Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ʼ29ನೇ ಪ್ರೊಫ್‌ಕಾನ್ ಜಾಗತಿಕ...

ಮಂಗಳೂರು: ʼ29ನೇ ಪ್ರೊಫ್‌ಕಾನ್ ಜಾಗತಿಕ ವೃತ್ತಿಪರ ವಿದ್ಯಾರ್ಥಿಗಳ ಸಮ್ಮೇಳನʼ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ12 Oct 2025 6:07 PM IST
share
ಮಂಗಳೂರು: ʼ29ನೇ ಪ್ರೊಫ್‌ಕಾನ್ ಜಾಗತಿಕ ವೃತ್ತಿಪರ ವಿದ್ಯಾರ್ಥಿಗಳ ಸಮ್ಮೇಳನʼ ಸಮಾರೋಪ
ರಾಷ್ಟ್ರಮಟ್ಟದಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ಏಕೀಕೃತ ಪ್ರವೇಶ ಪ್ರಕ್ರಿಯೆ ನಡೆಸಲು ಆಗ್ರಹ

ಮಂಗಳೂರು: ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ಏಕೀಕೃತ ಪ್ರವೇಶ ಪ್ರಕ್ರಿಯೆ ನಡೆಸುವಂತೆ 29ನೇ ಜಾಗತಿಕ ವೃತ್ತಿಪರ ವಿದ್ಯಾರ್ಥಿಗಳ ಸಮ್ಮೇಳನ - ‘ಪ್ರೊಫ್‌ಕಾನ್’ ಸರಕಾರವನ್ನು ಆಗ್ರಹಿಸಿದೆ.

ಕರ್ನಾಟಕ ಸಲಫಿ ಅಸೋಸಿಯೇಶನ್ ಮತ್ತು ವಿಸ್ಡಮ್ ಇಸ್ಲಾಮಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಮೂರು ದಿನಗಳ ಕಾಲ ನಡೆದ ಸಮ್ಮೇಳನವು ಈ ಬಗ್ಗೆ ಸರಕಾರವನ್ನು ಆಗ್ರಹಿಸಿ ನಿರ್ಣಯ ಅಂಗೀಕರಿಸಿದೆ.

ವಿವಿಧ ಹಂತಗಳಲ್ಲಿ ನಡೆಯುವ ವಿವಿಧ ಸ್ಟ್ರೀಮ್ ಪ್ರವೇಶ ಪ್ರಕ್ರಿಯೆಗಳು ವಿದ್ಯಾರ್ಥಿಗಳನ್ನು ಗೊಂದಲಕ್ಕೀಡು ಮಾಡುತ್ತಿವೆ ಮತ್ತು ಪ್ರಕ್ರಿಯೆಗಳಲ್ಲಿ ದೀರ್ಘ ವಿಳಂಬವನ್ನು ಉಂಟುಮಾಡುತ್ತಿವೆ. ಇದನ್ನು ಸರಿಯಾಗಿ ಸಮನ್ವಯಗೊಳಿಸಿ ಏಕೀಕೃತ ಶೈಕ್ಷಣಿಕ ಕ್ಯಾಲೆಂಡರ್‌ನ್ನು ರೂಪಿಸಬೇಕು ಎಂದು ಆಗ್ರಹಿಸಲಾಗಿದೆ.

ವೈದ್ಯಕೀಯ ಸೇರಿದಂತೆ ಕೋರ್ಸುಗಳ ಪ್ರವೇಶ ಪ್ರಕ್ರಿಯೆಗಳು ಇನ್ನೂ ಪೂರ್ಣಗೊಳ್ಳದ ಪ್ರಸ್ತುತ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಈ ವಿಷಯದಲ್ಲಿ ಅಧಿಕಾರಿಗಳು ತುರ್ತು ಆದ್ಯತೆಯೊಂದಿಗೆ ಮಧ್ಯಪ್ರವೇಶಿಸಿ ಪರಿಹಾರ ಕಾಣಬೇಕು ಎಂದು ಸಮ್ಮೇಳನ ಸರಕಾರವನ್ನು ಒತ್ತಾಯಿಸಿತು.

ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಕಳವಳಗಳನ್ನು ಎದುರಿಸಲು ಅಧಿಕಾರಿಗಳು ಸಮಗ್ರ ಕ್ರಿಯಾ ಯೋಜನೆಗಳನ್ನು ತಯಾರಿಸಬೇಕು. ಸಾಮಾಜಿಕ ಮಾಧ್ಯಮಗಳ ಹೆಚ್ಚಿದ ಬಳಕೆ ವಿದ್ಯಾರ್ಥಿಗಳಲ್ಲಿ ಉಂಟುಮಾಡುವ ಪ್ರಭಾವವನ್ನು ಗಂಭೀರವಾಗಿ ಪರಿಗಣಿಸಬೇಕು. ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣಗಳು ಭಯಾನಕವಾಗಿವೆ. 2024ರಲ್ಲಿ ಆಸ್ಟ್ರೇಲಿಯಾ ಸೇರಿದಂತೆ ಏಳು ರಾಷ್ಟ್ರಗಳಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಗೆ ಸಂಪೂರ್ಣ ನಿಷೇಧ ಮತ್ತು ಇತರರಿಗೆ ಪೋಷಕರ ಒಪ್ಪಿಗೆಯೊಂದಿಗೆ ನಿರ್ಬಂಧವನ್ನು ಜಾರಿಗೊಳಿಸಿದ ಕ್ರಮಗಳನ್ನು ಮಾದರಿಯನ್ನಾಗಿ ಮಾಡಬೇಕು ಎಂದು ಸಮ್ಮೇಳನ ಕರೆ ನೀಡಿತು.

ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಭಾರತದಾದ್ಯಂತ ವಯಸ್ಸಿನ ಮಿತಿಯನ್ನು ನಿಗದಿಪಡಿಸುವುದನ್ನು ಸಹ ಪರಿಗಣಿಸಬೇಕು ಎಂದು ಸಮ್ಮೇಳನ ಒತ್ತಾಯಿಸಿತು.

ರವಿವಾರ ನಡೆದ ವಿವಿಧ ಅಧಿವೇಶನಗಳಲ್ಲಿ ವಿಸ್ಡಮ್ ಇಸ್ಲಾಮಿಕ್ ಆರ್ಗನೈಸೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅಶ್ರಫ್, ಫೈಸಲ್ ಮೌಲವಿ ಪುದುಪ್ಪರಂಬ್, ಲಜ್ನತುಲ್ ಬುಹೂಸುಲ್ ಇಸ್ಲಾಮಿಯ್ಯ ಕಾರ್ಯದರ್ಶಿ ಶಮೀರ್ ಮದನಿ, ಮುಹಮ್ಮದ್ ಸ್ವಾದಿಕ್ ಮದನಿ, ವಿಸ್ಡಮ್ ಯೂತ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸಿ. ಮುಹಮ್ಮದ್ ಅಜ್ಮಲ್, ಯಾಸಿರ್ ಅಲ್ ಹಿಕಮಿ, ಮುಹಮ್ಮದ್ ಬಿನ್ ಶಾಕಿರ್, ಶೇಖ್ ಅಬ್ದುಸ್ಸಲಾಮ್ ಮದನಿ, ಶಫೀಖ್ ಬಿನ್ ರಹೀಮ್, ಹಂಝ ಶಾಕಿರ್ ಅಲ್ ಹಿಕಮಿ, ಅಜ್ವದ್ ಚೆರುವಾಡಿ, ಮತ್ತು ಡಾ. ಮುಹಮ್ಮದ್ ಮುಬಶೀರ್ ಟಿ.ಸಿ. ವಿಷಯ ಮಂಡಿಸಿದರು.

‘ಪ್ರೊಫ್ಲುಮಿನಾ ಅವಾರ್ಡ್ ಫಾರ್ ಎಕ್ಸಲೆನ್ಸ್’ ಪ್ರಶಸ್ತಿಯನ್ನು ಎನ್‌ಐಟಿ. ಕಾಲಿಕಟ್‌ನ ಚಿನ್ನದ ಪದಕ ವಿಜೇತ ಮುಹಮ್ಮದ್ ಅಮೀನ್ ಅವರಿಗೆ ಪ್ರೊಫ್‌ಕಾನ್ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಎ ಬಿ. ಇಬ್ರಾಹೀಂ ಪ್ರದಾನ ಮಾಡಿದರು.

ಸಮಾರೋಪ ಸಮ್ಮೇಳನವನ್ನು ಪ್ರಮುಖ ವಿದ್ವಾಂಸ ಮತ್ತು ವಿಸ್ಡಮ್ ಇಸ್ಲಾಮಿಕ್ ಆರ್ಗನೈಸೇಶನ್ ರಾಜ್ಯ ಉಪಾಧ್ಯಕ್ಷ ಅಬೂಬಕ್ಕರ್ ಸಲಫಿ ಉದ್ಘಾಟಿಸಿದರು.

ವಿಸ್ಡಮ್ ಇಸ್ಲಾಮಿಕ್ ಸ್ಟ್ಟೂಡೆಂಟ್ಸ್ ಆರ್ಗನೈಸೇಶನ್ ಪ್ರಧಾನ ಕಾರ್ಯದರ್ಶಿ ಟಿ. ಮುಹಮ್ಮದ್ ಶಮೀಲ್ ಅಧ್ಯಕ್ಷತೆ ವಹಿಸಿದ್ದರು. ನ್ಯಾಶನಲ್ ಅಲೈಡ್ ಹೆಲ್ತ್ ಕೌನ್ಸಿಲ್‌ನ ರಾಜ್ಯ ಅಧ್ಯಕ್ಷ ಡಾ. ಯು.ಟಿ. ಇಫ್ತಿಕರ್ ಫರೀದ್ ಮುಖ್ಯ ಅತಿಥಿಗಳಾಗಿದ್ದರು.

ಹುಸೈನ್ ಸಲಫಿ ಶಾರ್ಜಾ ಮುಖ್ಯ ಭಾಷಣ ಮಾಡಿದರು.

ವಿಸ್ಡಮ್ ಇಸ್ಲಾಮಿಕ್ ಆರ್ಗನೈಸೇಶನ್ ರಾಜ್ಯ ಕೋಶಾಧಿಕಾರಿ ಕೆ. ಸಜ್ಜಾದ್, ಕರ್ನಾಟಕ ಸಲಫಿ ಅಸೋಸಿಯೇಶನ್‌ನ ಮಂಗಳೂರು ಸಮಿತಿಯ ಪ್ರಧಾನ ಕಾರ್ಯದರ್ಶಿ ಯಾಸಿರ್ ಅಲ್ ಹಿಕಮಿ ಶುಭ ಹಾರೈಸಿದರು.

ಕರ್ನಾಟಕ ಸಲಫಿ ಎಸೊಶಿಯೇಷನ್ ಇದರ ನಾಯಕರಾದ ಇಝಾಝ್ ಸ್ವಲಾಹಿ, ಸಿರಾಜ್ ಸಜಿಪ, ನಝೀರ್ ಸಲಫಿ, ಹಂಝ ಪುತ್ತೂರು, ಅಝಾಮ್ ದಮ್ಮಾಮ್, ಶಾಹುಲ್ ಹಮೀದ್ ಖತಾರ್ ಇಂಜಿನಿಯರ್ ರಶೀದ್ ಮತ್ತು ಸಯ್ಯದ್ ಶಾಝ್ ವೇದಿಕೆಯಲ್ಲಿದ್ದರು. ವಿಸ್ಡಮ್ ಸ್ಟೂಡೆಂಟ್ಸ್ ರಾಜ್ಯ ಕಾರ್ಯದರ್ಶಿಗಳಾದ ಕಾಬಿಲ್ ಸಿ.ವಿ. ಸ್ವಾಗತಿಸಿದರು , ಅಬ್ದುಲ್ ಮಜೀದ್ ಚುಂಗತ್ತರ ವಂದಿಸಿದರು.

ಕೇರಳದ ವಿವಿಧ ಜಿಲ್ಲೆಗಳಿಂದ, ಬೆಂಗಳೂರು, ಹೈದರಾಬಾದ್, ಚೆನ್ನೈ, ದಿಲ್ಲಿ ಮುಂತಾದ ದೇಶದ ಪ್ರಮುಖ ನಗರಗಳು ಮತ್ತು ವಿದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಿಂದ ನೂರಾರು ವೃತ್ತಿಪರ ವಿದ್ಯಾರ್ಥಿ ಪ್ರತಿನಿಧಿಗಳು ಭಾಗವಹಿಸಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X