Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿತ್ರದುರ್ಗ
  4. 2028ರ ವೇಳೆ ಭದ್ರಾ ಮೇಲ್ದಂಡೆ ಯೋಜನೆ...

2028ರ ವೇಳೆ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ : ಸಚಿವ ಟಿ.ರಘುಮೂರ್ತಿ

ವಾರ್ತಾಭಾರತಿವಾರ್ತಾಭಾರತಿ6 Sept 2026 6:19 PM IST
share
2028ರ ವೇಳೆ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ : ಸಚಿವ ಟಿ.ರಘುಮೂರ್ತಿ


ಚಿತ್ರದುರ್ಗ : ಬಯಲುಸೀಮೆಯ ಜಿಲ್ಲೆಗಳಿಗೆ ನೀರು ಒದಗಿಸುವ ‘ಭದ್ರಾ ಮೇಲ್ದಂಡೆ ಯೋಜನೆ’ ಅನುಷ್ಟಾನದ ವಿಚಾರದಲ್ಲಿ ಯಾವುದೇ ರಾಜಕಾರಣ ಮಾಡುವುದಿಲ್ಲ. 2028ರ ವೇಳೆಗೆ ಯೋಜನೆಯನ್ನು ಪೂರ್ಣಗೊಳಿಸಲು ಅಗತ್ಯ ಕ್ರಮವಹಿಲಾಗುವುದು. ನಾಲ್ಕು ಜಿಲ್ಲೆಗಳ ರೈತರ ಹಿತದೃಷ್ಟಿಯಿಂದ ಪ್ರತಿಯೊಬ್ಬರೂ ಪಕ್ಷಾತೀತವಾಗಿ ಶ್ರಮಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಹೇಳಿದರು.

ರವಿವಾರ ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ರಮಕ್ಕೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಇನ್‍ಟೇಕ್ ಪಾಯಿಂಟ್ (ಲಕ್ಕವಳ್ಳಿ ಅಣೆಕಟ್ಟು) ನಲ್ಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಶಾಖಾ ಕಾಲುವೆ ಕಾಮಗಾರಿಗೆ ಒತ್ತು ನೀಡಿ ಶ್ರಮಿಸಿದ ಡಿ.ಸುಧಾಕರ್, ಟಿ.ಬಿ.ಜಯಚಂದ್ರ ಸಹಿತ ಎಲ್ಲ ಹಿರಿಯ ನಾಯಕರ ಕೊಡುಗೆಯನ್ನು ಸ್ಮರಿಸುತ್ತೇನೆ ಎಂದರು.

ಇಂದಿನಿಂದ ಹರಿದ ನೀರು ಇನ್ನು ಒಂದು ವಾರದಲ್ಲಿ ಗೋನೂರು ತಲುಪಲಿದ್ದು, ನೀರು ಬಂದ ನಂತರ ಈ ಯೋಜನೆಯ ಸಾಕಾರಕ್ಕೆ ಕಾರಣಕರ್ತರಾದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಲ್ಲ ನಾಯಕರನ್ನು ಆಹ್ವಾನಿಸಿ, ಪಕ್ಷಾತೀತವಾಗಿ ಚಿತ್ರದುರ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಟಿ.ರಘುಮೂರ್ತಿ ಪ್ರಕಟಿಸಿದರು.

ದಶಕಗಳ ಕನಸು: ಇಂದು ಇತಿಹಾಸದಲ್ಲಿ ನೆನಪಿಡಬೇಕಾದ ಮಹತ್ವದ ದಿನ. ಐದಾರು ದಶಕಗಳಿಂದ ಬಯಲುಸೀಮೆ ಜನರು ಕಂಡಿದ್ದ ಭದ್ರಾ ಮೇಲ್ದಂಡೆ ಯೋಜನೆಯ ಕನಸು ನನಸಾಗುತ್ತಿದೆ. ಈ ಯೋಜನೆಗೆ ಮುನ್ನುಡಿ ಬರೆದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಹಾಗೂ ಸಚಿವರಾಗಿದ್ದ ಟಿ.ಬಿ.ಜಯಚಂದ್ರ ಸೇರಿದಂತೆ ಯೋಜನೆಯ ಸಾಕಾರಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬ ಹೋರಾಟಗಾರರು, ರೈತರನ್ನು ಸ್ಮರಿಸುತ್ತೇನೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಗೆ ತುಂಗಾದಿಂದ 17.4 ಟಿಎಂಸಿ ಹಾಗೂ ಭದ್ರಾದಿಂದ 12.5 ಟಿಎಂಸಿ ಸೇರಿ ಒಟ್ಟು 29.9ಟಿಎಂಸಿ ನೀರು ಹಂಚಿಕೆಯಾಗಿದೆ. ಪ್ರಸ್ತುತ ಯೋಜನೆ ವೆಚ್ಚ 21,500 ಕೋಟಿ ರೂ.ಆಗಿದೆ. ಯೋಜನೆಯಿಂದ ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಸೇರಿದಂತೆ 4 ಜಿಲ್ಲೆಗಳ 12 ತಾಲೂಕುಗಳಿಗೆ ಅನುಕೂಲವಾಗಲಿದೆ. ಒಟ್ಟು 2,25,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದರು.

ಒಟ್ಟು 367 ಕೆರೆಗಳಿಗೆ ನೀರು ತುಂಬಿಸುವ ಬೃಹತ್ ಯೋಜನೆ ಇದಾಗಿದೆ. ತುಂಗಾದಿಂದ ಬರಬೇಕಾದ 17.4 ಟಿಎಂಸಿ ನೀರಿನ ಕಾಮಗಾರಿಗಳು ಎರಡು ಟವರ್ ಕೆಲಸ ಮುಂದಿನ ಎರಡು ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಧರಂಸಿಂಗ್, ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ಅವಧಿಯಿಂದ ಹಿಡಿದು ಸಿದ್ದರಾಮಯ್ಯರ ಸರಕಾರದ ವರೆಗೆ ಹಲವು ಹಂತಗಳಲ್ಲಿ ಅನುದಾನ ಹಂಚಿಕೆಯಾಗಿದೆ ಎಂದರು.

ಈ ವೇಳೆ ಹೊಸದಿಲ್ಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ಶ್ರೀನಿವಾಸ್, ಬಿ.ಜಿ. ಗೋವಿಂದಪ್ಪ, ಎಂ.ಚಂದ್ರಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಗಂಜಿಗಟ್ಟೆ ಶಿವಣ್ಣ, ಜನ ಪ್ರತಿನಿಧಿಗಳು, ಅಧಿಕಾರಿಗಳು ಹಾಜರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X