Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯ ಹೆದ್ದಾರಿ ಕಾಮಗಾರಿ ವಿಳಂಬ ಆರೋಪ; ...

ರಾಜ್ಯ ಹೆದ್ದಾರಿ ಕಾಮಗಾರಿ ವಿಳಂಬ ಆರೋಪ; ನೆಕ್ಕಿಲಾಡಿಯಲ್ಲಿ ಬಿಜೆಪಿ ಪ್ರತಿಭಟನೆ

ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಮಠಂದೂರು

ವಾರ್ತಾಭಾರತಿವಾರ್ತಾಭಾರತಿ2 Dec 2024 2:36 PM IST
share
ರಾಜ್ಯ ಹೆದ್ದಾರಿ ಕಾಮಗಾರಿ ವಿಳಂಬ ಆರೋಪ;  ನೆಕ್ಕಿಲಾಡಿಯಲ್ಲಿ ಬಿಜೆಪಿ ಪ್ರತಿಭಟನೆ

ಉಪ್ಪಿನಂಗಡಿ: ಈಗಿನ ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಗುತ್ತಿಗೆದಾರರಿಗೆ 10 ಪೈಸೆ ಹಣವೂ ನೀಡಿಲ್ಲ. ಆದ್ದರಿಂದ ಎಲ್ಲಾ ಕಾಮಗಾರಿಗಳು ಅಪೂರ್ಣವಾಗಿಯೇ ಉಳಿಯುವಂತಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು.

34 ನೆಕ್ಕಿಲಾಡಿ - ಬೊಳುವಾರು ರಾಜ್ಯ ಹೆದ್ದಾರಿಯಲ್ಲಿ 34 ನೆಕ್ಕಿಲಾಡಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚತುಷ್ಪಥ ರಾಜ್ಯ ಹೆದ್ದಾರಿ ನಿರ್ಮಾಣ ಕಾಮಗಾರಿ ವಿಳಂಬವಾಗಿದೆ ಎಂದು ಆರೋಪಿಸಿ 34 ನೆಕ್ಕಿಲಾಡಿಯ ಆದರ್ಶನಗರದ ಬಳಿ ಡಿ.2ರಂದು ನಡೆದ ಪ್ರತಿಭಟನೆಯಲ್ಲಿ ರಾಜ್ಯ ಹೆದ್ದಾರಿ ತಡೆ ನಡೆಸಿ, ಅವರು ಮಾತನಾಡುತ್ತಿದ್ದರು.

ನಾನು ಶಾಸಕನಾಗಿದ್ದ ಅವಧಿಯಲ್ಲಿ ಬೊಳುವಾರು- 34 ನೆಕ್ಕಿಲಾಡಿ ರಸ್ತೆಗೆ 20 ಕೋ. ರೂ. ಅನುದಾನ ತಂದಿದ್ದೇನೆ. ಇಲ್ಲಿ ಈ ರಸ್ತೆಯ ಕೆಲಸ ಕಳೆದ ಡಿಸೆಂಬರ್‍ನಲ್ಲಿ ಮುಗಿದು ಪ್ರಯಾಣ ಯೋಗ್ಯ ರಸ್ತೆಯಾಗಬೇಕಾಗಿತ್ತು. ಆದರೆ ಕಳೆದ ಒಂದೂವರೆ ವರ್ಷದಲ್ಲಿ ರಸ್ತೆಯ ಕೆಲಸ ಕುಂಟುತ್ತಾ ಸಾಗುತ್ತಿದೆ. ರಸ್ತೆಯ ಈ ಸ್ಥಿತಿಗೆ ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಂಚಿಗೆ ತಲುಪಿದ್ದೇ ಕಾರಣ. ಇದರೊಂದಿಗೆ ಸರಕಾರ ಗುತ್ತಿಗೆದಾರರನ್ನು ದಿವಾಳಿಯಂಚಿಗೆ ತಲುಪಿಸುತ್ತಿದೆ. ಈ ರಸ್ತೆಯ ಅವ್ಯವಸ್ಥೆಯಿಂದಾಗಿ ಪ್ರಯಾಣಿಕರು ಮೂಳೆ ಮುರಿತಕ್ಕೊಳಗಾಗುತ್ತಿದ್ದಾರೆ. ವಾಹನಗಳು ದುರಸ್ತಿಗೆ ಬರುವಂತಾಗಿದೆ. ಇದೊಂದು ಕಿವಿ, ಮೂಗು, ಕಣ್ಣು ಇಲ್ಲದ ಕುಂಟು ಸರಕಾರವಾಗಿದ್ದು, ದಪ್ಪ ಚರ್ಮದ ಇದಕ್ಕೆ ಕೋಣನ ಮುಂದೆ ಕಿನ್ನರಿ ಅಲ್ಲ ಚಾಟಿ ಬೀಸಬೇಕಾದ ಸ್ಥಿತಿ ಬಂದೊದಗಿದೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರ ಕಲ್ಪನೆಯ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯು ಯುದ್ಧೋಪಾದಿಯಲ್ಲಿ ನಡೆಯುತ್ತಿದ್ದರೆ, ರಾಜ್ಯ ಸರಕಾರದ ಎಲ್ಲಾ ಕಾಮಗಾರಿಗಳು ವಿಳಂಬವಾಗುತ್ತಿರುವುದರಿಂದ ಜನ ಸಾಮಾನ್ಯರು ಬವಣೆ ಪಡಬೇಕಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ ಪುತ್ತೂರು ವಿಧಾನ ಕ್ಷೇತ್ರವನ್ನು ಕತ್ತಲಿಗೆ ದೂಡುವ ಕೆಲಸವಾಗಿದೆ ಎಂದರು.

ರಾಜಕೀಯ ಪ್ರೇರಿತವಲ್ಲ: ಬಿಜೆಪಿಯ ಪ್ರತಿಭಟನೆಯು ರಾಜಕೀಯ ಪ್ರೇರಿತ ಎಂದು ಕೆಲವರು ಹೇಳಿಕೆಯನ್ನು ನೀಡುತ್ತಿದ್ದಾರೆ. ಆದರೆ ಈ ಪ್ರತಿಭಟನೆ ಜನರ ಹಿತಕ್ಕಾಗಿ. ರಾಜಕೀಯ ಮಾಡಲು ನಮಗೆ ಈ ರಸ್ತೆ ಬೇಕಾಗಿಲ್ಲ. ಅದಕ್ಕೆ ಸಾಕಷ್ಟು ವೇದಿಕೆಗಳು ಇವೆ ಎಂದ ಅವರು, ಇದು ಸಾಂಕೇತಿಕ ಪ್ರತಿಭಟನೆಯಷ್ಟೇ ನಾವು ಕೊಟ್ಟ ಗಡುವಿನೊಳಗೆ ಕಾಮಗಾರಿ ಮುಗಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದರು.

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ರಸ್ತೆಗಳನ್ನು ಸರಿಯಾಗಿ ನಿರ್ವಹಣೆ ಮಾಡಲಾಗುತ್ತಿಲ್ಲ. ಇದರಿಂದಾಗಿ ಸಾಕಷ್ಟು ಜನರು ಅವಘಡಕ್ಕೊಳಗಾಗಿ ಆಸ್ಪತ್ರೆಗೆ ಸೇರುವಂತಾಗಿದೆ. ಹಗರಣಗಳ ಮೇಲೆ ಹಗರಣ ಮಾಡುತ್ತಿರುವ ರಾಜ್ಯ ಸರಕಾರ ಜನರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ. ಕೆಲಸದಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಈ ಹೆದ್ದಾರಿಯ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ತಕ್ಷಣವೇ ಈ ಕಾಮಗಾರಿ ಕೆಲಸವನ್ನು ನಿರ್ವಹಿಸಬೇಕು. ಇದೇ ರೀತಿಯ ಚಾಳಿ ಮುಂದುವರಿದರೆ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು ಮಾತನಾಡಿ, ಈ ರಸ್ತೆಯ ಅವ್ಯವಸ್ಥೆಗಳ ಬಗ್ಗೆ ಈಗಾಗಲೇ ನಾವು ಅನೇಕ ಹೇಳಿಕೆಗಳನ್ನು ಕೊಟ್ಟಿದ್ದೇವೆ. ಎಷ್ಟು ಹೇಳಿಕೆಗಳನ್ನು ಕೊಟ್ರು ಇಲ್ಲಿನ ಶಾಸಕರಿಗೆ ಇದು ಕೇಳುತ್ತಿಲ್ಲ. ಬರೀ ಸುಳ್ಳನೇ ಹೇಳುವುದು ಇವರಿಗೆ ಪರಿಪಾಠವಾಗಿದೆ. ಜನರಿಗೆ ತೊಂದರೆ ಕೊಟ್ಟು ಈ ಪ್ರತಿಭಟನೆ ಅಲ್ಲ. ಸರಕಾರ ಮಾಡುತ್ತಿರುವ ಅನ್ಯಾಯವನ್ನು ಜನರಿಗೆ ತೋರಿಸಿಕೊಡಬೇಕು ಎಂಬುದಕ್ಕಾಗಿ ಜನರ ಪರವಾಗಿರುವ ಹೋರಾಟ ಇದು. ನ್ಯಾಯ ಸಿಗುವವರೆಗೂ ನಾವು ಹೋರಾಟ ಮಾಡುತ್ತೇವೆ. ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಗೊತ್ತಾದ ಬಳಿಕ ಕೆಲವೊಂದಷ್ಟು ಸಾಮಗ್ರಿಗಳನ್ನು ಇಲ್ಲಿ ತಂದು ಹಾಕಲಾಗಿದೆ ಎಂದರು.

ಬಳಿಕ ಪಿಡಬ್ಲ್ಯೂಡಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕಾನಿಷ್ಕ ಸ್ಥಳಕ್ಕೆ ಬಂದು 12 ದಿನದೊಳಗೆ ಒಂದು ಲೇಯರ್ ಡಾಮರು ಹಾಕಿ ಕೊಡಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ಪ್ರತಿಭಟನೆಯ ಸಂದರ್ಭ ಪ್ರತಿಭಟನಕಾರರು ರಸ್ತೆ ತಡೆ ನಡೆಸಿದ್ದರಿಂದ ಸುಮಾರು ಅರ್ಧ ಗಂ-ಟೆಯಷ್ಟು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿ, ಹೆದ್ದಾರಿಯ ಎರಡೂ ಕಡೆಗಳಲ್ಲಿ ವಾಹನಗಳ ಸರತಿ ಸಾಲು ಕಂಡು ಬಂತು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಸುನೀಲ್ ಕುಮಾರ್ ದಡ್ಡು, ಮುಕುಂದ ಗೌಡ ಬಜತ್ತೂರು, ಪುರುಷೋತ್ತಮ ಮುಂಗ್ಲಿಮನೆ, ಎನ್. ಉಮೇಶ್ ಶೆಣೈ, ರಾಮಚಂದ್ರ ಪೂಜಾರಿ, ಲಕ್ಷ್ಮಣ ಬೆಳ್ಳಿಪ್ಪಾಡಿ, ಪ್ರಶಾಂತ್ ನೆಕ್ಕಿಲಾಡಿ, ಸದಾನಂದ ನೆಕ್ಕಿಲಾಡಿ, ಸುಜಾತ ರೈ ಅಲಿಮಾರ್, ಸ್ವಪ್ನ ನೆಕ್ಕಿಲಾಡಿ, ಗೀತಾ ನೆಕ್ಕಿಲಾಡಿ, ಶಿವಾನಂದ ಕಜೆ, ರಮೇಶ್ ಸುಭಾಶ್‍ನಗರ, ಸದಾನಂದ ಶೆಟ್ಟಿ ಅಡೆಕ್ಕಲ್, ಹರೀಶ ದರ್ಬೆ, ಪ್ರಸಾದ್ ಬಂಡಾರಿ, ಸಂತೋಷ್ ಕುಮಾರ್ ಪಂರ್ದಾಜೆ, ಶಿವಪ್ಪ, ವಿದ್ಯಾಧರ ಜೈನ್, ಕೇಶವ ಸುಣ್ಣಾನ ಮತ್ತಿತರರು ಉಪಸ್ಥಿತರಿದ್ದರು.

Tags

uppinangady
share
ವಾರ್ತಾಭಾರತಿ
ವಾರ್ತಾಭಾರತಿ
Next Story
X