Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೂರುದಾರ ಪೂರ್ಣೇಶ್ ಮೋದಿಯ ಮೂಲ ಉಪ ನಾಮ...

ದೂರುದಾರ ಪೂರ್ಣೇಶ್ ಮೋದಿಯ ಮೂಲ ಉಪ ನಾಮ ಮೋದಿ ಅಲ್ಲ: ಸುಪ್ರೀಂಕೋರ್ಟ್ ನಲ್ಲಿ ರಾಹುಲ್ ಪರ ವಕೀಲರು ನಡೆಸಿದ ವಾದ ಏನು?

ವಾರ್ತಾಭಾರತಿವಾರ್ತಾಭಾರತಿ4 Aug 2023 1:30 PM IST
share
ದೂರುದಾರ ಪೂರ್ಣೇಶ್ ಮೋದಿಯ ಮೂಲ ಉಪ ನಾಮ ಮೋದಿ ಅಲ್ಲ: ಸುಪ್ರೀಂಕೋರ್ಟ್ ನಲ್ಲಿ ರಾಹುಲ್ ಪರ ವಕೀಲರು ನಡೆಸಿದ ವಾದ ಏನು?
ವಿಚಾರಣೆ ಪೂರ್ಣಗೊಂಡಿದೆ ಹಾಗೂ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಲಾಗಿದೆ, ಆದರೂ ಇದುವರೆಗೆ ಯಾವುದೇ ಪುರಾವೆಗಳಿಲ್ಲ. ಪೂರ್ಣೇಶ್ ಮೋದಿಯವರ (ದೂರುದಾರರ) ಮೂಲ ಉಪನಾಮ ಮೋದಿ ಅಲ್ಲ ... ಅವರು ತಮ್ಮ ಉಪನಾಮವನ್ನು ಬದಲಾಯಿಸಿದ್ದಾರೆ ... ರಾಹುಲ್ ಗಾಂಧಿಯವರು ತಮ್ಮ ಭಾಷಣದ ಸಮಯದಲ್ಲಿ ಹೆಸರಿಸಿದ ವ್ಯಕ್ತಿಗಳಲ್ಲಿ ಒಬ್ಬರೂ ಕೂಡ ಮೊಕದ್ದಮೆ ಹೂಡಲಿಲ್ಲ. ಕುತೂಹಲಕಾರಿಯೆಂದರೆ ನೊಂದಿರುವ 13 ಕೋಟಿಯ ಈ ‘ಸಣ್ಣ’ ಸಮುದಾಯದಲ್ಲಿ ಮೊಕದ್ದಮೆ ಹೂಡುವವರು ಮಾತ್ರ ಬಿಜೆಪಿ ಕಚೇರಿಯಲ್ಲಿರುವವರು ”ಎಂದು ರಾಹುಲ್ ಗಾಂಧಿ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಸುಪ್ರೀಂಕೋರ್ಟ್ ಗೆ ತಿಳಿಸಿರುವುದಾಗಿ Live Law ಉಲ್ಲೇಖಿಸಿದೆ.

ಹೊಸದಿಲ್ಲಿ: ಮಾಜಿ ಸಂಸದರ ವಿರುದ್ಧದ ಮಾನನಷ್ಟ ಮೊಕದ್ದಮೆಯ ದೂರುದಾರ ಪೂರ್ಣೇಶ್ ಮೋದಿ ಅವರ ಮೂಲ ಉಪನಾಮ ಮೋದಿ ಅಲ್ಲ. ಅವರು (ಪೂರ್ಣೇಶ್) ಮೋದ್ ವನಿಕಾ ಸಮಾಜಕ್ಕೆ ಸೇರಿದವರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರ ವಕೀಲರು ಶುಕ್ರವಾರ ಸುಪ್ರೀಂ ಕೋರ್ಟ್ನಲ್ಲಿ ವಾದಿಸಿದ್ದಾರೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಪಿ.ಎಸ್. ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕನ ಶಿಕ್ಷೆಯನ್ನು ಎತ್ತಿಹಿಡಿದ ಗುಜರಾತ್ ಹೈಕೋರ್ಟ್ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಸಲ್ಲಿಸಿದ ಮನವಿಯನ್ನು ಆಲಿಸಿ, ರಾಹುಲ್ ಗಾಂಧಿ ಅವರಿಗೆ ನೀಡಲಾಗಿರುವ ಶಿಕ್ಷೆಗೆ ಶುಕ್ರವಾರ ತಡೆಯಾಜ್ಞೆ ನೀಡಿದೆ.

ಮಾನನಷ್ಟ ಪ್ರಕರಣದಲ್ಲಿ ಗಾಂಧಿಯವರ ಶಿಕ್ಷೆಯಿಂದಾಗಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಯಿತು ಹಾಗೂ ಈ ತೀರ್ಪನ್ನು ಪ್ರಶ್ನಿಸುವ ಈ ವಿಚಾರಣೆಯು ಮುಂಬರುವ 2024 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವರ ಅರ್ಹತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಸಂಸತ್ತಿಗೆ ಹಾಜರಾಗಲು ಹಾಗೂ ಚುನಾವಣೆಗೆ ಸ್ಪರ್ಧಿಸಲು ರಾಹುಲ್ ಗಾಂಧಿ ಅವರನ್ನು ಖುಲಾಸೆಗೊಳಿಸಲು ಇದು ಕೊನೆಯ ಅವಕಾಶವಾಗಿದೆ ಎಂದು ಕಾಂಗ್ರೆಸ್ ನಾಯಕನ ಪರ ವಕೀಲರು ಇಂದು ಸುಪ್ರೀಂ ಕೋರ್ಟ್ ನಲ್ಲಿ 'ಮೋದಿ ಉಪ ನಾಮ ಕುರಿತ ಹೇಳಿಕೆಗೆ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ವಾದಿಸಿದರು.

ಹೈಕೋರ್ಟ್ ತನ್ನ ತೀರ್ಪನ್ನು 66 ದಿನಗಳವರೆಗೆ ಕಾಯ್ದಿರಿಸಿತ್ತು. ಪ್ರಕರಣದಲ್ಲಿ ಶಿಕ್ಷೆ ಎದುರಿಸುತ್ತಿರುವ ಕಾರಣ ರಾಹುಲ್ ಗಾಂಧಿ ಅವರು ಈಗಾಗಲೇ ಎರಡು ಸಂಸತ್ತು ಅಧಿವೇಶನಗಳನ್ನು ಕಳೆದುಕೊಂಡಿದ್ದಾರೆ ಎಂದು ಅವರ ವಕೀಲರು ಹೇಳಿದರು.

ರಾಹುಲ್ ಗಾಂಧಿಯನ್ನು ಪ್ರತಿನಿಧಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ವಿಚಾರಣೆ ಪೂರ್ಣಗೊಂಡಿದೆ ಹಾಗೂ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಲಾಗಿದೆ, ಆದರೂ ಇದುವರೆಗೆ ಯಾವುದೇ ಪುರಾವೆಗಳಿಲ್ಲ. ದೂರುದಾರ ಪೂರ್ಣೇಶ್ ಮೋದಿ ಅವರ ಮೂಲ ಉಪನಾಮ ಮೋದಿ ಅಲ್ಲ, ಅವರು ಅದನ್ನು ಬದಲಾಯಿಸಿದ್ದಾರೆ ಎಂದು ವಾದಿಸಿದರು

ಮೊದಲನೆಯದಾಗಿ ಪೂರ್ಣೇಶ್ ಮೋದಿಯವರ (ದೂರುದಾರರ) ಮೂಲ ಉಪನಾಮ ಮೋದಿ ಅಲ್ಲ ... ಅವರು ತಮ್ಮ ಉಪನಾಮವನ್ನು ಬದಲಾಯಿಸಿದ್ದಾರೆ ... ರಾಹುಲ್ ಗಾಂಧಿಯವರು ತಮ್ಮ ಭಾಷಣದ ಸಮಯದಲ್ಲಿ ಹೆಸರಿಸಿದ ವ್ಯಕ್ತಿಗಳಲ್ಲಿ ಒಬ್ಬರೂ ಕೂಡ ಮೊಕದ್ದಮೆ ಹೂಡಲಿಲ್ಲ. ಕುತೂಹಲಕಾರಿಯೆಂದರೆ ನೊಂದಿರುವ 13 ಕೋಟಿಯ ಈ ‘ಸಣ್ಣ’ ಸಮುದಾಯದಲ್ಲಿ ಮೊಕದ್ದಮೆ ಹೂಡುವವರು ಮಾತ್ರ ಬಿಜೆಪಿ ಕಚೇರಿಯಲ್ಲಿರುವವರು ”ಎಂದು ರಾಹುಲ್ ಗಾಂಧಿ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಸುಪ್ರೀಂಕೋರ್ಟ್ ಗೆ ತಿಳಿಸಿರುವುದಾಗಿ Live Law ಉಲ್ಲೇಖಿಸಿದೆ.

►ಈ ಪ್ರಕರಣದಲ್ಲಿ ಕೆಳಗಿನ ಹಂತದ ನ್ಯಾಯಾಲಯ ರಾಹುಲ್‌ ಅವರನ್ನು ಅಪರಾಧಿ ಎಂದು ಘೋಷಿಸಿದ ಆದೇಶಕ್ಕೆ ತಡೆ ಹೋರಲು ಇದು ಅಪರೂಪದ ಪ್ರಕರಣವಾಗಿರಬೇಕು ಎಂದು ಜಸ್ಟಿಸ್‌ ಗವಾಯಿ ಹೇಳಿದಾಗ ಉತ್ತರಿಸಿದ ಸಿಂಘ್ವಿ ದೂರುದಾರ ಪೂರ್ಣೇಶ್‌ ಮೋದಿಯ ಮೂಲ ಉಪನಾಮೆ ಮೋದಿ ಅಲ್ಲ, ಆತ ಅದನ್ನು ಬದಲಾಯಿಸಿದ್ದರು ಎಂದು ಹೇಳಿದರು.

► “ದೂರುದಾರ ಪೂರ್ಣೇಶ್‌ ಮೋದಿ ಸ್ವತಃ ತಮ್ಮ ಮೂಲ ಉಪನಾಮೆ ಮೋದಿ ಅಲ್ಲ, ತಾವು ಮೋಧ್‌ ವನಿಕಾ ಸಮಾಜಕ್ಕೆ ಸೇರಿದವರೆಂದು ಹೇಳಿದ್ದರು,” ಎಂದು ಸಿಂಘ್ವಿ ಹೇಳಿದರಲ್ಲದೆ ಭಾಷಣದಲ್ಲಿ ರಾಹುಲ್‌ ಉಲ್ಲೇಖಿಸಿದ ಯಾವುದೇ ವ್ಯಕ್ತಿ ದೂರು ದಾಖಲಿಸಿಲ್ಲ ಎಂದರು.

► ಇಂತಹ ಪ್ರಕರಣದಲ್ಲಿ ಎರಡು ವರ್ಷದ ಜೈಲು ಶಿಕ್ಷೆ ವಿಧಿಸಿದ ಒಂದೇ ಒಂದು ಹಿಂದಿನ ಪ್ರಕರಣವಿಲ್ಲ ಎಂದೂ ಸಿಂಘ್ವಿ ಹೇಳಿದರು.

► ರಾಹುಲ್‌ ಗಾಂಧಿ ಅವರು ಎಪ್ರಿಲ್‌ 2019ರಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಪರೋಕ್ಷವಾಗಿ ಟೀಕಿಸಿ,” ಅದು ಹೇಗೆ ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮೆಯಿದೆ?,” ಎಂದು ಪ್ರಶ್ನಿಸಿದ್ದರು.

► ತಮ್ಮನ್ನು ದೋಷಿ ಎಂದು ಘೋಷಿಸಿದ್ದ ಆದೇಶವನ್ನು ಪ್ರಶ್ನಿಸಿ ರಾಹಲ್‌ ಗಾಂಧಿ ಸೂರತ್‌ ಸೆಷನ್ಸ್‌ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರೂ ಅದಿನ್ನೂ ಬಾಕಿಯಿದೆ.

► 2019ರಲ್ಲಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ತಮ್ಮ ವಿರುದ್ಧ ಈ ಮಾನನಷ್ಟ ಪ್ರಕರಣದಲ್ಲಿ ಹೊರಡಿಸಿದ ಆದೇಶವು ತಮ್ಮನ್ನು ಸಂಸದನ ಸ್ಥಾನದಿಂದ ಅನರ್ಹಗೊಳಿಸುವಂತೆ ಮಾಡುವ ರೀತಿಯ ಶಿಕ್ಷೆ ವಿಧಿಸಿತ್ತು. ವಿಚಾರಣಾ ನ್ಯಾಯಾಲಯವು ತಮ್ಮನ್ನು ಕಠಿಣವಾಗಿ ನಡೆಸಿಕೊಂಡಿತ್ತು ಎಂದು ರಾಹುಲ್‌ ದೂರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X