Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ರೋಶನಿ ನಿಲಯದ...

ಮಂಗಳೂರು: ರೋಶನಿ ನಿಲಯದ ಎಂ.ಎಸ್.ಡಬ್ಲ್ಯು. 1999ನೇ ಬ್ಯಾಚ್ ನ 'ಸ್ನೇಹ ಸಮ್ಮಿಲನ'

ವಾರ್ತಾಭಾರತಿವಾರ್ತಾಭಾರತಿ3 Jan 2024 11:02 AM IST
share
ಮಂಗಳೂರು: ರೋಶನಿ ನಿಲಯದ ಎಂ.ಎಸ್.ಡಬ್ಲ್ಯು. 1999ನೇ ಬ್ಯಾಚ್ ನ ಸ್ನೇಹ ಸಮ್ಮಿಲನ

ಮಂಗಳೂರು, ಜ.3: ರೋಶನಿ ನಿಲಯದ ಎಂ.ಎಸ್.ಡಬ್ಲ್ಯು. 1999ನೇ ಸಾಲಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನವು ಡಿ.30ರಂದು ರೋಶನಿ ನಿಲಯದಲ್ಲಿ ನಡೆಯಿತು.

ಈ ವೇಳೆ ತಮ್ಮ ಪ್ರಾಧ್ಯಾಪಕರಾದ ಪ್ರೊ.ಕೆ.ಎ.ಸೆಲ್ವರಾಜ್, ಡಾ.ಜಿ.ಆರ್.ಕೃಷ್ಣಮೂರ್ತಿ, ಪ್ರೊ.ಹಿಲ್ಡಾ ರಾಯಪ್ಪನ್, ಡಾ. ರೀಟಾ ನೊರೊನ್ಹಾ, ಡಾ.ರಮೀಳಾ ಶೇಖರ್, ಮಾಜಿ ಪ್ರಾಂಶುಪಾಲರಾದ ಫಿಲೋಮಿನಾ ಸೆರಾವೊ ಮತ್ತು ಡಾ. ಜೆಸಿಂತಾ, ಹಾಲಿ ಪ್ರಾಂಶುಪಾಲ ಡಾ. ಸೋಫಿಯಾ ಫೆರ್ನಾಂಡಿಸ್ ಹಾಗೂ ಮಾಜಿ ದೈಹಿಕ ಶಿಕ್ಷಣ ಶಿಕ್ಷಕಿ ಡಾ. ಫ್ಲೋಸಿ ರಾಯಪ್ಪನ್ ಅವರಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.

ಸುಮಾರು 25 ವರ್ಷದ ಬಳಿಕ ನಡೆದ ಸ್ನೇಹ ಸಮ್ಮಿಲನದಲ್ಲಿ ಪಾಲ್ಗೊಂಡ ಡಾ.ಲಕ್ಷ್ಮಿ, ವಿಜಯ್ ಮಂಜೇಶ್ವರ್, ಕೆನೆತ್, ಡಾ.ಉಮರ್ ಬೀಜದಕಟ್ಟೆ ಮತ್ತು ಲ್ಯಾನ್ಸಿ ತಮ್ಮ 25 ವರ್ಷಗಳ ಜೀವನ ಅನುಭವಗಳನ್ನು ಹಂಚಿಕೊಂಡರು. ಪ್ರಾಧ್ಯಾಪಕರು ತಮ್ಮ ವಿದ್ಯಾರ್ಥಿಗಳ ಯಶಸ್ಸಿನ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ, ಆ ಕಾಲಾಂತರದಲ್ಲಿ ನಡೆದ ವಿಷಯಗಳನ್ನು ಮೆಲುಕು ಹಾಕಿದರು.

ಅಗಲಿದ ಪ್ರೊ. ಮಾಧವ ಶೆಣೈ ಹಾಗೂ ಸಹಪಾಠಿಗಳಾದ ರಜನಿ ಮತ್ತು ಮಾಧುರಿ ಗುರುರಾಜ್ ಅವರನ್ನು ಸ್ಮರಿಸಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಇತರ ಹಳೆ ವಿದ್ಯಾರ್ಥಿಗಳಾದ ಅನುಪ್, ಗಿರೀಶ್ ಲೋಬೋ, ಸಂತೋಷಿ, ಹರೀಶ್ ಶೆಟ್ಟಿ, ವಾಸು, ಸದಾಶಿವ, ರೋಹನ್, ಪುಟ್ಟಣ್ಣ ಹಾಗೂ ಜಯಪ್ರಕಾಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುಜಾಹ್ ಮುಹಮ್ಮದ್ ಸ್ವಾಗತಿಸಿದರು. ಇಂದಿರಾ ವಂದಿಸಿದರು. ವನಿತಾ ಚೂಂತಾರು ಕಾರ್ಯಕ್ರಮ ನಿರೂಪಿಸಿದರು.

ಸ್ನೇಹ ಸಮ್ಮಿಲನದ ಪ್ರಯುಕ್ತ ಎಂ. ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಒಳರೋಗಿ ಸಹವರ್ತಿಗಳಿಗೆ ಊಟ ನೀಡುವ 'ಕಾರುಣ್ಯ ಯೋಜನೆ'ಗೆ ಡಿ.29ರ ಪ್ರಾಯೋಜಕತ್ವವನ್ನು ಹಳೆ ವಿದ್ಯಾರ್ಥಿಗಳು ನೀಡಿದರು.

ಎಂ. ಫ್ರೆಂಡ್ಸ್ ಉಪಾಧ್ಯಕ್ಷ ಸುಜಾಹ್ ಮುಹಮ್ಮದ್ ಕೂಡಾ ಈ ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದು, ಅವರೊಂದಿಗೆ ಅನೂಪ್, ಸಂತೋಷಿ, ಪುಟ್ಟಣ್ಣ, ಇಂದಿರಾ ಮತ್ತು ವನಿತಾ ಭಾಗವಹಿಸಿ ಎಂ. ಫ್ರೆಂಡ್ಸ್ ಸೇವೆಯನ್ನು ಶ್ಲಾಘಿಸಿದರು.

Tags

Roshni Nilaya
share
ವಾರ್ತಾಭಾರತಿ
ವಾರ್ತಾಭಾರತಿ
Next Story
X