Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಟಾಕ್ಸಿಸ್ ಗೆ ನೂರು ದಿನಗಳು ಬಾಕಿ; ಕೌಂಟ್...

ಟಾಕ್ಸಿಸ್ ಗೆ ನೂರು ದಿನಗಳು ಬಾಕಿ; ಕೌಂಟ್ ಡೌನ್ ಆರಂಭಿಸಿದ ಯಶ್!

ವಾರ್ತಾಭಾರತಿವಾರ್ತಾಭಾರತಿ9 Dec 2025 7:24 PM IST
share
ಟಾಕ್ಸಿಸ್ ಗೆ ನೂರು ದಿನಗಳು ಬಾಕಿ; ಕೌಂಟ್ ಡೌನ್ ಆರಂಭಿಸಿದ ಯಶ್!

ಖ್ಯಾತ ನಟ ಯಶ್ ತಮ್ಮ ಮುಂದಿನ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿ ಸಿನೆಮಾ ಬಿಡಗಡೆಗೆ ʼಕೌಂಟ್ ಡೌನ್ʼ ಆರಂಭಿಸಿದ್ದಾರೆ. ‘ಟಾಕ್ಸಿಸ್: ಎ ಫೇರಿಟೇಲ್ ಫಾರ್ ಗ್ರೋನಪ್ಸ್’ ಸಿನಿಮಾ ಮಾರ್ಚ್ 19ರಂದು ಯುಗಾದಿಗೆ ಬಿಡುಗಡೆಯಾಗಲಿದೆ. ಸಿನಿಮಾ ಬಿಡುಗಡೆಗೆ ನೂರು ದಿನಗಳು ಬಾಕಿ ಇವೆ. ಮಾರ್ಚ್ 19 ಗುರುವಾರ ಬರುವ ಕಾರಣ ಸಿನಿಮಾಗೆ ದೀರ್ಘ ವಾರಾಂತ್ಯ ಸಿಗುತ್ತದೆ. ಹೀಗಾಗಿ ಸಿನಿಮಾಗೆ ಉತ್ತಮ ಓಪನಿಂಗ್ ನಿರೀಕ್ಷೆಯಲ್ಲಿದ್ದಾರೆ ಯಶ್.

ಸ್ನಾನದ ತೊಟ್ಟಿಯಲ್ಲಿ ಕುಳಿತ ಪೋಸ್ಟರ್:

ಪೋಸ್ಟರ್ ನಲ್ಲಿ ಯಶ್ ರಕ್ತ ಸಿಕ್ತ ಸ್ನಾನದ ತೊಟ್ಟಿಯಲ್ಲಿ ಕೂದಲು ಬಿಚ್ಚಿ ಹಾಕಿ ಬೆನ್ನು ತೋರಿಸಿ ಕುಳಿತಿದ್ದಾರೆ. ಅವರ ಮುಖ ಮರೆಯಾಗಿರುವುದು ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ.

ಹಾಲಿವುಡ್ ನಿರ್ದೇಶಕರ ಸಾಹಸ ದೃಶ್ಯ:

“ಟಾಕ್ಸಿಸ್” ಸಿನಿಮಾದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ರಾಜೀವ್ ರವಿಯವರ ಛಾಯಾಗ್ರಹಣವಿದೆ. ಕೆಜಿಎಫ್ ಗೆ ಸಂಗೀತ ನೀಡಿರುವ ರವಿ ಬಸ್ರೂರ್ ‘ಟಾಕ್ಸಿಸ್’ಗೂ ಸಂಗೀತ ನೀಡಿದ್ದಾರೆ. ‘ಜಾನ್ ವಿಕ್’ ಸಿನಿಮಾದ ಕೆಲಸಕ್ಕಾಗಿ ಪ್ರಸಿದ್ಧಿ ಪಡೆದಿರುವ ಹಾಲಿವುಡ್ ಚಲನಚಿತ್ರ ನಿರ್ದೇಶಕ ಜೆಜೆ ಪೆರ್ರಿ ಸಿನಿಮಾದ ಕೆಲವು ಸಾಹಸ ದೃಶ್ಯಗಳನ್ನು ವಿನ್ಯಾಸಗೊಳಿಸಿದ್ದಾರೆ. ಹೀಗಾಗಿ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

ಪ್ಯಾನ್ ಇಂಡಿಯಾ ಸಿನಿಮಾ:

ಟಾಕ್ಸಿಕ್’ ಸಿನಿಮಾ ಚಿತ್ರಕತೆಯನ್ನು ಯಶ್ ಮತ್ತು ಗೀತು ಮೋಹನ್ ದಾಸ್ ಜೊತೆಗೂಡಿ ಬರೆದಿದ್ದಾರೆ. ಗೀತು ಮೋಹನ್ ದಾಸ್ ಈ ಸಿನಿಮಾದ ನಿರ್ದೇಶಕರೂ ಹೌದು. ಇಂಗ್ಲಿಷ್ ಮತ್ತು ಕನ್ನಡದಲ್ಲಿ ಜೊತೆಗೂಡಿ ನಿರ್ದೇಶಿಸಲಾಗಿರುವ ಸಿನಿಮಾವನ್ನು ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಸೇರಿದಂತೆ ಅನೇಕ ಭಾಷೆಗಳಲ್ಲಿ ಡಬ್ಬಿಂಗ್ ಮಾಡುವ ಉದ್ದೇಶವಿದೆ.

ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಶನ್ಸ್ ಅಡಿಯಲ್ಲಿ ವೆಂಕಟ್ ಕೆ ನಾರಾಯಣ ಮತ್ತು ಯಶ್ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಹೀಗಾಗಿ ಈ ಸಿನಿಮಾವನ್ನು ಮುಂದಿನ ವರ್ಷದ ಅತಿ ದೊಡ್ಡ ರಿಲೀಸ್ ಎನ್ನಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X