Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಲ್ಲಿ ಜಾತ್ಯತೀತ ಪಕ್ಷಗಳು,...

ಮಂಗಳೂರಿನಲ್ಲಿ ಜಾತ್ಯತೀತ ಪಕ್ಷಗಳು, ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಧರಣಿ

ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ವರ್ಗಾವಣೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 Dec 2024 3:14 PM IST
share
ಮಂಗಳೂರಿನಲ್ಲಿ ಜಾತ್ಯತೀತ ಪಕ್ಷಗಳು, ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಧರಣಿ

ಮಂಗಳೂರು, ಡಿ.23: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರನ್ನು ಅಮಾನತುಗೊಳಿಸುವಂತೆ ಮತ್ತು ಕಮಿಷನರೇಟ್ ವ್ಯಾಪ್ತಿಯಲ್ಲಿ ಧರಣಿ,ಪ್ರತಿಭಟನೆಗಳಿಗೆ ಅವಕಾಶ ನೀಡುವಂತೆ ಆಗ್ರಹಿಸಿ ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ ಮಂಗಳೂರು ಇವುಗಳ ಆಶ್ರಯದಲ್ಲಿ ಕ್ಲಾಕ್ ಟವರ್ ಬಳಿ ಸೋಮವಾರ ಬೆಳಗ್ಗೆ ಸಾಮೂಹಿಕ ಧರಣಿ ನಡೆಯಿತು.

ಧರಣಿ ಉದ್ಘಾಟಿಸಿ ಮಾತನಾಡಿದ ದ.ಕ. ಜಿಲ್ಲಾ ಸಿಪಿಎಂ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ ಅಗ್ರವಾಲ್ ಅವರನ್ನು ವರ್ಗಾವಣೆಗೆ ಆಗ್ರಹಿಸಿ ಕಳೆದೊಂದು ತಿಂಗಳಿನಿಂದ ಹೋರಾಟ ನಡೆಯುತ್ತಿದೆ. ರಾಜ್ಯ ಸರಕಾರ ನಮ್ಮ ಬೇಡಿಕೆಯನ್ನು ಈಡೇರಿಸುತ್ತದೆ ಎಂಬ ಭರವಸೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ಬಗ್ಗೆ ನಮಗೆ ನಂಬಿಕೆ ಇದೆ. ಮಂಗಳೂರು ಸುಸಂಸ್ಕೃತ ನಗರ. ಇಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಇಷ್ಟೊಂದು ದೀರ್ಘಾವಧಿ ಪ್ರತಿಭಟನೆ ಈ ವರೆಗೂ ನಡೆದಿಲ್ಲ. ಅದು ಕೂಡಾ ಜನಪರ ಸಂಘಟನೆಗಳಿಂದ. ಆದ್ದರಿಂದ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರನ್ನು ಎತ್ತಂಗಡಿ ಮಾಡಬೇಕು, ಅಮಾನತುಗೊಳಿಸಿ ತನಿಖೆಗೊಳಪಡಿಸಬೇಕು ಎಂದು ಅವರು ಆಗ್ರಹಿಸಿದರು.

ರಾಷ್ಟ್ರೀಯ ಹೆದ್ದಾರಿ ದುರಸ್ತಿ, ಕೂಳೂರಿನ ಹೊಸ ಸೇತುವೆ ಹಾಗೂ ನಂತೂರಿನಲ್ಲಿ ಮೇಲ್ಸೇತುವೆ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಒತ್ತಾಯಿಸಿ ನಾವು ಆಯೋಜಿಸಿದ್ದ ಸಾಮಾನ್ಯ ಧರಣಿಗೆ ಅನುಮತಿ ಕೋರಿದಾಗ ಪೊಲೀಸ್ ಆಯುಕ್ತರು 10 ದಿನಗಳ ಕಾಲ ನಮ್ಮನ್ನು ಅಲೆದಾಡಿಸಿ, ಅನುಮತಿ ನಿರಾಕರಿಸಿದರು. ಅನುಮತಿ ನಿರಾಕರಿಸಿದರೂ ನಾವು ಧರಣಿ ಮಾಡುತ್ತೇವೆ ಎಂದಾಗ ನಮ್ಮ ಮನೆಗೆ ಪೊಲೀಸರನ್ನು ಕಳುಹಿಸಿದರು. ಇದರಿಂದಾಗಿ ಗೊತ್ತಾಗುತ್ತದೆ ಅವರೊಬ್ಬ ಸರ್ವಾಧಿಕಾರಿ ಎಂದು. ನಾವು ರಾಷ್ಟ್ರೀಯ ಹೆದ್ದಾರಿ, ಕೂಳೂರು ಸೇತುವೆ, ನಂತೂರು ಫ್ಲೈ ಓವರ್ ಬಗ್ಗೆ ಮಾತನಾಡಿದರೆ ಅದು ಬಿಜೆಪಿಯ ಸಂಸದ, ಶಾಸಕರಿಗೆ ಮುಜುಗರವಾಗುತ್ತದೆ. ಅದನ್ನು ನಮ್ಮ ಪೊಲೀಸ್ ಆಯಕ್ತರು ಇಷ್ಟಪಡುತ್ತಿಲ್ಲ. ನಮ್ಮ ಧರಣಿ, ಪ್ರತಿಭಟನೆಗಳಿಗೆ ನಿಷೇಧ ಹೇರುವ ಆಯುಕ್ತರು ಬಿಜೆಪಿಯ ಸಂಸದ, ಶಾಸಕರು ಯಾವುದೇ ರೀತಿಯ ಮೆರವಣಿಗೆ ಮಾಡಿದರೂ ಅದಕ್ಕೆ ಅನುಮತಿ ನೀಡುತ್ತಾರೆ ಎಂದು ಆರೋಪಿಸಿದರು.

ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸಿ.ಟಿ.ರವಿಯನ್ನು ಬೆಂಬಲಿಸಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅಕಾಂಗ್ರೆಸ್ ಕಚೇರಿಗೆ ನಡೆಸಿದ ಮೆರವಣಿಗೆಗೆ ಸಾಕಷ್ಟು ಪೊಲೀಸ್ ಬಂದೋಬಸ್ತ್ ಮಾಡಿದ್ದ ಪೊಲೀಸ್ ಆಯುಕ್ತರು, ಮೆರವಣಿಗೆ ಕಾಂಗ್ರೆಸ್ ಕಚೇರಿ ಮುಂಭಾಗ ಬಂದಾಗ ಸಾಂಕೇತಿಕ ಬಂಧನ ಮಾಡಿದರು ಎಂದು ಆಪಾದಿಸಿದರು.

ಜನಪರ ಸಂಘಟನೆಗಳಿಗೆ ನೀಡುವ ನೋಟಿಸ್ ಅನ್ನು ಬಿಜೆಪಿ ನಡೆಸುವ ಪ್ರತಿಭಟನೆಗಳಿಗೂ ನೀಡಿ ಎಂದು ಮುನೀರ್ ಕಾಟಿಪಳ್ಳ ಆಗ್ರಹಿಸಿದರು.

ಪೊಲೀಸ್ ಆಯುಕ್ತರು ಬಿಜೆಪಿ ಹಿತಾಸಕ್ತಿಗಳ ಹಿತ ಕಾಪಾಡುತ್ತಿದ್ದಾರೆ, ಮತೀಯ ಶಕ್ತಿಗಳಿಗೆ ಗೂಂಡಾಗಳಿಗೆ ಭಯರಹಿತ ವಾತಾವರಣ ಮಂಗಳೂರಿನಲ್ಲಿದೆ. ಎಸ್ಪಿ ಲಿಮಿಟ್ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿಲ್ಲ. ಅಕ್ರಮ ಮರಳುಗಾರಿಕೆ ನಡೆಯುತ್ತಿಲ್ಲ. ಆದರೆ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆಗೆ ಪೊಲೀಸರಿಂದ ರಕ್ಷಣೆ ನೀಡಲಾಗುತ್ತದೆ ಎಂದು ಆರೋಪಿಸಿದರು.

ನಮ್ಮ ಹೋರಾಟ ಪೊಲೀಸ್ ಆಯುಕ್ತರ ಎತ್ತಂಗಡಿ ಆಗುವ ತನಕ ಮುಂದುವರಿಯಲಿದೆ. ಒಂದು ವೇಳೆ ಇದು ಆಗದಿದ್ದರೆ ಪೊಲೀಸ್ ಆಯುಕ್ತರ ಕಚೇರಿಗೆ ಸಹಸ್ರಾರು ಮಂದಿಯ ಮೆರವಣಿಗೆ ನಡೆಯಲಿದೆ. ಜನವರಿ ತಿಂಗಳಲ್ಲಿ ಕಮಿಷನರ್ ಹಟಾವೊ ಪೋಸ್ಟರ್ ನ್ನು ಪ್ರತಿಯೊಂದು ಮನೆಗಳಿಗೂ ಅಂಟಿಸುವ ಮೂಲಕ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು.

ಮಂಗಳೂರು ಪೊಲೀಸ್ ಆಯುಕ್ತರು ಪಾಸ್ ಮಾಡಿದ್ದು ಐಪಿಎಸ್ಸೊ ಅಥವಾ ಆರೆಸ್ಸೆಸ್ಸೋ?

ಚಿಂತಕ ಎಂ.ಜಿ. ಹೆಗಡೆ ಮಾತನಾಡಿ, ಪ್ರತಿಭಟನೆ ಮಾಡುವುದು ಮಂಗಳೂರಿನಲ್ಲಿ ಅಪರಾಧವಾಗಿದೆ. ರಸ್ತೆ ಹೊಂಡಗಳ ವಿರುದ್ಧ ಪ್ರತಿಭಟನೆ ಮಾಡುವುದಕ್ಕೆ ಪೊಲೀಸ್ ಆಯುಕ್ತರು ವಿರೋಧ ಮಾಡುತ್ತಾರೆಂದರೆ ಅವರು ಪಾಸ್ ಮಾಡಿದ್ದು ಐಪಿಎಸ್ಸೊ ಅಥವಾ ಆರೆಸ್ಸೆಸ್ಸೋ ಎಂದು ನಾವು ಕೇಳಬೇಕಾಗುತ್ತದೆ ಎಂದರು.

ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳ ಪ್ರಮುಖರಾದ ದೇವದಾಸ ಎಂ., ಯಾದವ ಶೆಟ್ಟಿ , ಸುನೀಲ್ ಕುಮಾರ್ ಬಜಾಲ್, ಓಸ್ವಾಲ್ಡ್ ಫೆರ್ನಾಂಡಿಸ್, ವಸಂತ ಆಚಾರಿ, ಸುಕುಮಾರ್, ರಾಧಾಕೃಷ್ಣ, ಜಯಂತಿ ಬಿ. ಶೆಟ್ಟಿ, ಪ್ರಮೀಳಾ ಶಕ್ತಿನಗರ, ಬಿ.ಕೆ.ಇಮ್ತಿಯಾಝ್, ಬಿ.ಎಂ.ಭಟ್, ಚಿಕ್ಕ ಮುಗೇರ, ಮೂಸಬ್ಬ ಪಕ್ಷಿಕೆರೆ, ದಿನೇಶ್ ಶೆಟ್ಟಿ ಜಪ್ಪಿನಮೊಗೇರು, ಕೃಷ್ಣಾ ಇನ್ನಾ, ಶಶಿಕಲಾ ನಂತೂರು, ಜಯಂತ ನಾಯಕ್, ಜಯಲಕ್ಷ್ಮೀ ಜಪ್ಪಿನಮೊಗರು, ಈಶ್ವರಿ ಬೆಳ್ತಂಗಡಿ, ಕಿರಣ್ ಪ್ರಭ, ನಿತಿನ್ ಕುತ್ತಾರು, ಗಿರಿಜಾ ಮೂಡುಬಿದಿರೆ, ಬಿ. ಶೇಖರ, ಸುರೇಶ್ ಕುಮಾರ್, ಕರಿಯ ಕೆ., ಮಂಜಪ್ಪ ಪುತ್ರನ್, ಎನ್.ಎ.ಮುಹಮ್ಮದ್, ಶೇಖರ್ ಕುಂದರ್, ರಫೀಕ್ ಹರೇಕಳ, ರಾಕೇಶ್ ಕುಂದರ್, ರಮೇಶ್ ಉಳ್ಳಾಲ, ಯು.ಪಿ.ನಾರಾಯಣ, ಸುರೇಶ್ ಕಲ್ಲಗಾರ, ಚಂದ್ರಶೇಖರ್, ಕವಿರಾಜ್ ಉಡುಪಿ, ಅಶ್ರಫ್ ಹರೇಕಳ, ದಯಾನಂದ ಶೆಟ್ಟಿ, ಭವಾನಿ ವಾಮಂಜೂರು, ಅಶೋಕ್ ಬಂಗೇರ, ಆಶಾ ಬೋಳೂರು, ಶೇಖರ ಹೆಜಮಾಡಿ ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X