Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಂದಿಕೂರಿನಿಂದ ಕೇರಳಕ್ಕೆ 400 ಕೆವಿ...

ನಂದಿಕೂರಿನಿಂದ ಕೇರಳಕ್ಕೆ 400 ಕೆವಿ ವಿದ್ಯುತ್ ಲೈನ್: ಪರ್ಯಾಯ ಕ್ರಮದ ರೈತರ ಬೇಡಿಕೆ ಈಡೇರಿಸಲು ರೈ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ16 Oct 2023 3:32 PM IST
share
ನಂದಿಕೂರಿನಿಂದ ಕೇರಳಕ್ಕೆ 400 ಕೆವಿ ವಿದ್ಯುತ್ ಲೈನ್: ಪರ್ಯಾಯ ಕ್ರಮದ ರೈತರ ಬೇಡಿಕೆ ಈಡೇರಿಸಲು ರೈ ಒತ್ತಾಯ
400 KV power line from Nandikur to Kerala: Rai insists on meeting farmers' demand for alternative measures

ಮಂಗಳೂರು, ಅ. 16: ಉಡುಪಿಯ ನಂದಿಕೂರಿನಿಂದ ಕೇರಳಕ್ಕೆ 400 ಕೆವಿ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆಯಿಂದ ಸಣ್ಣ ಹಾಗೂ ಅತೀ ಸಣ್ಣ ರೈತರು, ಹಿಡುವಳಿದಾರರು ಸಂಕಷ್ಟಕ್ಕೆ ಈಡಾಗಿದ್ದಾರೆ. ಭೂಗತ ವ್ಯವಸ್ಥೆಯ ಮೂಲಕ ಪರ್ಯಾಯ ಕ್ರಮಕ್ಕಾಗಿನ ರೈತರ ಬೇಡಿಕೆಯನ್ನು ಈಡೇರಿಸಲು ಕಾಮಗಾರಿ ಕೈಗೆತ್ತಿಕೊಂಡಿರುವ ಸಂಸ್ಥೆ ಹಾಗೂ ಸರಕಾರ ಮುಂದಾಗಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸೋಮವಾರ 400 ಕೆವಿ ವಿದ್ಯುತ್ಲೈನ್ ವಿರೋಧಿ ಹೋರಾಟ ಸಮಿತಿಯ ರೈತರ ಪರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಯೋಜನೆ ಹಾದು ಹೋಗುವ ಮಂಗಳೂರು ಹಾಗೂ ಬಂಟ್ವಾಳ ತಾಲೂಕು ಸೇರಿದಂತೆ ಉಭಯ ಜಿಲ್ಲೆಗಳ ರೈತರನ್ನು ವಿಶ್ವಾಸಕ್ಕೆ ಪಡೆಯದೆ ಯೋಜನೆ ಅನುಷ್ಠಾನಕ್ಕೆ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ಹಲವು ಸಮಯದಿಂದ ರೈತರು ಪ್ರತಿಭಟನೆಯ ಮೂಲಕ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಆ ರೈತರಿಗೆ ಸಂಪೂರ್ಣ ಬೆಂಬಲವನ್ನು ಘೋಷಿಸಿರುವುದಾಗಿ ಹೇಳಿದರು.

ಗುತ್ತಿಗೆ ವಹಿಸಿರುವ ಸ್ಟೆರಿಲೈಟ್ ಕಂಪೆನಿ ಹೈಟೆನ್ಶನ್ ಲೈನ್ ಹಾಕಲು ಸಮೀಕ್ಷೆ ನಡೆಸುತ್ತಿದೆ. ಇದರಿಂದ ರೈತರಿಗೆ ತೊಂದರೆ ಮಾತ್ರವಲ್ಲದೆ, ಪರಿಸರ ಹಾಗೂ ವನ್ಯಜೀವಿಗಳಿಗೆ ಹಾನಿಯಾಗಲಿದೆ. ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲ ಅಥವಾ ಸಮುದ್ರ ಮೂಲಕ ಈ ಸಂಪರ್ಕಕ್ಕೆ ಪರ್ಯಾಯ ಕ್ರಮ ವಹಿಸಬೇಕು. ಈ ಹೈಟೆನ್ಶನ್ ಲೈನ್ ಹಾದುಹೋಗುವ ಭಾಗಗಳಲ್ಲಿ ಗರಿಷ್ಠ ಮೂರು ಎಕರೆಯೊಳಗಿನ ಭೂಮಿಯನ್ನು ಹೊಂದಿರುವ ಸಣ್ಣ ರೈತರು, ಅಡಿಕೆ, ತೆಂಗು, ಕರಿಮೆಣಸು ಮೊದಲಾದ ತೋಟಗಾರಿಕಾ ಬೆಳೆಯನ್ನು ಅವಲಂಬಿಸಿರುವವರು. ಗ್ರಾಮೀಣ ವಿದ್ಯುಚ್ಛಕ್ತಿ ನಿಗಮ (ಆರ್ಇಸಿ) ಈ ಬಗ್ಗೆ ಗಮನಹರಿಸಬೇಕು. 900 ಕೋಟಿ ರೂ.ಗಳ ಯೋಜನೆ ಇದಾಗಿದ್ದು, ಇಷ್ಟು ದೊಡ್ಡ ಗುತ್ತಿಗೆ ವಹಿಸಿಕೊಂಡಿರುವ ಸಂಸ್ಥೆಗೆ ಪರ್ಯಾಯ ಹಾಗೂ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಕ್ರಮ ವಹಿಸುವುದು ದೊಡ್ಡ ವಿಷಯವೇನಲ್ಲ ಎಂದವರು ಹೇಳಿದರು.

ಈ ಹೈಟೆನ್ಶನ್ ಲೈನ್ ನಮ್ಮ ಕೃಷಿ ಭೂಮಿಯಲ್ಲಿ ಹಾದು ಹೋಗುವುದರಿಂದ ಮಳೆಗಾಲದಲ್ಲಿ ಇದರಿಂದಾಗಬಹುದಾದ ಅಪಾಯಗಳನ್ನು ಊಹಿಸಲು ಅಸಾಧ್ಯ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸರಕಾರದ ಗಮನಸೆಳೆಯಲಾಗಿದೆ. ಮಾನಸಿಕ ನೆಮ್ಮದಿ ಇಲ್ಲವಾಗಿದೆ. ಜಿಲ್ಲಾಡಳಿತ ರೈತರ ಪರ ನಿಂತು ಕ್ರಮ ವಹಿಸಬೇಕು ಎಂದು 400 ಕೆವಿ ಹೈಟೆನ್ಶನ್ ಲೈನ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಪ್ರಮುಖರಾದ ಲೋಹಿತಾಶ್ವ ಅಭಿಪ್ರಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬೇಬಿಕುಂದರ್, ಸುಧೀರ್ ಕುಮಾರ್, ಚಿತ್ತರಂಜನ್, ಅನ್ನು ಗೌಡ, ಸಂಜೀವ ಗೌಡ, ಪದ್ಮನಾಭ ಗೌಡ, ಆಲ್ವಿನ್, ಪಿಯುಸಿಲ್ ರೊಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.

‘ಉಡುಪಿ ದ.ಕ. ಜಿಲ್ಲೆಯ ಸುಮಾರು 17 ಗ್ರಾಮಗಳ 500ಕ್ಕೂ ಅಧಿಕ ಕುಟುಂಬಗಳು ಈ 400 ಕೆವಿ ಹೈಟೆನ್ಶನ್ ಲೈನ್ ವ್ಯಾಪ್ತಿಗೊಳಪಡುತ್ತಿದ್ದು, ಕಳೆದ ಮೂರೂವರೆ ವರ್ಷಗಳಿಂದ ನಮಗೆ ಪರಿಹಾರ ಬೇಡ, ಪರ್ಯಾಯ ವ್ಯವಸ್ಥೆ ಕಲ್ಪಿಸಿ ಎಂದು ಹೋರಾಟ ಮಾಡುತ್ತಿದ್ದೇವೆ. ಈಗಾಗಲೇ ಕೇಂದ್ರ ಸರಕಾರವು ಭಾರತದಿಂದ ದುಬೈಗೆ ಸಮುದ್ರ ಮೂಲಕ ಕೇಬಲ್ ಹಾಕಿ ವಿದ್ಯುತ್ ಸಂಪರ್ಕಕ್ಕೆ ಮುಂದಾಗಿದ್ದು, ಅದೇ ತಂತ್ರಜ್ಞಾನದೊಂದಿಗೆ ಇಲ್ಲಿಯೂ ಕ್ರಮ ವಹಿಸಬಹುದಾಗಿದೆ. ವೀರಕಂಬದ 600 ಹೆಕ್ಟೇರ್ ಪ್ರದೇಶದ ಸಿರಿಚಂದನವನ್ನು ಗುರುತಿಸಿ ರಿಸರ್ವ್ ಫಾರೆಸ್ಟ್ ಆಗಿ ಬೇಲಿ ಹಾಕುವ ಕಾರ್ಯವನ್ನು ಹಿಂದೆ ಅರಣ್ಯ ಸಚಿವರಾಗಿದ್ದಾಗ ರಮಾನಾಥ ರೈ ಮಾಡಿದ್ದಾರೆ. ಇದೀಗ ಈ ವಿದ್ಯುತ್ ಸಂಪರ್ಕದ ಯೋಜನೆಯು ಆ ರಿಸರ್ವ್ ಫಾರೆಸ್ಟ್ನಲ್ಲೂ ಹಾದು ಹೋಗುತ್ತಿದೆ.’

-ಶ್ಯಾಂ ಪ್ರಸಾದ್,

ರೈತ ಹಾಗೂ 400 ಕೆವಿ ವಿರೋಧಿ ಹೋರಾಟ ಸಮಿತಿ ಸಂಚಾಲಕ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X