Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಭಾರತದಿಂದ ಅಧಿಕೃತವಾಗಿ ಆಸ್ಕರ್...

ಭಾರತದಿಂದ ಅಧಿಕೃತವಾಗಿ ಆಸ್ಕರ್ ಪ್ರವೇಶಕ್ಕೆ ಆಯ್ಕೆಯಾದ ಮರಾಠಿ ಥ್ರಿಲ್ಲರ್ ಸಿನಿಮಾ ‘ಗೊಂಡಲ್’

ವಾರ್ತಾಭಾರತಿವಾರ್ತಾಭಾರತಿ18 Sept 2026 8:03 PM IST
share
ಭಾರತದಿಂದ ಅಧಿಕೃತವಾಗಿ ಆಸ್ಕರ್ ಪ್ರವೇಶಕ್ಕೆ ಆಯ್ಕೆಯಾದ ಮರಾಠಿ ಥ್ರಿಲ್ಲರ್ ಸಿನಿಮಾ ‘ಗೊಂಡಲ್’

ಮಹಾರಾಷ್ಟ್ರದ ಸಾಂಪ್ರದಾಯಿಕ ‘ಗೊಂಡಲ್’ ಆಚರಣೆ ಮತ್ತು ಜಾನಪದ ಪ್ರದರ್ಶನ ಕಲೆಯ ಹಿನ್ನೆಲೆಯಲ್ಲಿ ಸಾಗುವ ಈ ಸಿನಿಮಾವು ಸುಮನ್ ಎಂಬ ವಿವಾಹಿತ ಮಹಿಳೆಯ ಕತೆಯನ್ನು ಹೇಳುತ್ತದೆ.

ಮರಾಠಿ ಥ್ರಿಲ್ಲರ್ ಚಲನಚಿತ್ರವಾಗಿರುವ ‘ಗೊಂಡಲ್’ 2027ರ ಆಸ್ಕರ್ ಪ್ರಶಸ್ತಿಗೆ ಭಾರತದ ಅಧಿಕೃತ ಸಿನಿಮಾವಾಗಿ ಆಯ್ಕೆಯಾಗಿದೆ ಎಂದು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಶುಕ್ರವಾರ ಘೋಷಿಸಿದೆ. ಈ ಸ್ಪರ್ಧೆಯಲ್ಲಿ ನಾಗಾ ಭಾಷೆಯ ‘ಅಂಗ್’ ಮತ್ತು ತಮಿಳು ಚಿತ್ರ ‘ಡೊರೊಥಿ’ ಸೇರಿದ್ದವು. ಸಂತೋಷ್ ದಾವಖರ್ ನಿರ್ದೇಶನದ ಈ ಸಿನಿಮಾವು 99ನೇ ಅಕಾಡೆಮಿ ಪ್ರಶಸ್ತಿಯಲ್ಲಿ ‘ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ’ (Best International Feature) ವಿಭಾಗದಲ್ಲಿ ದೇಶವನ್ನು ಪ್ರತಿನಿಧಿಸಲಿದೆ. ಈ ಸಿನಿಮಾದ ನಿರ್ದೇಶಕ ಸಂತೋಷ್ ದಾವಖರ್ ಅವರು 2025ರ ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಅತ್ಯುತ್ತಮ ನಿರ್ದೇಶಕ’ ವಿಭಾಗದ ‘ಸಿಲ್ವರ್ ಪೀಕಾಕ್’ ಪ್ರಶಸ್ತಿ ಗೆದ್ದಿದ್ದರು.

ಆಯ್ಕೆ ಸಮಿತಿಯಲ್ಲಿ ಪಿ. ಶೇಷಾದ್ರಿ, ವಿಜಯ್ ಪಾಟ್ಕರ್, ಹುಟು ಕನೋಡಿಯಾ, ಶಾಂತಿ ಕುಮಾರ್, ಸಂದೀಪ್ ಪರಾಶರ್, ಸಂಜಯ್ ಪಾಟೀಲ್, ಸಾಬು ಜೋಸೆಫ್, ಅನಿಲ್ ಥಾಮಸ್, ವಿವೇಕ್ ವಸ್ವಾನಿ, ಬಿಜೋನ್ ದಾಸ್ಗುಪ್ತಾ, ಹಾಸನ್, ವಸನ್ ಮತ್ತು ತನಿಷ್ಠಾ ಚಟರ್ಜಿ ಅವರು ಸದಸ್ಯರಾಗಿದ್ದರು.

ಒಟ್ಟು 33 ಚಿತ್ರಗಳನ್ನು ಪರಿಶೀಲನೆಗೆ ಸಲ್ಲಿಸಲಾಗಿತ್ತು. ಅವುಗಳಲ್ಲಿ 14 ಹಿಂದಿ, ತಲಾ ನಾಲ್ಕು ಮರಾಠಿ, ತೆಲುಗು ಮತ್ತು ಗುಜರಾತಿ, ಮೂರು ತಮಿಳು ಹಾಗೂ ತಲಾ ಒಂದು ಮಲಯಾಳಂ, ಕೊನ್ಯಾಕ್ ಮತ್ತು ನೇಪಾಳಿ ಭಾಷೆಯ ಚಿತ್ರಗಳಿದ್ದವು. ಇವುಗಳಲ್ಲಿ ಒಂದು ಮೂಕಿ ಚಿತ್ರವೂ ಸೇರಿತ್ತು.

ಗೊಂಡಲ್ ಚಿತ್ರದ ಕತೆ ಗ್ರಾಮೀಣ ಮಹಾರಾಷ್ಟ್ರದಲ್ಲಿ ನೆಲೆಗೊಂಡಿದೆ. ಮಹಾರಾಷ್ಟ್ರದ ಸಾಂಪ್ರದಾಯಿಕ ‘ಗೊಂಡಲ್’ ಆಚರಣೆ ಮತ್ತು ಜಾನಪದ ಪ್ರದರ್ಶನ ಕಲೆಯ ಹಿನ್ನೆಲೆಯಲ್ಲಿ ಸಾಗುವ ಈ ಸಿನಿಮಾವು ಸುಮನ್ ಎಂಬ ವಿವಾಹಿತ ಮಹಿಳೆಯ ಕತೆಯನ್ನು ಹೇಳುತ್ತದೆ. ಸಾಂಪ್ರದಾಯಿಕ ಧಾರ್ಮಿಕ ವಿಧಿಯನ್ನು ಮನೋವೈಜ್ಞಾನಿಕ ಮತ್ತು ಸಾಂಸ್ಕೃತಿಕ ಥ್ರಿಲ್ಲರ್ ನ ಹಿನ್ನೆಲೆಯಾಗಿ ಬಳಸಿಕೊಳ್ಳಲಾಗಿದೆ. ಸಂಬಂಧಗಳು, ಬಯಕೆ ಮತ್ತು ವಂಚನೆಗಳು ಮುಖಾಮುಖಿಯಾದಾಗ ಆಕೆಯ ಜೀವನ ಅನಿರೀಕ್ಷಿತ ತಿರುವು ಪಡೆಯುತ್ತದೆ. ದೈನಂದಿನ ಸಂಬಂಧಗಳ ಕತೆಯಾಗಿ ಪ್ರಾರಂಭವಾಗಿ, ಸುಮನ್ ಕಠಿಣ ಸನ್ನಿವೇಶದಲ್ಲಿ ಸಿಲುಕಿ ಹೊರಬರಲು ಪ್ರಯತ್ನಿಸುವಾಗ ಕ್ರಮೇಣ ಥ್ರಿಲ್ಲರ್ ಆಗಿ ಬದಲಾಗುತ್ತದೆ. ಶುಭ ಸಂದರ್ಭಗಳಲ್ಲಿ ರಾತ್ರಿಯಿಡೀ ನಡೆಯುವ ಈ ಜನಪದ ಪ್ರದರ್ಶನವು ಸಂಬಂಧಗಳು, ಅಸೂಯೆ, ಬಯಕೆ ಮತ್ತು ಹಿಂಸೆಯು ಕ್ರಮೇಣವಾಗಿ ಬಹಿರಂಗಗೊಳ್ಳುವ ಹಿನ್ನೆಲೆಯಾಗುತ್ತದೆ.

ಈ ಚಿತ್ರದಲ್ಲಿ ಕಿಶೋರ್ ಕದಮ್, ಇಷಿತಾ ದೇಶಮುಖ್, ಯೋಗೇಶ್ ಸೋಹೋನಿ, ನಿಷಾದ್ ಭೋಯಿರ್, ಅನುಜ್ ಪ್ರಭು ಮತ್ತು ಇತರರು ನಟಿಸಿದ್ದು, ಹಿರಿಯ ಸಂಗೀತ ಸಂಯೋಜಕ ಇಳಯರಾಜಾ ಅವರು ಸಂಗೀತ ಸಂಯೋಜಿಸಿದ್ದಾರೆ.

‘ಗೊಂಡಲ್’ ಸಿನಿಮಾವು ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮತ್ತು ಪುಣೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲೂ ಮನ್ನಣೆ ಗಳಿಸಿದೆ. ಸಿನಿಮಾ 2025ರ ನವೆಂಬರ್ 14ರಂದು ಬಿಡುಗಡೆಯಾಗಿದೆ.

Tags

Gondal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X