Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಸರಕಾರ ಬಜೆಟ್‍ನಲ್ಲಿ ಘೋಷಿಸಿದ ಎಲ್ಲ...

ಸರಕಾರ ಬಜೆಟ್‍ನಲ್ಲಿ ಘೋಷಿಸಿದ ಎಲ್ಲ ಯೋಜನೆಗಳ ಜಾರಿಗೆ ಕ್ರಮವಹಿಸಿದೆ: ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ16 Jan 2024 10:03 PM IST
share
ಸರಕಾರ ಬಜೆಟ್‍ನಲ್ಲಿ ಘೋಷಿಸಿದ ಎಲ್ಲ ಯೋಜನೆಗಳ ಜಾರಿಗೆ ಕ್ರಮವಹಿಸಿದೆ: ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು: ಕಳೆದ ಬಜೆಟ್‍ನಲ್ಲಿ ಮೀಸಲಿರಿಸಲಾಗಿದ್ದ ಅನುದಾನವನ್ನು ಕಡಿಮೆ ಮಾಡದೆ ಅಭಿವೃದ್ಧಿಗೆ ಪೂರಕವಾಗಿ ರಾಜ್ಯ ಸರಕಾರ ಜನಪರವಾಗಿ ಆಡಳಿತ ನೀಡುತ್ತಿದೆ. ಬಜೆಟ್‍ನಲ್ಲಿ ಘೋಷಣೆ ಮಾಡಿದ ಎಲ್ಲ ಯೋಜನೆಗಳಿಗೂ ಅನುದಾನ ಸಿಗಲಿದೆ ಎಂದು ಇಂಧನ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ನಗರದ ಬೈಪಾಸ್ ರಸ್ತೆಯ ಕಲ್ಯಾಣ ನಗರದ ನೀಲಾಂಬಿಕ ರಸ್ತೆಯಲ್ಲಿ ನಗರೋತ್ತಾನ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು 45 ಸಾವಿರ ಕೋಟಿ ವೆಚ್ಚದಲ್ಲಿ ಅನುಷ್ಠಾನ ಮಾಡಲಾಗಿದ್ದು, ಇದಕ್ಕೂ ಬಜೆಟ್‍ಗೂ ಯಾವುದೇ ಸಂಬಂಧ ಇಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಬದ್ಧತೆಯಿಂದ ಸರಕಾರ ಕೆಲಸ ಮಾಡುತ್ತಿದ್ದು, ಸಂಕಷ್ಟದಲ್ಲಿದ್ದ ಬಡವರು, ಮಧ್ಯಮ ವರ್ಗದ ಜನರನ್ನು ಆರ್ಥಿಕವಾಗಿ ಮೇಲೆತ್ತಲು ಸರಕಾರ ಕ್ರಮವಹಿಸಿದೆ ಎಂದರು.

ಈಗಾಗಲೇ ಇಂಧನ ಇಲಾಖೆಯಿಂದ ಸುಮಾರು 1.65 ಕೋಟಿ ಜನರಿಗೆ ಉಚಿತ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ ಹಿಂದೆ ಅರ್ಜಿ ಸಲ್ಲಿಸದವರಿಗೆ ಈಗಲೂ ಅರ್ಜಿ ಸಲ್ಲಿಸಲು ಅವಕಾಶವಿದೆ. ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಿಂದ ಹಣ ವರ್ಗಾವಣೆ ಮಾಡಲಾಗುತ್ತಿದೆ. ಅದೇ ರೀತಿ ಶಕ್ತಿ ಯೋಜನೆಯಿಂದ 60 ಲಕ್ಷ ಮಹಿಳೆಯರು ಪ್ರಯೋಜನ ಪಡೆಯುತ್ತಿದ್ದಾರೆ. ಇದರಿಂದ ದೇವಾಲಯಗಳ ಹುಂಡಿಯಲ್ಲಿ ಹೆಚ್ಚು ಹಣ ಸಂಗ್ರಹವಾಗುತ್ತಿದೆ ಎಂದು ಹೇಳಿದರು.

ಅನ್ನಭಾಗ್ಯ ಯೋಜನೆ ಜಾರಿಗೆ ಸರಕಾರ ಅಕ್ಕಿ ಕೊಡಲಿಲ್ಲ ಎಂದು ಆರೋಪಿಸಿದ ಅವರು, 5ಕೆ.ಜಿ ಅಕ್ಕಿ ಜೊತೆಗೆ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ 170 ರೂ.ನಂತೆ ಡಿಬಿಟಿ ಮೂಲಕ ಹಣ ಸಂದಾಯ ಮಾಡಲಾಗಿದೆ. ಯುವನಿಧಿ ಯೋಜನೆಯನ್ನು ಈಗಾಗಲೇ ಚಾಲನೆ ನೀಡಿದ್ದು, ಇದರ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಯಾವುದೇ ಅಡ್ಡಿ ಇಲ್ಲದೇ ಜಾರಿ ಮಾಡಲಾಗುತ್ತಿದೆ ಎಂದರು.

ಶಾಸಕ ಎಚ್.ಡಿ.ತಮ್ಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಬಡಾವಣೆಯಲ್ಲಿನ ರಸ್ತೆ ಕಾಮಗಾರಿಯನ್ನು ಸುಮಾರು 20 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಸರಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ, ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಉಪಾಧ್ಯಕ್ಷ ಅಮೃತೇಶ್ ಚನ್ನಕೇಶವ, ಜಿಲ್ಲಾಧಿಕಾರಿ ಮೀನಾ ನಾಗರಾಜ್. ಎಸ್ಪಿ ಡಾ.ವಿಕ್ರಮ ಅಮಟೆ, ಯೋಜನಾ ನಿರ್ದೇಶಕಿ ನಾಗರತ್ನ ಪೌರಾಯುಕ್ತ ಬಿ.ಸಿ.ಬಸವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಸೇರಿದಂತೆ ನಗರಸಭೆಯ ಸ್ಥಳೀಯ ಸದಸ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Tags

KJ George
share
ವಾರ್ತಾಭಾರತಿ
ವಾರ್ತಾಭಾರತಿ
Next Story
X