Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆರೋಪಿ ಕೃಷ್ಣರಾವ್ ಸಂತ್ರಸ್ತ ಯುವತಿಯನ್ನು...

ಆರೋಪಿ ಕೃಷ್ಣರಾವ್ ಸಂತ್ರಸ್ತ ಯುವತಿಯನ್ನು ವಿವಾಹವಾಗದಿದ್ದರೆ ಧರಣಿ: ಪ್ರತಿಭಾ ಕುಳಾಯಿ

ವಾರ್ತಾಭಾರತಿವಾರ್ತಾಭಾರತಿ3 Oct 2025 2:58 PM IST
share
ಆರೋಪಿ ಕೃಷ್ಣರಾವ್ ಸಂತ್ರಸ್ತ ಯುವತಿಯನ್ನು ವಿವಾಹವಾಗದಿದ್ದರೆ ಧರಣಿ: ಪ್ರತಿಭಾ ಕುಳಾಯಿ
ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ

ಮಂಗಳೂರು, ಅ.3: ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಕೃಷ್ಣ ರಾವ್ ಎಂಬಾತನದ್ದೇ ಎಂದು ಡಿಎನ್ ಎ ಪರೀಕ್ಷೆಯಲ್ಲಿ ರುಜುವಾತುಗೊಂಡ ಹಿನ್ನೆಲೆಯಲ್ಲಿ ಆತ ಮಗುವಿನ ತಾಯಿಯನ್ನು ಇನ್ನಾದರೂ ವಿವಾಹ ಆಗಲೇಬೇಕು. ತಪ್ಪಿದಲ್ಲಿ ಆತನ ಮನೆಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸುವುದಾಗಿ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣ ರಾವ್ ಒಪ್ಪಿದಲ್ಲಿ ಆತನ ಜೊತೆ ಯುವತಿಯ ವಿವಾಹವನ್ನು ನಾನೇ ಸ್ವಂತ ಖರ್ಚಿನಲ್ಲಿ ಮಾಡಿಸುತ್ತೇನೆ. ಪ್ರೀತಿ, ಪ್ರೇಮದ ಹೆಸರಲ್ಲಿ ಲೈಂಗಿಕ ಚಟುವಟಿಕೆ ನಡೆಸಿ, ಬಳಿಕ ಅರ್ಧದಲ್ಲೇ ಕೈಬಿಡುವ ಘಟನೆಗಳು ಮರುಕಳಿಸಬಾರದು. ಇದೊಂದು ಜಿಲ್ಲೆಗೆ ಕಪ್ಪು ಚುಕ್ಕೆ. ಹಾಗಾಗಿ ಈ ಘಟನೆ ಪ್ರೀತಿಸಿ, ಮಗು ಕರುಣಿಸಿ ಯುವತಿಯ ಬಾಳನ್ನು ಅರ್ಧಕ್ಕೇ ಕೈಬಿಡುವವರಿಗೆ ಒಂದು ಪಾಠವಾಗಬೇಕು ಎಂದರು.

ಯುವತಿ ಜೊತೆ ಎಂಟು ವರ್ಷಗಳಿಂದ ಸಂಪರ್ಕದಲ್ಲಿದ್ದ ಕೃಷ್ಣ ರಾವ್, ಕೊನೆಗೆ ವಿವಾಹವಾಗುವುದಾಗಿ ನಂಬಿಸಿ ಕೈಕೊಟ್ಟಿದ್ದಾನೆ. ಆತನ ಮನೆಯವರೂ ಈಗ ಅವರ ಮದುವೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಘಟನೆಗಳು ಸಮಾಜದಲ್ಲಿ ತಪ್ಪು ಸಂದೇಶಕ್ಕೆ ಕಾರಣವಾಗುತ್ತದೆ. ಇವರಿಬ್ಬರನ್ನು ಒಂದುಗೂಡಿಸಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಹಿಂದುತ್ವ ಸಂಘಟನೆಗಳು, ಸ್ವಯಂಘೋಷಿತ ಮುಖಂಡರು ಕೈಚೆಲ್ಲುತ್ತಿರುವುದು ಸರಿಯಲ್ಲ. ಸಂತ್ರಸ್ತೆಯನ್ನು ಸಮುದಾಯ ಸಂಘಟನೆಯವರು ಕೈಬಿಟ್ಟಿದ್ದಾರೆ. ಹಾಗಿರುವಾಗ ಕೇವಲ ಸಮುದಾಯದ ಮುಖಂಡ ನಂಜುಂಡಿ ಮಾತ್ರ ಧೈರ್ಯ ತುಂಬಿ ಬೆಂಬಲಕ್ಕೆ ನಿಂತಿದ್ದಾರೆ. ಈ ಘಟನೆಯಲ್ಲಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಪ್ರತಿಭಾ ಕುಳಾಯಿ ಆಗ್ರಹಿಸಿದರು.

ಸದ್ಯ ಜಾಮೀನಿನಲ್ಲಿರುವ ಕೃಷ್ಣ ರಾವ್ ಕೋರ್ಟ್ ನಲ್ಲಿ ವಿಚಾರಣೆ ವೇಳೆ ನೀಡುವ ಹೇಳಿಕೆಯನ್ನು ಆಧರಿಸಿ ಮುಂದೆ ಹೋರಾಟದ ರೂಪುರೇಷೆ ಹಾಕಿಕೊಳ್ಳಲಾಗುವುದು. ಸಂತ್ರಸ್ತೆಗೆ ನ್ಯಾಯ ಕೊಡಿಸಿಯೇ ಸಿದ್ಧ ಎಂದು ಪ್ರತಿಭಾ ಕುಳಾಯಿ ಹೇಳಿದರು.

ಹಿಂದೂಗಳು ಹತ್ತು ಹತ್ತು ಮಕ್ಕಳನ್ನು ಹೆರುವಂತೆ ಭಾಷಣ ಮಾಡುವ ಹಿಂದುತ್ವ ಮುಖಂಡರು ಇದೀಗ ಹಿಂದೂ ಯುವಕನೊಬ್ಬ ಹಿಂದೂ ಯುವತಿಗೆ ಮಗು ಕರುಣಿಸಿದ ಪ್ರಕರಣದಲ್ಲಿ ಮಾತನಾಡುತ್ತಿಲ್ಲ. ಅನ್ಯಾಯಕ್ಕೊಳಗಾದ ಯುವತಿಗೆ ನ್ಯಾಯ ದೊರಕಿಸುತ್ತಿಲ್ಲ ಎಂದು ಆಕ್ಷೇಪಿಸಿದ ಪ್ರತಿಭಾ ಕುಳಾಯಿ, ಯಾವುದೇ ತಪ್ಪು ಮಾಡದ ಆ ಮಗುವಿನ ಭವಿಷ್ಯದ ಬಗ್ಗೆ ಆಲೋಚಿಸಬೇಕಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತೆಯ ತಾಯಿ ನಮಿತಾ, ಸಮುದಾಯದ ಕಾರ್ಯಕರ್ತೆ ಅರ್ಚನಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X