Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ʼಭೀಮಾ ಕೋರೆಗಾಂವ್ ವಿಜಯೋತ್ಸವʼ...

ʼಭೀಮಾ ಕೋರೆಗಾಂವ್ ವಿಜಯೋತ್ಸವʼ ಜಾತಿವ್ಯವಸ್ಥೆ ವಿರುದ್ಧದ ಹೋರಾಟ : ಸಂಸದ ಶಶಿಕಾಂತ್ ಸೆಂಥಿಲ್

ವಾರ್ತಾಭಾರತಿವಾರ್ತಾಭಾರತಿ8 Jan 2025 10:54 PM IST
share
ʼಭೀಮಾ ಕೋರೆಗಾಂವ್ ವಿಜಯೋತ್ಸವʼ ಜಾತಿವ್ಯವಸ್ಥೆ ವಿರುದ್ಧದ ಹೋರಾಟ : ಸಂಸದ ಶಶಿಕಾಂತ್ ಸೆಂಥಿಲ್

ಚಿಕ್ಕಮಗಳೂರು : ಭೀಮಾ ಕೋರೆಗಾಂವ್ ವಿಜಯೋತ್ಸವ ಕೇವಲ ವಿಜಯೋತ್ಸವ ಕಾರ್ಯಕ್ರಮವಲ್ಲ, ಅದು ದೇಶದಲ್ಲಿ ಬಲವಾಗಿ ಬೇರೂರಿರುವ ಜಾತಿ ವ್ಯವಸ್ಥೆಯ ನಿರ್ಮೂಲನೆಗೆ ಆರಂಭವಾಗಿರುವ ಹೋರಾಟವಾಗಿದೆ. ಶೋಷಿತ ಸಮುದಾಯಗಳ ಸಮಾನತೆ, ಸ್ವಾತಂತ್ರ್ಯ, ಹಕ್ಕುಗಳಿಗಾಗಿ ನಡೆಯುತ್ತಿರುವ ನೀಲಿ ಕ್ರಾಂತಿಯಾಗಿದೆ ಎಂದು ಚಿಂತಕ ಹಾಗೂ ತಮಿಳುನಾಡು ಸಂಸದ ಶಶಿಕಾಂತ್ ಸೆಂಥಿಲ್ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲೆಯ ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಬುಧವಾರ ನಗರದಲ್ಲಿ ಹಮ್ಮಿಕೊಂಡಿದ್ದ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮದ ವೇದಿಕೆ ಕಾರ್ಯಕ್ರಮಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭೀಮಾ ಕೋರೆಗಾಂವ್ ವಿಜಯೋತ್ಸವ ದೇಶದ ಮೂಲೆಮೂಲೆಯಲ್ಲೂ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದೆ. ಈ ವಿಜಯೋತ್ಸವ ಕೇವಲ ಸಂಭ್ರಮ ಅಲ್ಲ, ಇದು ದೇಶದಲ್ಲಿ ಸಂವಿಧಾನ, ಕಾನೂನು ವ್ಯವಸ್ಥೆ ಜಾರಿಯಲ್ಲಿದ್ದರೂ ಹೆಮ್ಮರವಾಗಿ ಬೆಳೆದು ನಿಂತಿರುವ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಟವಾಗಿದೆ. ಶೋಷಿತ ಸಮುದಾಯಗಳ ಮೇಲೆ ಮೇಲ್ವರ್ಗದವರು ಜಾತಿ, ಧರ್ಮ, ದೇವರ ಹೆಸರಿನಲ್ಲಿ ನಡೆಸುತ್ತಿರುವ ಅತ್ಯಾಚಾರ, ದೌರ್ಜನ್ಯ, ಅಸ್ಪೃಶ್ಯತೆಯಂತಹ ಪಿಡುಗುಗಳ ವಿರುದ್ಧದ ಹೋರಾಟವಾಗಿದೆ. ಈ ಹೋರಾಟ ಮತ್ತಷ್ಟು ತೀವ್ರವಾಗಬೇಕೆಂದರೆ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಮತ್ತಷ್ಟು ಹೆಚ್ಚಾಗಬೇಕು. ಈ ಮೂಲಕ ಶೋಷಿತ ಸಮುದಾಯದವರಲ್ಲಿ ಜಾಗೃತಿ ಮೂಡಬೇಕು ಎಂದರು.

ಸ್ವಾತಂತ್ರ್ಯಪೂರ್ವದಲ್ಲಿ ಭೀಮಾ ಕೋರೆಗಾಂವ್ ಯುದ್ಧ ನಡೆದಿದ್ದು, ಆ ಕಾಲಘಟ್ಟದಲ್ಲಿ ಜಾತಿ ವ್ಯವಸ್ಥೆಯಲ್ಲಿ ಸಿಲುಕಿದ್ದ ಶೋಷಿತ ಸಮುದಾಯಗಳ ಜನರ ಸ್ಥಿತಿ ಪ್ರಾಣಿಗಳಿಗಿಂತ ಕಡೆಯಾಗಿತ್ತು. ಅಂತಹ ಕಾಲಘಟ್ಟದಲ್ಲಿ ಅಮಾನವೀಯ ಆಚರಣೆಗಳಿಗೆ ಒಳಪಟ್ಟಿದ್ದ ಮಹರ್ ಸಮುದಾಯದ 834 ಸೈನಿಕರು ಅಪ್ಪಟ ಜಾತಿವಾದಿಗಳಾಗಿದ್ದ ಪೇಶ್ವೆಗಳ 25ಸಾವಿರ ಸೈನಿಕರನ್ನು ಕೋರೆಗಾಂವ್ ಯುದ್ಧದಲ್ಲಿ ಸದೆಬಡಿದರು. ಈ ಮೂಲಕ ತಮ್ಮ ಸಹನೆಯ ಕಟ್ಟೆಯನ್ನು ಒಡೆದು ತಮ್ಮ ಸ್ವಾಭಿಮಾನ, ಆತ್ಮಗೌರವನ್ನು ಸಾರಿದ್ದರು. ಈ ಇತಿಹಾಸವನ್ನೂ ಜಾತಿವಾದಿಗಳ ಮುಚ್ಚಿ ಹಾಕಿದ್ದರು. ಆದರೆ ಅಂಬೇಡ್ಕರ್ ಅವರ ಅರಿವಿನ ಕಣ್ಣಿನಿಂದಾಗಿ ಈ ಐತಿಹಾಸಿಕ ಯುದ್ಧ ಜಗತ್ತಿನ ಎದುರು ಇಂದಿಗೂ ಚರ್ಚೆಗೊಳಪಡುತ್ತಿದೆ ಎಂದರು.

ದೇವರು, ಧರ್ಮದ ಹೆಸರಿನಲ್ಲಿ ವೈದಿಕರು ಜಾತಿ ವ್ಯವಸ್ಥೆಯನ್ನು ಅತ್ಯಂತ ಬುದ್ಧಿಪೂರ್ವಕವಾಗಿ ಸೃಷ್ಟಿಸಿದ್ದಾರೆ. ಈ ಕಾರಣಕ್ಕೆ ಈ ಜಾತಿ ವ್ಯವಸ್ಥೆ ಇಂದಿಗೂ ನಾಶವಾಗುತ್ತಿಲ್ಲ. ಬ್ರಹ್ಮನ ಬಾಯಿಯಿಂದ, ಭುಜದಿಂದ, ಕಾಲಿನಿಂದ ಎಂಬ ಪುರಾಣ ಬರೆದು ಜಾತಿ ವ್ಯವಸ್ಥೆಯಿಂದ ನಮ್ಮನ್ನು ಹೊರ ಬಾರದಂತೆ ಮಾಡಿದ್ದಾರೆ. ಜಾತಿ ವಂಶಪಾರಂಪರ್ಯವಾಗಿರುವಂತೆ ನೋಡಿಕೊಂಡಿದ್ದಾರೆ, ಮತಾಂತರ ಆದರೇ ಹಲ್ಲೆ ಮಾಡಿ ಬೆದರಿಸುತ್ತಿದ್ದಾರೆ. ಇದೆಲ್ಲವನ್ನೂ ದೇವರು, ಧರ್ಮ ತೋರಿಸಿಯೇ ಮಾಡುತ್ತಿದ್ದಾರೆ. ಪರಸ್ಪರ ಮುಟ್ಟಿದರೂ ಮೈಲಿಗೆ ಎನ್ನುತ್ತಾರೆ ಎಂದ ಅವರು, ಈ ಜಾತಿ ವ್ಯವಸ್ಥೆಯಿಂದಾಗಿ ದಲಿತ ಮಹಿಳೆಯರಲ್ಲದೇ ಎಲ್ಲ ವರ್ಗದ ಮಹಿಳೆಯರ ಸ್ವಾತಂತ್ರ್ಯ, ಸಮಾನತೆಯನ್ನೂ ಕಿತ್ತುಕೊಂಡಿದ್ದಾರೆ. ಇಂತಹ ಜಾತಿ ವ್ಯವಸ್ಥೆ ನಿರ್ಮೂಲನೆ ಅಸಾಧ್ಯ ಎಂಬಂತ ವಾತಾವರಣ ಇದ್ದರೂ ಈ ವ್ಯವಸ್ಥೆಯಲ್ಲಿ ಶೋಷಿತರು, ಮಹಿಳೆಯರು ತಮ್ಮ ಹಕ್ಕುಗಳನ್ನು ಪಡೆದು ಗೌರವದಿಂದ ಬದುಕಲು ಸಾಧುವಾಗಿರಲು ಕಾರಣ ಅಂಬೇಡ್ಕರ್ ಬರೆದ ಸಂವಿಧಾನ ಎಂದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಕೋರೆಗಾವ್ ವಿಜಯೋತ್ಸವ ಮೆರವಣಿಗೆ ನಡೆಯಿತು. ಮಹಾನಾಯಕ ಧಾರಾವಾಹಿಯ ಅಂಬೇಡ್ಕರ್ ಪಾತ್ರಧಾರಿ ಅಥರ್ವ ಕರ್ವೆ ಕಾರ್ಯಕ್ರಮದ ಆಕರ್ಷಣೆಯಾಗಿದ್ದರು. ದಲಿತ ಸಂಘಟನೆಗಳ ಒಕ್ಕೂಟದ ದಂಟರಮಕ್ಕಿ ಶ್ರೀನಿವಾಸ್, ಕೆ.ಟಿ.ರಾಧಾಕೃಷ್ಣ, ವಕೀಲ ಅನಿಲ್ ಕುಮಾರ್, ಭೀಮ್ ಆರ್ಮಿಯ ಗೌರವಾಧ್ಯಕ್ಷಹೊನ್ನೇಶ್, ಭೀಮಯ್ಯ, ಹರೀಶ್, ಮತ್ತಿಕೆರೆ ಧರ್ಮರಾಜು, ರಘು, ಹುಣಸೇಮಕಿ ಲಕ್ಷ್ಮಣ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X