Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಹ್ಯಾದ್ರಿ ಸಿನರ್ಜಿಯಾದಲ್ಲಿ ಗಮನ ಸೆಳೆದ...

ಸಹ್ಯಾದ್ರಿ ಸಿನರ್ಜಿಯಾದಲ್ಲಿ ಗಮನ ಸೆಳೆದ ‘ಏರ್‌ಶೋ’

ವಾರ್ತಾಭಾರತಿವಾರ್ತಾಭಾರತಿ8 Nov 2025 3:06 PM IST
share
ಸಹ್ಯಾದ್ರಿ ಸಿನರ್ಜಿಯಾದಲ್ಲಿ ಗಮನ ಸೆಳೆದ ‘ಏರ್‌ಶೋ’
ಬಾನಂಗಳದಲ್ಲಿ ಯುವ ಇಂಜಿನಿಯರ್‌ಗಳ ಕೌಶಲ್ಯ ಅನಾವರಣ

ಮಂಗಳೂರು, ನ.8: ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ಮೈದಾನದಲ್ಲಿ ಶನಿವಾರ ಯುವ ಇಂಜಿನಿಯರಿಗಳಿಂದ ರಚಿಸಲ್ಪಟ್ಟ ಲೋಹದ ಹಕ್ಕಿಗಳ ಹಾರಾಟ ‘ಏರ್ ಶೋ’ ಸೇರಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಮುದ ನೀಡಿತು.

ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಸಿನರ್ಜಿಯಾ 2025 ರಾಷ್ಟ್ರೀಯ ಸೃಜನಾತ್ಮಕ ನವೋದ್ಯಮ ಮೇಳದ ಅಂಗವಾಗಿ ಶನಿವಾರ ಬೆಳಗ್ಗೆ ‘ಏರ್‌ಶೋ’ ಆಯೋಜಿಸಲಾಗಿತ್ತು. ಕಾಲೇಜಿನ ಚಾಲೆಂಜರ್ಸ್ ಟೀಮ್‌ನಿಂದ ತಯಾರಿಸಲ್ಪಟ್ಟ ಯುದ್ಧ ವಿಮಾನ (ಫೈಟರ್ ಜೆಟ್), ಟ್ರೇನರ್ ಪ್ಲೇನ್, ಡ್ರೋನ್‌ಗಳ ಮಾದರಿಗಳು ಕಾಲೇಜು ಮೈದಾನದ ಬಾನಂಗಳದಲ್ಲಿ ವಿಭಿನ್ನ ಭಂಗಿಯಲ್ಲಿ ಹಾರಾಟ ನಡೆಸಿದವು. ಅಮೆರಿಕದ ಎಫ್ 22 ರಾಪ್ಟರ್‌ನ ನಾಲ್ಕು ಮಾದರಿ ವಿಮಾನಗಳು, 3 ಟ್ರೇನರ್ ವಿಮಾನಗಳು, ರೇಸ್ ಡ್ರೋನ್‌ಗಳ ಹಾರಾಟವನ್ನು ಸೇರಿದ್ದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ವೃಂದ ಕಣ್ತುಂಬಿಸಿದರು.

‘ಈ ಬಾರಿಯ ಏರ್ ಶೋದಲ್ಲಿ ಕಾಲೇಜು ವಿದ್ಯಾರ್ಥಿಗಳು ವಿನ್ಯಾಸಗೊಳಿಸಿದ ನಾಲ್ಕು ಎಫ್ 22 ರಾಫ್ಟರ್‌ಗಳು, 3 ಟ್ರೇನ್ ಪ್ಲೇನ್‌ಗಳ ಉಡಾವಣೆಯನ್ನು ಮಾಡಲಾಯಿತು. ವೃತ್ತಿಪರ ಪೈಲಟ್‌ಗಳಾದ ಆದಿತ್ಯ ಪವಾರ್ ಮತ್ತು ಅಭಯ್ ಪವಾರ್ ಅವರ ಮೂರು ಬೃಹತ್ ವಿಮಾನ ಮಾದರಿಗಳ ಪ್ರದರ್ಶನವನ್ನು ನಡೆಸಿದ್ದಾರೆ. ಇಂಜಿನಿಯರಿಂಗ್‌ನ ವಿವಿಧ ವಿಭಾಗದ ವಿದ್ಯಾರ್ಥಿಗಳ ತಂಡ ಕಳೆದ ಸುಮಾರು ಮೂರು ತಿಂಗಳಿನಿಂದ ಸಿನರ್ಜಿಯಾದಡಿ ನಡೆಯುವ ಏರ್‌ಶೋಗೆ ತಯಾರಿ ನಡೆಸಿವೆ. ಈ ಪ್ರದರ್ಶನದ ಮೂಲಕ ಮಾದರಿ ವಿಮಾನಗಳ ತಯಾರಿ ಮತ್ತು ಹಾರಾಟದ ಬಗ್ಗೆ ಮಾಹಿತಿಯನ್ನು ಸಿನರ್ಜಿಯಾಕ್ಕೆ ಆಗಮಿಸಿರುವ ವಿವಿಧ ಶಾಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ನೀಡುವುದಾಗಿದೆ’ ಎಂದು ಸಹ್ಯಾದ್ರಿ ಕಾಲೇಜಿನ ಏರೋಫೀಲಿಯಾದ ಪೈಲಟ್, ವಿದ್ಯಾರ್ಥಿ ರಂಜಿತ್ ತಿಳಿಸಿದರು.

‘ಸಿನೆರ್ಜಿಯಾದಲ್ಲಿ ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್ (ಎಸ್‌ಎಸ್‌ಟಿಎಚ್) ಹಾಗೂ ಏರ್‌ಶೋ ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ಹೊಸ ಕಲ್ಪನೆ, ಆಲೋಚನೆಗಳಿಗೆ ಅಕಾಶ ನೀಡಿವೆ. ವಿವಿಧ ಶಾಲಾ ಕಾಲೇಜುಗಳಿಂದ ಭಾಗವಹಿಸಿರುವ ವಿದ್ಯಾರ್ಥಿಗಳು ತಮ್ಮ ವಿಜ್ಞಾನ ಮಾದರಿಗಳ ಪ್ರದರ್ಶನ ನೀಡಿದ್ದಾರೆ. ಇದು ನಾವೀನ್ಯತೆಯ ಪ್ರದರ್ಶನದ ಜತೆಗೆ ಹೊಸತನ್ನು ಕಲಿಯುವ, ವಿದ್ಯಾರ್ಥಿಗಳಲ್ಲಿ ನಾಯಕತ್ವ, ನಿವರ್ಹಣೆ, ಒತ್ತಡ ನಿವಾರಣೆಯಂತಹ ಜೀವನ ಕೌಶಲ್ಯಗಳನ್ನು ಕಲಿಸುವ ಕಾರ್ಯಕ್ರಮವಾಗಿದೆ’ ಎಂದು ಸಿನೆರ್ಜಿಯಾ ಮತ್ತು ಎಸ್‌ಎಸ್‌ಟಿಎಚ್‌ನ ವಿದ್ಯಾರ್ಥಿ ಪ್ರಮುಖರಾದ ಜೀವಿತಾ ಜೆ.ಎಸ್., ವೈಭವ್, ಅನಿಕಾ, ಜೀವನ್, ಪ್ರಜೋತ್, ತೃಷ್ಯ ಅಭಿಪ್ರಾಯ ಹಂಚಿಕೊಂಡರು.

ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಎಸ್. ಇಂಜಗನೇರಿ, ಉಪ ಪ್ರಾಂಶಪಾಲ ಡಾ. ಸುಧೀರ್ ಶೆಟ್ಟಿ, ಡೀನ್ (ಅಕಾಡೆಮಿಕ್ಸ್) ಡಾ. ಶಮಂತ್ ರೈ ಹಾಗೂ ಇತರರು ಉಪಸ್ಥಿತರಿದ್ದರು.

‘ಸಹ್ಯಾದ್ರಿ ಕಾಲೇಜಿನ ಸಿನರ್ಜಿಯಾ 2025ರ ಕಾರ್ಯಕ್ರಮದಲ್ಲಿ ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್ (ಎಸ್‌ಎಸ್‌ಟಿಎಚ್)ನಡಿ ಪ್ರೌಢಶಾಲಾ ಮತ್ತು ಪಿಯು ವಿದ್ಯಾರ್ಥಿಗಳಿಗೆ ನವೀನ ಆಲೋಚನೆಗಳ ಮಾದರಿಗಳ ಪ್ರದರ್ಶನ ನಡೆಯುತ್ತಿದೆ. ಅದರ ಜತೆಗೆ ಸಹ್ಯಾದ್ರಿ ಕಾಲೇಜು ಮಕ್ಕಳು ತಯಾರಿಸಿದ ವಿಮಾನಗಳ ಮಾದರಿಗಳ ‘ಏರ್‌ಶೋ’ ಮೂಲಕ ಕಾಲೇಜಿನ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲಾಗಿದೆ.’

ಡಾ. ಪ್ರಶಾಂತ್ ರಾವ್, ಡೀನ್, ವಿದ್ಯಾರ್ಥಿ ಕಲ್ಯಾಣ ವಿಭಾಗ, ಸಹ್ಯಾದ್ರಿ ಕಾಲೇಜು.










share
ವಾರ್ತಾಭಾರತಿ
ವಾರ್ತಾಭಾರತಿ
Next Story
X