Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಲ್ಲಿ ಸೈಕ್ಲೋಥಾನ್‌:...

ಮಂಗಳೂರಿನಲ್ಲಿ ಸೈಕ್ಲೋಥಾನ್‌: ವಿದ್ಯಾರ್ಥಿಗಳು, ಸೈಕ್ಲಿಸ್ಟ್‌ಗಳು ಸೇರಿ 1,200ಕ್ಕೂ ಅಧಿಕ ಮಂದಿ ಭಾಗಿ

ವಾರ್ತಾಭಾರತಿವಾರ್ತಾಭಾರತಿ22 Dec 2024 6:45 PM IST
share
ಮಂಗಳೂರಿನಲ್ಲಿ ಸೈಕ್ಲೋಥಾನ್‌: ವಿದ್ಯಾರ್ಥಿಗಳು, ಸೈಕ್ಲಿಸ್ಟ್‌ಗಳು ಸೇರಿ 1,200ಕ್ಕೂ ಅಧಿಕ ಮಂದಿ ಭಾಗಿ

ಮಂಗಳೂರು: ಮಂಗಳೂರಿನಲ್ಲಿ ರವಿವಾರ ಬೆಳಗ್ಗೆ ಆಯೋಜಿಸಲಾದ ಮಂಗಳೂರು ಸೈಕ್ಲೋಥಾನ್‌ನಲ್ಲಿ ಶಾಲಾ ಮಕ್ಕಳು, ವೃತ್ತಿಪರ ಸೈಕ್ಲಿಸ್ಟ್‌ಗಳು ಮತ್ತು ವಿವಿಧ ಕ್ಲಬ್‌ಗಳ ಸೈಕ್ಲಿಸ್ಟ್‌ಗಳು ಸೇರಿದಂತೆ ಸುಮಾರು 1,200 ಅಧಿಕ ಮಂದಿ ಭಾಗವಹಿಸಿದ್ದರು.

ಕ್ರಾಸ್ ಸೈಕಲ್ಸ್, ಐಡಿಯಲ್ ಐಸ್ ಕ್ರೀಂ, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್, ಕಶರ್ಪ್ ಫಿಟ್ನೆಸ್, ಗೃಹಿಣಿ ಮಸಾಲಾ, ಕೆನರಾ ಬ್ಯಾಂಕ್ ಮತ್ತು ತಾಜ್ ಸೈಕಲ್‌ಗಳ ಸಹಯೋಗದಲ್ಲಿ ‘ವೀ ಆರ್ ಸೈಕ್ಲಿಂಗ್’ ತಂಡ ಈ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು.

ಸೈಕ್ಲೋಥಾನ್‌ಗೆ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಫಿಟ್ನೆಸ್, ರಸ್ತೆ ಜಾಗೃತಿ ಮತ್ತು ಸುರಕ್ಷತೆಯ ಉದ್ದೇಶದೊಂದಿಗೆ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿರುವುದು ಶ್ಲಾಘನೀಯ ಎಂದರು.

ಸೈಕ್ಲೋಥಾನ್‌ನಲ್ಲಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ರಸ್ತೆ ಸುರಕ್ಷತೆ ಹಾಗೂ ಜವಾಬ್ದಾರಿಯುತ ಸೈಕ್ಲಿಂಗ್ ಬಗ್ಗೆ ಅರಿವು ಮೂಡಿಸಲು ಸೈಕಲ್ ರ‍್ಯಾಲಿ ಆಯೋಜಿಸಲಾಗಿದೆ ಎಂದು ವಿ ಆರ್ ಸೈಕ್ಲಿಂಗ್‌ನ ಹರ್ನಿಶ್ ರಾಜ್ ತಿಳಿಸಿದರು.

ಬೆಳಗ್ಗೆ 7:15ಕ್ಕೆ ಮಂಗಳಾ ಸ್ಟೇಡಿಯಂನಿಂದ ಆರಂಭಗೊಂಡ ಸೈಕಲ್ ರ‍್ಯಾಲಿಯು ನಗರದ ಪ್ರಮುಖ ಸ್ಥಳಗಳಾದ ಶ್ರೀ ನಾರಾಯಣ ಗುರು ವೃತ್ತ, ಲಾಲ್‌ಬಾಗ್ , ಜೈಲು ರಸ್ತೆ ಮತ್ತು ಕರಂಗಲ್ಪಾಡಿ ಮಾರುಕಟ್ಟೆಯ ಮೂಲಕ 6.5 ಕಿ.ಮೀ ದೂರವನ್ನು ಕ್ರಮಿಸಿ, 8:15 ರ ಸುಮಾರಿಗೆ ಬೋಳೂರಿನ ಅಮೃತ ವಿದ್ಯಾಲಯ ಶಾಲಾ ಮೈದಾನದಲ್ಲಿ ಸಮಾಪನಗೊಂಡಿತು.

ಬಳಿಕ ನಡೆದ ಕಾರ್ಯಕ್ರಮದಲ್ಲಿ ಕ್ರಾಸ್ ಬೈಕ್ ರೆನಲ್ ಸೇಲ್ಸ್ ಹೆಡ್ ಆರ್‌ಎಸ್ ಜಮಾಲ್, ಐಡಿಯಲ್ ಐಸ್ ಕ್ರೀಂನ ಮುಕುಂದ್ ಕಾಮತ್, ಐಒಸಿಎಲ್‌ನ ವಿಭಾಗೀಯ ಮಾರಾಟ ವಿಭಾಗದ ಮುಖ್ಯಸ್ಥ ಯೋಗೇಶ್ ಪಾಟೀದಾರ್ , ಕಶರ್ಪ್ ಫಿಟ್ನೆಸ್‌ನ ಆನಂದ್ ಪ್ರಭು, ಗೃಹಿಣಿ ಮಸಾಲದ ಶುಭಾನಂದ ಮತ್ತು ಶಿವಾನಂದ ರಾವ್ ಮತ್ತು ತಾಜ್ ಸೈಕಲ್ ಕಂಪನಿಯ ಎಸ್ ಎಂ ಮುತ್ತಲಿಬ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ರಾಷ್ಟ್ರೀಯ ಸೈಕ್ಲಿಂಗ್ ಕ್ರೀಡಾಕೂಟದಲ್ಲಿ ಹಿರಿಯ ಮಹಿಳಾ ಸೈಕ್ಲಿಂಗ್ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಸೈಕ್ಲಿಸ್ಟ್ ಗ್ಲಿಯೋನಾ ಡಿ ಸೋಜ ಮತ್ತು ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆ ಮತ್ತು ಪುಣೆಯಿಂದ ಗೋವಾವರೆಗಿನ 642 ಕಿ.ಮೀ ಡೆಕ್ಕನ್ ಕ್ಲಿಫ್ ಹ್ಯಾಂಗರ್ ಸಹಿಷ್ಣುತೆ ಓಟದಲ್ಲಿ ಭಾಗವಹಿಸಿದ್ದ ಹಾರ್ದಿಕ್ ರೈ ಅವರ ಸಾಧನೆಗಾಗಿ ಅವರನ್ನು ಸನ್ಮಾನಿಸಲಾಯಿತು.

ರಾಜ್ಯಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಯುವ ಸೈಕ್ಲಿಸ್ಟ್ ಶಮಂತ್ ಭಟ್ ಅವರನ್ನು ಅಭಿನಂದಿಸಲಾಯಿತು. ವಿ ಆರ್ ಸೈಕ್ಲಿಂಗ್‌ನ ಅಧ್ಯಕ್ಷ ಸರ್ವೇಶ ಸಾಮಗ ಅವರು ಮಂಗಳೂರು ಸೈಕ್ಲೋಥಾನ್‌ನಲ್ಲಿ ಭಾಗವಹಿಸಿದವರನ್ನು ಅಭಿನಂದಿಸಿದರು.

ಸೈಕಲ್ ರ‍್ಯಾಲಿಗೆ ನೋಂದಾಯಿಸಿ ಪಾಲ್ಗೊಂಡವರಿಗೆ ಲಕ್ಕಿ ಡ್ರಾವನ್ನು ನಡೆಸಲಾಯಿತು. ಇದರಲ್ಲಿ ವಿಜೇತರಾದ ಮುಹಮ್ಮದ್ ದಿಯಾನ್ ಮತ್ತು ಇವಾನ್ ಡಿಸೋಜ ಅವರಿಗೆ ಎರಡು ಸೈಕಲ್‌ಗಳನ್ನು ಬಹುಮಾನವಾಗಿ ನೀಡಲಾಯಿತು.

















share
ವಾರ್ತಾಭಾರತಿ
ವಾರ್ತಾಭಾರತಿ
Next Story
X