Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರು ಶಾಸಕರಿಗೆ ಕೊಕ್ ನೀಡಿದ ಕಾಂಗ್ರೆಸ್...

ಆರು ಶಾಸಕರಿಗೆ ಕೊಕ್ ನೀಡಿದ ಕಾಂಗ್ರೆಸ್ ಗೆ ಬಂಡಾಯದ ಭೀತಿ

ವಾರ್ತಾಭಾರತಿವಾರ್ತಾಭಾರತಿ21 Oct 2023 7:39 AM IST
share
ಆರು ಶಾಸಕರಿಗೆ ಕೊಕ್ ನೀಡಿದ ಕಾಂಗ್ರೆಸ್ ಗೆ  ಬಂಡಾಯದ ಭೀತಿ

ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಗುರುವಾರ ರಾತ್ರಿ ಬಿಡುಗಡೆ ಮಾಡಿದ ಬೆನ್ನಲ್ಲೇ ಅಸಮಾಧಾನ ಸ್ಫೋಟಗೊಂಡಿದೆ. ಟಿಕೆಟ್ ವಂಚಿತರಾಗಿರುವ ಆರು ಮಂದಿ ಬಂಡಾಯದ ಬಾವುಟ ಹಾರಿಸಿದ್ದಾರೆ. ಈ ಪೈಕಿ ನಾಲ್ಕು ಮಂದಿ 2020ರ ನವೆಂಬರ್ ನಲ್ಲಿ ನಡೆದ ಉಪಚುನಾವಣೆಯಲ್ಲಿ ಜ್ಯೋತಿರಾದಿತ್ಯ ಸಿಂಧ್ಯಾ ಬೆಂಬಲಿಗರ ವಿರುದ್ಧ ಜಯ ಸಾಧಿಸಿದವರು.

ಸುಮವಲಿ ಶಾಸಕ ಅಜಾಬ್ ಸಿಂಗ್ ಕುಶ್ವಾಹ, ಬಿಯಾರೊ ಶಾಸಕ ರಾಮಚಂದ್ರ ಡಾಂಗಿ, ಗೋಹಡ್ ನ ಮೆವರಾಂ ಜಟವ್ ಮತ್ತು ಮೊರೇನಾ ಕ್ಷೇತ್ರದ ರಾಕೇಶ್ ಮವೈ ಜತೆಗೆ ಬಾದನಗರ ಕ್ಷೇತ್ರದ ಮುರಲಿ ಮೊರ್ವಾಲ್ ಹಾಗೂ ಸೆಂಧವಾ ಕ್ಷೇತ್ರದ ಗ್ಯಾರ್ಸೈಲ್ ರಾವತ್ ಟಿಕೆಟ್ ವಂಚಿತರಾಗಿದ್ದಾರೆ.

ಈಗಾಗಲೇ ಪಕ್ಷ ನಡೆಸಿದ ಸಮೀಕ್ಷೆಯ ಅನ್ವಯ ಟಿಕೆಟ್ ಹಂಚಿಕೆ ಮಾಡಲಾಗಿದ್ದು, ಬಾದನಗರ ಕ್ಷೇತ್ರದಿಂದ ರಾಜೇಂದ್ರ ಸಿಂಗ್ ಸೋಳಂಕಿ ಮತ್ತು ಸೆಂಧ್ವಾ ಕ್ಷೇತ್ರದಿಂದ ಮೋಟು ಸೋಳಂಕಿ ಅವರನ್ನು ಕಣಕ್ಕೆ ಇಳಿಸಲಾಗಿದೆ ಎಂದು ಪಕ್ಷ ಸಮುಜಾಯಿಷಿ ನೀಡಿದೆ. ಸುಮಾವಲಿ ಕ್ಷೇತ್ರದಿಂದ ಕುಲದೀಪ್ ಸಿಕರವಾರ್ ಅವರು ಸ್ಪರ್ಧಿಸುತ್ತಿದ್ದು, ಬಿಯಾರೋ ಕ್ಷೇತ್ರದಿಂದ ಪುರುಷೋತ್ತಮ ಡಾಂಗಿ, ಗೊಹಾದ್ ಕ್ಷೇತ್ರದಿಂದ ಕೇಶವ ದೇಶಾಯಿ ಅಧಿಕೃತ ಅಭ್ಯರ್ಥಿಗಳು. ಮೊರೇನಾ ಕ್ಷೇತ್ರದಿಂದ ರಾಜ್ಯ ಕಿಸಾನ್ ಕಾಂಗ್ರೆಸ್ ಮುಖ್ಯಸ್ಥ ದಿನೇಶ್ ಸಿಂಗ್ ಗುರ್ಜರ್ ಕಣಕ್ಕೆ ಇಳಿದಿದ್ದಾರೆ.

ಈ ಬದಲಾವಣೆಯ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ರಾಕೇಶ್ ಮಾವೈ ಶುಕ್ರವಾರ ಬಹಿರಂಗ ಹೇಳಿಕೆ ನೀಡಿ, "ನನಗೆ ಟಿಕೆಟ್ ನಿರಾಕರಿಸಲು ನಾನು ಮಾಡಿರುವ ತಪ್ಪಾದರೂ ಏನು ಎನ್ನುವುದನ್ನು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರಿಗೆ ಕೇಳಬಯಸುತ್ತೇನೆ" ಎಂದು ಗುಡುಗಿದ್ದಾರೆ. ವಿದ್ಯಾರ್ಥಿ ಜೀವನದಿಂದಲೇ ಪಕ್ಷಕ್ಕೆ ನಿಷ್ಠನಾಗಿದ್ದವನು ನಾನು. ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಎನ್ಎಸ್ ಯು ಐಗೆ ಕೆಲಸ ಮಾಡಿದ್ದೇನೆ. ನಾನು ಬಿಎಸ್ಪಿ ಅಥವಾ ಬಿಜೆಪಿ ಕಾರ್ಯಕರ್ತರಾಗಿ ಪಕ್ಷಕ್ಕೆ ಸೇರಿವನಲ್ಲ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X