Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಜನರಿಗಾಗಿ ಬಿಜೆಪಿಯವರು ಮಾಡಿರುವ ಸಾಧನೆ...

ಜನರಿಗಾಗಿ ಬಿಜೆಪಿಯವರು ಮಾಡಿರುವ ಸಾಧನೆ ಹೇಳಲಿ : ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ6 Sept 2026 12:39 AM IST
share
ಜನರಿಗಾಗಿ ಬಿಜೆಪಿಯವರು ಮಾಡಿರುವ ಸಾಧನೆ ಹೇಳಲಿ : ಸಿದ್ದರಾಮಯ್ಯ

ಬೀರೂರು : ಬಿಜೆಪಿ ನಾಯಕರು ಯಾವ ಹೋರಾಟದಲ್ಲೂ ಭಾಗವಹಿಸಿಲ್ಲ. ಮಹಾತ್ಮಾ ಗಾಂಧೀಜಿ ನೇತೃತ್ವದ ಹೋರಾಟದಿಂದ ಕಾಂಗ್ರೆಸ್ಸಿಗರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೀರೂರು ಪಟ್ಟಣದಲ್ಲಿ ಶನಿವಾರ ಆಯೋಜಿಸಲಾದ ಸಂಗೊಳ್ಳಿ ರಾಯಣ್ಣ ಮತ್ತು ದಾಸಶ್ರೇಷ್ಠ ಕನಕದಾಸರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್‌ನ ಹಿರಿಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಬಿಜೆಪಿಯ ಯಾವ ನಾಯಕರೂ ಈ ಹೋರಾಟದಲ್ಲಿ ಭಾಗವಹಿಸಿರಲಿಲ್ಲ. ಅಂತವರ ಹೆಸರೇನಾದರು ಇದ್ದರೆ ಹೇಳಿ ಎಂದು ಸಭಿಕರನ್ನು ಪ್ರಶ್ನಿಸಿದರು.

ಈ ಹಿಂದೆ ನಾನೊಂದು ದೇವಸ್ಥಾನಕ್ಕೆ ಹೋದ ಸಂದರ್ಭದಲ್ಲಿ ಕೆಲ ಯುವಕರು ಮೋದಿ.. ಮೋದಿ... ಅಂತ ಕೂಗಿದರು. ಮೋದಿ ಯುವಕರಿಗಾಗಿ ಏನು ಮಾಡಿದ್ದಾರೆ?. ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗಾಗಿ ಮಾಡಿದ ಸಾಧನೆಗಳನ್ನು ಹೇಳುತ್ತೇನೆ. ಬಿಜೆಪಿಯವರು ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.

ಜಿಲ್ಲೆಯಲ್ಲಿದ್ದ ಬಿಜೆಪಿ ಶಾಸಕರ ಅವಧಿಯಲ್ಲಿ ಏನು ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಶಾಸಕ ಆನಂದ್ ಅವರನ್ನು ಕಡೂರು ಕ್ಷೇತ್ರದ ಜನ ಆರಿಸಿದಕ್ಕಾಗಿ ಕಳೆದ 3 ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ನಮ್ಮ ಸರಕಾರದಿಂದ 1,200 ಕೋಟಿ ರೂ. ತಂದು ಕೆಲಸ ಮಾಡಿದ್ದಾರೆ. ನನ್ನ ಸಹಕಾರವೂ ಅವರಿಗಿದೆ. ನಿಮ್ಮ ಸಹಕಾರವನ್ನು ಮುಂದಿನ ಚುನಾವಣೆಯಲ್ಲಿ ಕೊಡಿ ಎಂದ ಸಿದ್ದರಾಮಯ್ಯ, ನಾನು ಕುರುಬ ಜಾತಿಯಲ್ಲಿ ಹುಟ್ಟಿದ್ದೇನೆ. ಆದರೆ ನನಗೆ ಜಾತಿ ಇಲ್ಲ, ಎಲ್ಲಾ ಬಡವರು ವಿದ್ಯಾವಂತರಾಗುವ ಜೊತೆಗೆ ಎಲ್ಲರಿಗೂ ಸರಕಾರಿ ಕೆಲಸ ಸಿಕ್ಕಾಗ ಮಾತ್ರ ಸಮಾಜದಲ್ಲಿ ಗೌರವ ಸಿಗುತ್ತದೆ, ಅದನ್ನೆ ಕನಕದಾಸರು ಬಯಸಿದ್ದು ಎಂದರು.

ಸಮಾಜದಲ್ಲಿ ಜಾತಿ ವ್ಯವಸ್ಥೆ ಹೋಗಬೇಕು. ಎಲ್ಲರೂ ಸಮನಾಗಿ ಬಾಳಬೇಕು. ಪ್ರತಿಯೊಬ್ಬರೂ ಮನುಷ್ಯರಾಗಿ ಬಾಳಬೇಕೆಂಬ ಚಿಂತನೆ ಹೊಂದಿದ್ದರು. ರಾಜ್ಯದ ಜನ ಕ್ರಾಂತಿವೀರ ರಾಯಣ್ಣ ಮತ್ತು ಕನಕದಾಸರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಕರೆ ನೀಡಿದರು.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 17 ಬಜೆಟ್ ಮಂಡಿಸಿದ್ದೇನೆ. ರಾಜ್ಯದಲ್ಲಿ ಇಷ್ಟು ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಯಾರೂ ಇಲ್ಲ. ದೇವರಾಜ ಅರಸು ಅವರಿಗಿಂತ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಕನಕದಾಸ ಪುತ್ಥಳಿ ಉದ್ಘಾಟಿಸಿ ಮಾತನಾಡಿದ ಸಾರಿಗೆ ಸಚಿವ ಭೈರತಿ ಸುರೇಶ್, ರಾಜ್ಯದಲ್ಲಿ ಅತಿ ಹೆಚ್ಚು ಆಡಳಿತ ನಡೆಸಿರುವುದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, 136 ಶಾಸಕರ ಬೆಂಬಲ ಪಡೆದು ಎರಡು ಬಾರಿ ರಾಜ್ಯದ ಆಡಳಿತ ನಡೆಸಿರುವುದರ ಜೊತೆಗೆ ಒಂದು ಕಪ್ಪು ಚುಕ್ಕೆಯನ್ನೂ ಎಳೆದುಕೊಳ್ಳದೆ ರಾಜಕಾರಣ ಮಾಡಿದ ಏಕೈಕ ವ್ಯಕ್ತಿ. ಇಂತಹ ವ್ಯಕ್ತಿ ನಮ್ಮ ಕುರುಬ ಜನಾಂಗದಲ್ಲಿ ಜನಿಸಿರುವುದು ನಮ್ಮ ಹೆಮ್ಮೆ ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿದರು. ಕಡೂರು ಶಾಸಕ ಆನಂದ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಶಾಸಕರಾದ ಎಚ್.ಡಿ.ತಮ್ಮಯ್ಯ, ಜಿ.ಎಚ್.ಶ್ರೀನಿವಾಸ್, ಗಾಯತ್ರಿ ಶಾಂತೇಗೌಡ, ಕುರುಬ ಸಮಾಜದ ಅಧ್ಯಕ್ಷ ತಿಮ್ಮಯ್ಯ, ಬೀರೂರು ದೇವರಾಜ್, ಕಡೂರು ಕುರುಬ ಸಂಘದ ಅಧ್ಯಕ್ಷ ಭೋಗಪ್ಪ, ಸಿಡಿಎ ಅಧ್ಯಕ್ಷ ಮಂಜುನಾಥ್, ಎ.ಎನ್.ಮಹೇಶ್, ಜಿಪಂ ಮಾಜಿ ಸದಸ್ಯ ಬಿ.ಪಿ.ನಾಗರಾಜ್, ತೋಟಪ್ಪ ಸೇರಿದಂತೆ ಕುರುಬ ಸಮಾಜದ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

‘ಚುನಾವಣೆಗೆ ಸ್ಪರ್ಧಿಸುವುದಿಲ್ಲ’

ನನ್ನ ಶಾಸಕತ್ವ ಅವಧಿ ಎರಡು ವರ್ಷವಿದೆ. ನನಗೀಗ 79 ವರ್ಷ ತುಂಬಿದ್ದು, ಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ, ಸಕ್ರಿಯವಾಗಿ ರಾಜಕಾರಣದಲ್ಲಿ ಇರುತ್ತೇನೆ. ನಾನು ಹೈಕಮಾಂಡ್, ರಾಹುಲ್ ಗಾಂಧಿಯವರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡು ರಾಜೀನಾಮೆ ನೀಡಿದ್ದೇನೆ. ಕೊಟ್ಟ ಮಾತಿನಂತೆ ನಡೆದ ಸರಕಾರವಿದ್ದರೆ ಅದು ಸಿದ್ದರಾಮಯ್ಯನವರ ಸರಕಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

Tags

Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X