥೆಗಳ ನೆರವು ಪಡೆಯಬಾರದು ಎಂದು ಅರಣ್ಯ ಸಚಿವರು ತಿಳಿಸಿದರು.

ಸೆಕ್ಷನ್ 4 ವರದಿ ಸಲ್ಲಿಸಲು ಸೂಚನೆ:

ಚಿಕ್ಕಮಗಳೂರು ಜಿಲ್ಲೆಯಲ್ಲಿ ಈಗಾಗಲೇ ಸೆಕ್ಷನ್ 4 ಆಗಿ ಸೆಕ್ಷನ್ 17 ಆಗದ ಎಷ್ಟು ಪ್ರಕರಣ ಇದೆ ಮತ್ತು ಯಾವ ಹಂತದಲ್ಲಿದೆ ಎಂಬ ಬಗ್ಗೆ ಒಂದು ವಾರದೊಳಗೆ ಸಚಿವಾಲಯಕ್ಕೆ ಮಾಹಿತಿ ನೀಡುವಂತೆ ಆದೇಶ ನೀಡಿದರು.

ಅಜ್ಜಂಪುರ ತಾಲೂಕಿನಲ್ಲಿ ವೃಕ್ಷೋದ್ಯಾನ ನಿರ್ಮಾಣಕ್ಕೆ ಜಾಗವನ್ನು ಗುರುತಿಸಿ 10 ದಿನಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ತಿಳಿಸಿದರು.

ಅರಣ್ಯ ಸಿಬ್ಬಂದಿ ಮತ್ತು ರೈತರ ನಡುವೆ ಸ್ನೇಹಭಾವ ಇರಬೇಕು. ಅನ್ನದಾತರೊಂದಿಗೆ ಮತ್ತು ಸಾರ್ವಜನಿಕರೊಂದಿಗೆ ಹೆಚ್ಚು ಜನಸ್ನೇಹಿಯಾಗಿ ವರ್ತಿಸಿ, ಅವರ ಕುಂದು ಕೊರತೆ ಆಲಿಸಿ, ಸಾಧ್ಯವಾದಷ್ಟು ಶೀಘ್ರ ಪರಿಹಾರ ಒದಗಿಸಿ. ಹಿರಿಯ ಅಧಿಕಾರಿಗಳು ಕ್ಷೇತ್ರಕ್ಕೆ ಮತ್ತು ವನ್ಯಜೀವಿ ಸಂಘರ್ಷ ಇರುವ ಕಾಡಿನಂಚಿನ ಗ್ರಾಮಗಳಿಗೆ ತೆರಳಿ ಜನಸಂಪರ್ಕ ಸಭೆಗಳನ್ನು ನಡೆಸಿ ಎಂದೂ ಸಚಿವರು ಸೂಚಿಸಿದರು.

ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X