Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಆರೇ ದಿನದಲ್ಲಿ 600 ಕೋಟಿ ರೂ. ಬಾಚಿದ...

ಆರೇ ದಿನದಲ್ಲಿ 600 ಕೋಟಿ ರೂ. ಬಾಚಿದ ‘ಜವಾನ್’:‌ ಹೊಸ ಮೈಲಿಗಲ್ಲು ನಿರ್ಮಿಸಿದ ಶಾರೂಖ್‌ ಚಿತ್ರ!

ವಾರ್ತಾಭಾರತಿವಾರ್ತಾಭಾರತಿ13 Sep 2023 6:22 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆರೇ ದಿನದಲ್ಲಿ 600 ಕೋಟಿ ರೂ. ಬಾಚಿದ ‘ಜವಾನ್’:‌ ಹೊಸ ಮೈಲಿಗಲ್ಲು ನಿರ್ಮಿಸಿದ ಶಾರೂಖ್‌ ಚಿತ್ರ!

ಮುಂಬೈ: ಶಾರೂಖ್ ಖಾನ್ ಅಭಿನಯದ 'ಜವಾನ್' ಸಿನೆಮಾ ಮತ್ತೊಂದು ಮೈಲಿಗಲ್ಲಿನತ್ತ ಸಾಗುತ್ತಿದೆ. ಸೆಪ್ಟೆಂಬರ್ 7 ರಂದು ಬಿಡುಗಡೆಯಾದ ಈ ಚಿತ್ರವು ಭಾರತದಲ್ಲಿ ಸುಮಾರು 350 ಕೋಟಿ ರೂ.ಗಳನ್ನು ಗಳಿಸಿದ್ದು, ಕೇವಲ ಒಂದು ವಾರದೊಳಗೆ ವಿಶ್ವಾದ್ಯಂತ 600 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ವರದಿಯಾಗಿದೆ.

ತಮಿಳಿನ ಯಶಸ್ವಿ ನಿರ್ದೇಶಕ ಅಟ್ಲಿ ನಿರ್ದೇಶನದ, ಆ್ಯಕ್ಷನ್-ಥ್ರಿಲ್ಲರ್ ಚಿತ್ರವಾದ ಜವಾನ್‌, ಮೊದಲ ದಿನದಂದೇ 74.50 ಕೋಟಿ ರೂ.ಗಳನ್ನು ಗಳಿಸಿತ್ತು. ವಿಶ್ವಾದ್ಯಂತ ಮೊದಲ ದಿನದಂದು 129.06 ಕೋಟಿ ರೂಪಾಯಿಗಳನ್ನು ಗಳಿಸುವ ಮೂಲಕ ದಾಖಲೆಯನ್ನು ಸೃಷ್ಟಿಸಿತ್ತು.

ವರದಿಗಳ ಪ್ರಕಾರ, ಚಿತ್ರ ಬಿಡುಗಡೆಯಾದ 6 ನೇ ದಿನದಂದು (ಸೆಪ್ಟೆಂಬರ್ 12) 'ಜವಾನ್' ಭಾರತದಲ್ಲಿ 26.50 ಕೋಟಿ ರೂ. ಗಳಿಸಿದ್ದು, ಆ ಮೂಲಕ ಕೇವಲ ಭಾರತದಲ್ಲಿ ಒಟ್ಟು 345.58 ಕೋಟಿ ರೂ. ಗಳನ್ನು ಕಲೆಕ್ಷನ್‌ ಮಾಡಿದೆ.

'ಗದರ್ 2' ಮತ್ತು 'ಪಠಾನ್' ಅನ್ನು ಹಿಂದಿಕ್ಕಿದ ಜವಾನ್‌, ಅತ್ಯಂತ ವೇಗವಾಗಿ 300 ಕೋಟಿ ಕ್ಲಬ್‌ಗೆ ಪ್ರವೇಶಿಸಿದ ಚಲನಚಿತ್ರವಾಗಿ ದಾಖಲೆ ಸೃಷ್ಟಿಸಿದೆ. 'ಜವಾನ್' ಕೇವಲ 6 ದಿನದಲ್ಲಿ ಈ ದಾಖಲೆ ಸೃಷ್ಟಿಸಿದ್ದು, 'ಪಠಾಣ್' 7ನೇ ದಿನದಲ್ಲಿ ಮತ್ತು 'ಗದರ್ 2' 8ನೇ ದಿನದಲ್ಲಿ 300 ಕೋಟಿ ಕ್ಲಬ್‌ ಸೇರಿತ್ತು.

ಜಾಗತಿಕ ಮಟ್ಟದಲ್ಲಿ, 'ಜವಾನ್' ಈಗಾಗಲೇ ಬಾಕ್ಸ್ ಆಫೀಸ್‌ನಲ್ಲಿ 600 ಕೋಟಿ ರೂಪಾಯಿಗಳ ಗಡಿ ದಾಟಿದೆ ಎಂದು ಸಿನೆಮಾ ವ್ಯಾಪಾರ ತಜ್ಞ ರಮೇಶ್ ಬಾಲಾ ಹೇಳಿದ್ದಾರೆ.

ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಸೆಪ್ಟೆಂಬರ್ 7 ರಂದು ವಿಶ್ವಾದ್ಯಂತ ಬಿಡುಗಡೆಯಾದ ಈ ಚಿತ್ರದಲ್ಲಿ ಶಾರುಖ್ ಖಾನ್ ಜೊತೆಗೆ ವಿಜಯ್ ಸೇತುಪತಿ, ನಯನತಾರಾ, ಸನ್ಯಾ ಮಲ್ಹೋತ್ರಾ ಮತ್ತು ಪ್ರಿಯಾಮಣಿ ನಟಿಸಿದ್ದಾರೆ. ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರವು ಕಮರ್ಷಿಯಲ್ ಎಂಟರ್‌ಟೈನರ್ ಆಗಿದ್ದು ಎಸ್‌ಆರ್‌ಕೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪುಣೆ, ಮುಂಬೈ, ಹೈದರಾಬಾದ್, ಚೆನ್ನೈ, ರಾಜಸ್ಥಾನ ಮತ್ತು ಔರಂಗಾಬಾದ್‌ನಲ್ಲಿ ಚಿತ್ರೀಕರಣ ನಡೆದಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X