Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆರು ತಿಂಗಳಲ್ಲಿ 1,700 ಗ್ರಾಮ...

ಆರು ತಿಂಗಳಲ್ಲಿ 1,700 ಗ್ರಾಮ ಲೆಕ್ಕಾಧಿಕಾರಿಗಳ ನೇಮಕ : ಸಚಿವ ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ29 Aug 2023 11:23 PM IST
share
ಆರು ತಿಂಗಳಲ್ಲಿ 1,700 ಗ್ರಾಮ ಲೆಕ್ಕಾಧಿಕಾರಿಗಳ ನೇಮಕ : ಸಚಿವ ಕೃಷ್ಣ ಬೈರೇಗೌಡ

ಮಂಗಳೂರು, ಆ.29: ರಾಜ್ಯದಲ್ಲಿ ಖಾಲಿ ಇರುವ ಲೆಕ್ಕಾಧಿಕಾರಿಗಳ ಹುದ್ದೆಗಳ ನೇಮಕ ಮಾಡಲು ಸರಕಾರ ಚಿಂತನೆ ನಡೆಸಿದ್ದು ಆರು ತಿಂಗಳ ಒಳಗಾಗಿ 1500 ರಿಂದ 1,700 ಗ್ರಾಮ ಲೆಕ್ಕಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದರು.

ಪರೀಕ್ಷೆಯ ಮೂಲಕ ಪಾರದರ್ಶಕವಾಗಿ ಗ್ರಾಮ ಲೆಕ್ಕಾಧಿಕಾರಿಗಳ ನೇಮಕ ಮಾಡಲಾಗುವುದು. ಗ್ರಾಮ ಲೆಕ್ಕಾಧಿಕಾರಿಗಳ ನೇಮಕದ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಸರ್ವೇ ಇಲಾಖೆಯಲ್ಲೂ ಆರು ತಿಂಗಳಲ್ಲಿ 250 ಲೈಸೆನ್ಸ್‌ಡ್ ಸರ್ವೇಯರುಗಳನ್ನು ನೇಮಕ ಮಾಡಲಾಗುವುದು ಎಂದರು.

ಆಡಳಿತದಲ್ಲಿ ಬದಲಾವಣೆಯಾಗಬೇಕು. ಜನರು ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುವುದನ್ನು ತಪ್ಪಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇ ಗೌಡ ಸಲಹೆ ನೀಡಿದರು.

ರಾಜ್ಯದಲ್ಲಿ ಉತ್ತಮ ಕೆಲಸ ಮಾಡುವ ಅಧಿಕಾರಿಗಳನ್ನು ಗುರುತಿಸಿ ಅವರಿಗೆ ಪ್ರತಿವರ್ಷ ಸರ್ವೋತ್ತಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು . ಜನಪರ ಕೆಲಸ ಮಾಡುವವರನ್ನು ಅಭಿನಂದಿಸಲಾಗುವುದು. ತಪ್ಪು ಮಾಡುವ ಅಧಿಕಾರಿಗಳನ್ನು ಸರಕಾರ ಸಹಿಸುವುದಿಲ್ಲ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ತಕರಾರು, ಪೈಕಿ ಪಹಣಿ ಹಾಗೂ ನಮೂನೆ 53, 57 ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದ್ದು, ಈ ಎಲ್ಲಾ ಪ್ರಕರಣಗಳಿಗೆ ಕಾಲಮಿತಿಯೊಳಗೆ ಪರಿಹಾರ ನೀಡಬೇಕು. ಡಿಸಿ-ಎಸಿ ಹಾಗೂ ತಹಶೀಲ್ದಾರ್ ನ್ಯಾಯಾಲಯಗಳು ತತ್ವರಿತಗತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

‘‘ಪೈಕಿ ಪಹಣಿ ಪ್ರಕರಣಗಳ ಸಂಖ್ಯೆ ದ.ಕ. ಜಿಲ್ಲೆಯಲ್ಲಿ ಅಧಿಕವಾಗಿದ್ದು,. ಹಲವು ಪ್ರಕರಣಗಳಲ್ಲಿ ಒಂದು ಸರ್ವೇ ನಂಬರ್ ನಲ್ಲಿ 50-100 ಜನರ ಹೆಸರುಗಳು ಇದ್ದು, ಕನಿಷ್ಟ ಕಲಂ 3 ಮತ್ತು 9 ರ ನಡುವೆ ತಾಳೆ ಇರುವ ಪ್ರಕರಣಗಳಲ್ಲಿ ಸರ್ಕಾರವೇ ಕ್ಯಾಂಪೇನ್ ಮೂಲಕ ಪೋಡಿ ಮಾಡಿಕೊಡಲು ಸಿದ್ದವಿದೆ. ಈ ಪ್ರಕರಣಗಳ ಜೊತೆಗೆ ನಮೂನೆ 53, 57 ಪ್ರಕರಣಗಳನ್ನೂ ಕಾಲಮಿತಿಯೊಳಗೆ ಅಧಿಕಾರಿಗಳು ಪರಿಹರಿಸಬೇಕು’’ ಎಂದು ಅವರು ತಿಳಿಸಿದರು.

ಉತ್ತಮ ಹಾಗೂ ಜನಪರ ಆಡಳಿತ ನೀಡಲಿದೆ ಎಂಬ ವಿಶ್ವಾಸದಿಂದ ಮತದಾರರು ನಮಗೆ ಇತಿಹಾಸ ಕಾಣದ ಬಹುಮತ ನೀಡಿದ್ದಾರೆ. ಹೀಗಾಗಿ ಜನಸ್ನೇಹಿ ಆಡಳಿತ ನೀಡಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಶಯ. ಅಲ್ಲದೆ, ಕಂದಾಯ ಇಲಾಖೆ ಎಲ್ಲಾ ಇಲಾಖೆಗಳ ಮಾತೃ ಇಲಾಖೆ. ಹೀಗಾಗಿ ಈ ಇಲಾಖೆಯಲ್ಲೂ ಸಕಾರಾತ್ಮಕ ಬದಲಾವಣೆ ತರಬೇಕು ಎಂಬ ಕಾರಣದಿಂದಲೇ ನನಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ. ಆದರೆ, ಅಧಿಕಾರಿಗಳ ಸಹಕಾರ ಇಲ್ಲದೆ ಯಾವ ಬದಲಾವಣೆಯೂ ಸಾಧ್ಯವಿಲ್ಲ. ಅಧಿಕಾರಿಗಳು ಉತ್ತಮ ಆಡಳಿತಕ್ಕೆ ಸಹಕರಿಸಿದರೆ, ಎಲ್ಲರೂ ಒಟ್ಟಾಗಿ ಭ್ರಷ್ಟಾಚಾರ ಮುಕ್ತ ಜನಪರ ಸೇವೆ ನೀಡಬಹುದು’’ ಎಂದವರು ಹೇಳಿದರು.

ಜಿಲ್ಲೆಯಲ್ಲಿ ಸಾವಿರಾರು ತಕರಾರು ಪ್ರಕರಣಗಳು ಬಾಕಿ ಇವೆ. ಈ ಎಲ್ಲಾ ಪ್ರಕರಣಗಳನ್ನೂ ಶೀಘ್ರದಲ್ಲೇ ವಿಲೇವಾರಿ ಮಾಡ ಬೇಕು. ಕೆಲವು ಜಿಲ್ಲೆಗಳಲ್ಲಿ ಈ ಪ್ರಕರಣಗಳ ಶೀಘ್ರ ಇತ್ಯರ್ಥವಾಗುತ್ತಿದ್ದು, ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿ ನ್ಯಾಯಾಲಯಗಳು ವಾರದಲ್ಲಿ ಕನಿಷ್ಟ ನಾಲ್ಕು ದಿನ ಕಾರ್ಯ ನಿರ್ವಹಿಸಬೇಕು ಎಲ್ಲಾ ತಕರಾರು ಪ್ರಕರಣಗಳನ್ನೂ ಶೀಘ್ರ ವಿಲೇವಾರಿಗೊಳಿಸಬೇಕು. ಹಾಗೆಂದು ಗುಣಮಟ್ಟದಲ್ಲಿ ಯಾವುದೇ ಹೊಂದಾಣಿಕೆ ಸಲ್ಲ’’ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ವಿಚಾರಣೆಯಾಗಿ ಆದೇಶಕ್ಕಾಗಿ ಕಾಯ್ದಿರಿಲ್ಪಟ್ಟ ಪ್ರಕರಣಗಳ ಬಗ್ಗೆಯೂ ಗಮನ ಸೆಳೆದ ಸಚಿವರು, ‘‘ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ನ್ಯಾಯಾಲಯದಲ್ಲಿ ವಿಚಾರಣೆಯಾಗಿ ಆದೇಶಕ್ಕೆ ಕಾಯ್ದಿರಿಸಲ್ಪಟ್ಟ ಪ್ರಕರಣಗಳ ವಿಲೇವಾರಿಗೂ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ. ಆದೇಶಕ್ಕೆ ಕಾಯ್ದಿರಿಸಲ್ಪಟ್ಟ ಪ್ರಕರಣ ಗಳಿಗೆ ಸಂಬಂಧಿಸಿದಂತೆ 15 ದಿನಗಳೊಳಗಾಗಿ ಆದೇಶ ಹೊರಡಿಸಬೇಕು ಎಂಬ ಕಾನೂನು ಇದೆ. ಕಾನೂನಿನನ್ವಯ ಅಧಿಕಾರಿಗಳು ತುರ್ತಾಗಿ ಆದೇಶ ಹೊರಡಿಸಬೇಕು’’ ಎಂದು ತಾಕೀತು ಮಾಡಿದರು.

*ಎ.ಸಿ ನ್ಯಾಯಾಲಯಗಳಲ್ಲಿ 3354 ಪ್ರಕರಣಗಳು ಬಾಕಿ : ಎ.ಸಿ ನ್ಯಾಯಾಲಯಗಳಲ್ಲಿ 3354 ಪ್ರಕರಣಗಳು ಬಾಕಿ ಇವೆ. 164 ಪ್ರಕರಣ 5 ವರ್ಷಗಳಿಗೂ ಹೆಚ್ಚು ಬಾಕಿ ಇವೆ, 142 ಪ್ರಕರಣ 2 ರಿಂದ 5 ವರ್ಷಳಿಂದ ಬಾಕಿ ಇವೆ. ಡಿ.ಸಿ ನ್ಯಾಯಾ ಲಯದಲ್ಲಿ 495 ಪ್ರಕರಣಗಳು (5 ವರ್ಷಕ್ಕಿಂತ ಮೀರಿದ 83 ಪ್ರಕರಣ, 64 ಪ್ರಕರಣ 2 ರಿಂದ 5 ವರ್ಷದ ಬಾಕಿ) ಬಾಕಿ ಇವೆ, ಇವೆಲ್ಲವನ್ನು 3 ತಿಂಗಳ ಒಳಗೆ ವಿಲೇ ಮಾಡಬೇಕೆಂದು ಸೂಚಿಸಲಾಯಿತು.

*ದಾಖಲೆಗಳ ಡಿಜಿಟಲೀಕರಣ: ಮಂಗಳೂರು ಪ್ರವಾಸದ ವೇಳೆ ಅನಿರೀಕ್ಷಿತವಾಗಿ ಮಂಗಳೂರು ರೆಕಾರ್ಡ್ ರೂಮ್ ಗೆ ಭೇಟಿ ನೀಡಿದ ಸಚಿವ ಕೃಷ್ಣ ಬೈರೇಗೌಡಅವರು ನೂರು ವರ್ಷಗಳಷ್ಟು ಹಳೆಯ ದಾಖಲೆಗಳನ್ನು ವೀಕ್ಷಿಸಿದರು. ಅಲ್ಲದೆ, ಇಷ್ಟು ಹಳೆಯ ದಾಖಲೆಗಳನ್ನು ಹೇಗೆ ರಕ್ಷಣೆ ಮಾಡುತ್ತಿದ್ದೀರಿ? ಎಂದು ಮಾಹಿತಿಯನ್ನು ಕೇಳಿ ಪಡೆದರು.

ಈ ವೇಳೆ ಪತ್ರಕರ್ತರ ಜೊತೆಗೆ ಮಾತನಾಡಿದ ಸಚಿವರು, ‘‘ನೂರಾರು ವರ್ಷಗಳ ಹಳೆಯ ದಾಖಲೆಗಳನ್ನು ಸಂರಕ್ಷಿಸುವುದು ಕಷ್ಟದ ಕೆಲಸ. ಅಲ್ಲದೆ, ಇಂತಹ ದಾಖಲೆಗಳನ್ನು ತಿದ್ದುವ ಸಾಧ್ಯತೆಯೂ ಇದ್ದು, ಪರೋಕ್ಷವಾಗಿ ಭ್ರಷ್ಟಾಚಾರಕ್ಕೂ ಅನುವು ಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ರೆಕಾರ್ಡ್ ರೂಂನ ಎಲ್ಲಾ ದಾಖಲೆಗಳನ್ನೂ ಸ್ಕ್ಯಾನ್ ಮಾಡುವ ಮೂಲಕ ಡಿಜಿಟಲೀಕರಣಗೊಳಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಈಗಾಗಲೇ ಪೈಲಟ್ ಯೋಜನೆಯ ರೂಪದಲ್ಲಿ 6 ತಾಲೂಕುಗಳಲ್ಲಿ ದಾಖಲೆ ಡಿಜಿಟಲೀಕರಣ ಮಾಡಲಾಗುತ್ತಿದೆ. ಎಲ್ಲಾ ದಾಖಲೆಗಳನ್ನೂ ಡಿಜಿಟಲೀಕರಣ ಮಾಡುವ ಮೂಲಕ ಜನರೂ ಸಹ ತಮ್ಮ ದಾಖಲೆಗಳನ್ನು ಆನ್ ಲೈನ್ ಮೂಲಕ ನೋಡಬಹುದು. ಇದರಿಂದ ಜನರ ವಸೂಲಿ, ಶೋಷಣೆಯನ್ನು ತಪ್ಪಿಸಬಹುದು. ಪೈಲಟ್ ಯೋಜನೆ ಯಶಸ್ವಿಯಾದ ನಂತರ ಮುಂದಿನ ದಿನಗಳಲ್ಲಿ ಎಲ್ಲಾ ತಾಲೂಕುಗಳ ದಾಖಲೆಗಳನ್ನೂ ಡಿಜಿಟಲೀಕರಿಸಲಾಗುವುದು’’ ಎಂದು ಅವರು ಮಾಹಿತಿ ನೀಡಿದರು.

*ಕಡಲ್ಕೊರೆತ-ಭೂ ಕುಸಿತದ ಬಗ್ಗೆ ಎಚ್ಚರಿಕೆ!

ಪರಿಶೀಲನಾ ಸಭೆಯಲ್ಲಿ ಕಡಲ್ಕೊರೆತ ಹಾಗೂ ಭೂ ಕುಸಿತದ ಬಗ್ಗೆಯೂ ಎಚ್ಚರಿಕೆಯ ಮಾತುಗಳನ್ನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು,’’ಮಂಗಳೂರು ಭಾಗದಲ್ಲಿ ಕಡಲ್ಕೊರೆತ ಸಾಮಾನ್ಯವಾದ ದೀರ್ಘಾವದಿ ಸಮಸ್ಯೆ. ಆದರೆ, ಈ ವಿಚಾರ ಕಂದಾಯ ಇಲಾಖೆಯ ಅಡಿಯಲ್ಲಿ ನೇರವಾಗಿ ಬರುವುದಿಲ್ಲ. ಆದರೂ, ಕಡಲ್ಕೊರೆತ ಅಧಿಕವಾಗಿರುವ ದುರ್ಬಲ ಪ್ರದೇಶ ಗಳ ಬಗ್ಗೆ ಅಧಿಕಾರಿಗಳು ಎಚ್ಚರದಿಂದ ಇರಬೇಕು. ಸಮುದ್ರ ಸವೆತದ ಬಗ್ಗೆ ಕೇರಳ ಮಾದರಿಯ ಬಗ್ಗೆ ಅಧ್ಯಯನ-ಸಂಶೋಧನೆಯ ಅಗತ್ಯವಿದ್ದು ಬಂದರು ಇಲಾಖೆ ಜೊತೆಗೂ ಮಾತುಕತೆ ನಡೆಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಭೂ-ಕುಸಿತದ ಬಗ್ಗೆಯೂ ಪರಿಶೀಲನೆ ನಡೆಸಿದ ಸಚಿವರು ‘‘ಈ ಹಿಂದೆ ಕರಾವಳಿ ಭಾಗದಲ್ಲಿ ಅಧಿಕ ಭೂ ಕುಸಿತ ಸಾಧ್ಯತೆ ಇರುವ 81 ಪ್ರದೇಶವನ್ನು ಗುರುತು ಮಾಡಲಾಗಿತ್ತು. ಆದರೆ, ಅಧಿಕಾರಿಗಳು 71 ಪ್ರದೇಶಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ವಹಿಸಲಾಗುವುದೆಂದು ತಿಳಿಸಿದರು.

ಬಾಕಿ ಕಾಮಗಾರಿಗಳಿಗೆ ಗಡುವು

ಸಾರ್ವಜನಿಕ ಆಸ್ತಿಗಳಿಗೆ ಉಂಟಾಗಿರುವ ಮಳೆಹಾನಿ ದುರಸ್ಥಿಗೆ 2019 ರಿಂದ 2022 ರ ಅವಧಿಯಲ್ಲಿ ಮಂಜೂರಾಗಿ ಇನ್ನೂ ಪೂರ್ಣಗೊಳ್ಳದ ಕಾಮಗಾರಿಗಳನ್ನು(ಕೊರೋನ ಸೇರಿದಂತೆ) ಮುಂದಿನ 15 ದಿನಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಕಾಮಗಾರಿಗಳು ಇನ್ನೂ ಪೂರ್ಣಗೊಳ್ಳದಿರಲು ಕಾರಣವೇನು? 45 ದಿನಗಳಲ್ಲಿ ಮುಗಿಯಬೇಕಾದ ಕಾಮಗಾರಿಗಳು 2019ರಿಂದಲೂ ಬಾಕಿ ಉಳಿದಿವೆ ಎಂದರೆ ಏನರ್ಥ? ಎಂದು ಆಕ್ರೋಶ ಹೊರಹಾಕಿದ ಸಚಿವರು, ಮುಂದಿನ 15 ದಿನಗಳಲ್ಲಿ ಈ ಎಲ್ಲಾ ಕಾಮಗಾರಿಗಳೂ ಪೂರ್ಣಗೊಳಿಸಬೇಕು, ಸಂಬಂಧಪಟ್ಟ ಕಾಮಗಾರಿಗೆ ಹಣ ಪಾವತಿ ಮಾಡಬೇಕು. ಕಳೆದ ವರ್ಷದ ಬಾಕಿಯನ್ನೂ ಸಂಪೂರ್ಣವಾಗಿ ವಿಲೇವಾರಿ ಮಾಡಬೇಕು ಎಂದು ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ಪ್ರಕೃತಿ ವಿಕೋಪ ಸಂದರ್ಭದ ತುರ್ತು ಖರ್ಚುಗಳಿಗಾಗಿ ಜಿಲ್ಲಾಧಿಕಾರಿ ಖಾತೆಯಲ್ಲಿ 7 ಕೋಟಿ ರೂ. ಹಾಗೂ ತಹಶೀಲ್ದಾರ್ ಖಾತೆಯಲ್ಲಿ ತಲಾ 3 ಕೋಟಿ ರೂ. ಹಣ ಇದೆ. ಈ ಹಣವನ್ನೂ ಸಹ ಅಗತ್ಯ ಕಾಮಗಾರಿಗಳಿಗೆ ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಸರ್ಕಾರಿ ಕಚೇರಿಗಳಿಗೆ ದಿಢೀರ್ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಂಗಳೂರಿನ ತಾಲೂಕು ಕಚೇರಿ, ಪಡೀಲಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿಯ ಪ್ರಗತಿ ಹಾಗೂ ಉಳ್ಳಾಲದ ಮುಕ್ಕಚೇರಿ ಪ್ರಾಥಮಿಕ ಶಾಲೆ, ಸೋಮೇಶ್ವರ ಪುರಸಭೆ ಹಾಗೂ ಬಟ್ಟಂಪಾಡಿಯಲ್ಲಿ ಸಂಚಾರ ನಡೆಸಿದರು.

ಮಂಗಳೂರಿನ ಕಂದಾಯ ಇಲಾಖೆ ತಳಮಟ್ಟದ ಕಚೇರಿಗಳಾದ ಗ್ರಾಮಲೆಕ್ಕಾಧಿಕಾರಿ, ನಾಡಕಚೇರಿ, ತಹಶೀಲ್ದಾರ್, ಉಪನೋಂದಣಿ ಕಚೇರಿಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಅಧಿಕಾರಿಗಳು ಯಾವ ರೀತಿ ಜನರ ಸಮಸ್ಯೆ ಗಳಿಗೆ ಸ್ಪಂದಿಸುತ್ತಿದ್ದಾರೆ ಎನ್ನುವುದನ್ನು ಪರಿಶೀಲಿಸಿದರು.

ಈ ವೇಳೆ ಪಡೀಲ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ‘‘2017-18ರಲ್ಲಿ ಪಡೀಲ್ ನಲ್ಲಿ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕೆಲಸ ಆರಂಭಗೊಂಡಿತ್ತು. 50 ರಿಂದ 55 ಕೋಟಿ ರೂ ವೆಚ್ಚದ ಕಾಮಗಾರಿ ಈಗಾಗಲೇ ನಡೆದಿದೆ. ಆದರೆ ಕಾಮಗಾರಿ ಪೂರ್ಣಗೊಂಡಿಲ್ಲ, ಜತೆಗೆ ಕಚೇರಿಯೂ ಸ್ಥಳಾಂತರ ವಾಗಿಲ್ಲ. ಮೊದಲು ಯಾವ ರೀತಿ ಅನುಮೋದನೆ ಮಾಡಲಾಗಿತ್ತೋ ಅದೇ ರೀತಿ ಕಾಮಗಾರಿ ನಡೆದಿದೆ. ಹಿಂದಿನ ಸರಕಾರದ ಕಾಲದಲ್ಲಿ ಕಾಮಗಾರಿ ಮುಗಿಸುವ ಕೆಲಸ ಆಗಿಲ್ಲ. ನಮ್ಮ ಸರಕಾರದ ಅವಧಿಯಲ್ಲಿ ಇದನ್ನು ಪೂರೈಸಲು ಬದ್ಧರಾಗಿದ್ದೇವೆ’’ ಮತ್ತು ಒಂದು ವರ್ಷದೊಳಗಾಗಿ ಜಿಲ್ಲಾಧಿಕಾರಿ ಕಚೇರಿಯನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

*ಅಧಿಕಾರಿಗಳು ಇ-ಆಫೀಸ್ ಬಳಕೆಗೆ ಸೂಚನೆ

ಹಳೇ ಕಾಲದ ಪತ್ರ ವ್ಯವಹಾರವನ್ನು ಕೈಬಿಟ್ಟು ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳುವ ಹಾಗೂ ಕಡತಗಳ ಶೀಘ್ರ ವಿಲೇವಾರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಗಸ್ಟ್ 15ರಿಂದ ಇ-ಆಫೀಸ್ ಅನುಷ್ಠಾನಗೊಳಿಸಲಾಗಿದೆ. ಎಲ್ಲಾ ಜಿಲ್ಲಾಧಿಕಾರಿಗಳೂ ಈಗಾಗಲೇ ಇ-ಆಫೀಸ್ ಮೂಲಕವೇ ಕಡತ ವಿಲೇವಾರಿ ಮಾಡುತ್ತಿದ್ದು, ತಹಶೀಲ್ದಾರ್ ಹಾಗೂ ವಿಭಾಗಾಧಿಕಾರಿಗಳು ಸೆಪ್ಟೆಂಬರ್ 1ರ ಒಳಗಾಗಿ ಇ-ಆಫೀಸ್ ಬಳಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

‘‘ಕಡತಗಳು ಇ-ಆಫೀಸ್ ನಲ್ಲಿ ನನ್ನ ಲಾಗಿನ್ ಗೆ ಬಂದರೆ 2 ದಿನದಲ್ಲಿ ವಿಲೇವಾರಿ ಮಾಡಿದ್ದೇನೆ. ಇ-ಆಫೀಸ್ ಸಹಜವಾಗಿ ಕಾರ್ಯ ದಕ್ಷತೆ ಹೆಚ್ಚಿಸಲಿದೆ. ಯಾವುದೇ ಸ್ಥಳದಲ್ಲಿಂದಲು ನೀವು ಕಡತ ವಿಲೇವಾರಿ ಮಾಡಬಹುದಾಗಿದೆ. ಸ್ವತ ನಾನು ಇ-ಆಫೀಸ್ ಮೂಲಕ ಕಡತ ವಿಲೇವಾರಿ ಮಾಡುತ್ತಿದ್ದೇನೆ. ಶಾಲೆ, ಗ್ರಾಮ ಪಂಚಾಯತಿಗೆ ಜಮೀನು ನೀಡಲು ಆಗುತ್ತಿರುವ ವಿಳಂಬಕ್ಕೆ ಇ-ಆಫೀಸ್ ಮೂಲಕ ಪರಿಹಾರ ನೀಡಬಹುದು’’ ಎಂದು ಅವರು ತಿಳಿಸಿದರು.

*ಕಾಲಮಿತಿಯೊಳಗೆ ಜನರ ಸಮಸ್ಯೆಗಳ ಇತ್ಯರ್ಥಗೊಳಿಸಲು ಸೂಚನೆ

ದ.ಕ. ಜಿಲ್ಲೆಯ ಕಂದಾಯ ಇಲಾಖೆ, ಸರ್ವೇ ಇಲಾಖೆಗೆ ಸಂಬಂಧಿಸಿದ ಜನರ ಸಮಸ್ಯೆಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಮಂಗಳೂರು ನಗರದ ಹೊರವಲಯದ ಪಡೀಲ್‌ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಯವರ ಕಚೇರಿ ಕಟ್ಟಡದ ಕಾಮಗಾರಿಯ ಪ್ರಗತಿಯನ್ನು ಮಂಗಳವಾರ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಅನಿರೀಕ್ಷಿತವಾಗಿ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಆಡಳಿತ ವ್ಯವಸ್ಥೆ ಗೆ ಚುರುಕು ಮುಟ್ಟಿಸುವ ಮೂಲಕ ಮತ್ತು ಅಧಿಕಾರಿಗಳು ಜನಪರವಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗಿದೆ ಎಂದರು.

ಕಂದಾಯ ಇಲಾಖೆಯ ತಳಮಟ್ಟದ ಕಚೇರಿಗಳಾದ ಗ್ರಾಮ ಲೆಕ್ಕಾಧಿಕಾರಿ, ನಾಡಕಚೇರಿ, ಸಬ್ ರಿಜಿಸ್ಟ್ರಾರ್, ತಹಶೀಲ್ದಾರ್ ಕಚೇರಿ ಹಾಗೂ ರೆಕಾರ್ಡ್ ರೂಂಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಅಧಿಕಾರಿಗಳು ಯಾವ ರೀತಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ ಎನ್ನುವುದನ್ನು ಪರಿಶೀಲನೆ ನಡೆಸಲಾಗಿದೆ. ಅಧಿಕಾರಿಗಳು ಕಾಲಮಿತಿಯೊಳಗೆ ಜನರ ಕೆಲಸ ಮಾಡಿಕೊಡಲು ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

2017-18ರಲ್ಲಿ ಪಡೀಲ್‌ನಲ್ಲಿ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕೆಲಸ ಆರಂಭಗೊಂಡಿತ್ತು. ಹಿಂದೆ ಕಾಂಗ್ರೆಸ್ ಸರಕಾರ ಇರುವಾಗ ಕಟ್ಟಡ ಮಂಜೂರಾಗಿತ್ತು. ಸುಮಾರು 50-55 ಕೋಟಿ ರೂ ವೆಚ್ಚದ ಕಾಮಗಾರಿ ಈಗಾಗಲೇ ನಡೆದಿದೆ. ಆದರೂ ಕೆಲಸ ಪೂರ್ಣ ಗೊಂಡಿಲ್ಲ. ಇಲ್ಲಿಯವರೆಗೆ ಡಿಸಿ ಕಚೇರಿ ಸ್ಥಳಾಂತರ ಆಗಿಲ್ಲ ಎಂದರು.

ಮೂಲ ಯೋಜನೆ ಪ್ರಕಾರ ಎರಡು ಹಂತದಲ್ಲಿ ಕಟ್ಟಡದ ಕಾಮಗಾರಿ ನಡೆಯಬೇಕಿತ್ತು. ಮೊದಲ ಹಂತದಲ್ಲಿ ಅನುಮೋದನೆ ಯಾಗಿರುವ ಬಜೆಟ್ ವೆಚ್ಚ ಜಾಸ್ತಿ ಆಗಿದೆ. ಆದರೂ ಕೂಡಾ ಹಿಂದೆ ಯಾವ ರೀತಿ ಅನುಮೋದನೆ ಮಾಡಲಾಗಿತ್ತೋ ಅದೇ ರೀತಿ ಕಾಮಗಾರಿ ನಡೆದಿದೆ. ಹಿಂದಿನ ಸರಕಾರ ಕಾಮಗಾರಿ ಮುಗಿಸುವ ನಿಟ್ಟಿನಲ್ಲಿ ಗಮನ ಹರಿಸಿಲ್ಲ. ಎರಡನೇ ಹಂತದ ಕಾಮಗಾರಿ ಹಿಂದಿನ ಸರಕಾರ ಅನುಮೋದನೆ ನೀಡಬೇಕಾಗಿತ್ತು. ಆದರೆ ಅವರಿಂದ ಆಗಿಲ್ಲ. ನಮ್ಮ ಸರಕಾರದ ಅವಧಿಯಲ್ಲಿ ಇದನ್ನು ಪೂರೈಸಲು ಬದ್ಧರಾಗಿದ್ದೇವೆ ಎಂದರು.

ಸದ್ಯಕ್ಕೆ, ನಮ್ಮ ಮುಖ್ಯ ಕಾಳಜಿ ಡಿಸಿ ಕಚೇರಿಯನ್ನು ಸ್ಥಳಾಂತರಿಸುವುದು ಮತ್ತು ಅದು ನಮ್ಮ ಮುಖ್ಯ ಆದ್ಯತೆಯಾಗಿದೆ. ಇದನ್ನು ಆದಷ್ಟು ಬೇಗ ಕೈಗೊಳ್ಳಬೇಕು. ಜಿಲ್ಲಾಡಳಿತದ ಕಚೇರಿಯನ್ನು ವರ್ಷದೊಳಗೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗುವುದು. ಉಳಿದ ಕಚೇರಿಗಳನ್ನು ಬಳಿಕ ಸ್ಥಳಾಂತರ ಮಾಡಲಾಗುವುದು ಎಂದರು.

ದ.ಕ. ಜಿಲ್ಲೆಗೆ ಭವ್ಯವಾದ ಜಿಲ್ಲಾಧಿಕಾರಿ ಸಂಕೀರ್ಣ ಬೇಕು ಎನ್ನುವ ಆಶಯದೊಂದಿಗೆ ಯೋಜನೆ ರೂಪಿಸಲಾಗಿತ್ತು. ಜಿಲ್ಲೆಗಳ ಎಲ್ಲ ಇಲಾಖೆಗಳ ಆಡಳಿತ ಕಚೇರಿಗಳ ಸಂಕೀರ್ಣವನ್ನು ನಿರ್ಮಿಸುವ ಚಿಂತನೆ ನಡೆಸಲಾಗಿತ್ತು. ಮೊದಲ ಹಂತದ ಯೋಜನೆಯಲ್ಲಿ 55 ಕೋಟಿ ರೂ. ವೆಚ್ಚದ ಕಾಮಗಾರಿ ನಡೆದಿದೆ. ಎರಡನೇ ಹಂತದ ಯೋಜನೆಗೆ ಹಿಂದಿನ ಸರಕಾರ ಅನುದಾನ ಒದಗಿಸಿಲ್ಲ. ಎರಡನೇ ಹಂತದ ಯೋಜನೆಗೆ 32 ಕೋಟಿ ರೂ. ಬೇಕು ಎಂದು ಕೇಳುತ್ತಿದ್ದಾರೆ. ನಿಜವಾಗಿಯೂ ಎಷ್ಟು ಅನುದಾನ ಬೇಕು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ದ.ಕ. ಜಿಲ್ಲೆಯಲ್ಲಿ ಸಾಗುವಳಿದಾರರಿಗೆ ಅವರ ಜಮೀನನ್ನು ಸಕ್ರಮೀಕರಣ ಮಾಡಿ ಸಾಗುವಳಿ ಚೀಟಿ ವಿತರಣೆ ಮಾಡುವ ಕಾರ್ಯವನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಫಾರಂ 53 ಮತ್ತು 57 ಎರಡೂ ಕೂಡಾ ಪೆಂಡಿಗ್ ಇದೆ. ಅವುಗಳ ಶೀಘ್ರ ವಿಲೇವಾರಿಗೆ ಕ್ರಮ ಕೊಳ್ಳಲಾಗುವುದು. 94 ಸಿ ಎಷ್ಟು ವಿಲೇವಾರಿಗೆ ಎಷ್ಟು ಬಾಕಿ ಇದೆ ಎನ್ನುವ ಬಗ್ಗೆ ಪರಿಶೀಲನೆ ಮಾಡಿ ಕಾಲ ಮಿತಿಯೊಳಗೆ ವಿಲೇವಾರಿ ಮಾಡಲಾಗು ವುದು ಎಂದು ಹೇಳಿದರು.

ಬೆಳಗ್ಗಿನಿಂದ ಮಧ್ಯಾಹ್ನದ ತನಕ ವಿವಿಧ ಕಚೇರಿಗೆ ಭೇಟಿ ನೀಡಲಾಗಿದೆ. ಸೋಮೇಶ್ವರ ಗ್ರಾಮ ಲೆಕ್ಕಾಧಿಕಾರಿ ಕಚೇರಿ, ಉಳ್ಳಾಲ ನಾಡಕಚೇರಿಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಪರಿಶೀಲನೆ, ಮಂಗಳೂರು ತಾಲೂಕು ಕಚೇರಿಯ ದಾಖಲೆಯ ಕೊಠಡಿಯಲ್ಲಿ 100 ವರ್ಷಗಳ ಹಿಂದಿನ ದಾಖಲೆಯ ನಿರ್ವಹಣೆ, ಜನರಿಗೆ ದಾಖಲೆ ಸಿಗುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಮಾಹಿತಿ ಪಡೆಯಲಾಗಿದೆ. ಉಪನೋಂದಣಿ ಕಚೇರಿಯಲ್ಲಿ ಕಾವೇರಿ -2 ಅನುಷ್ಠಾನ ಮಾಡಿದ ಮೇಲೆ ಜನರಿಗೆ ಆಗುತ್ತಿರುವ ಅನುಕೂಲತೆಗಳು , ಅನಾಕೂಲತೆಗಳ ಬಗ್ಗೆ, ಸರ್ವೆ ದಾಖಲೆಯ ಸಮಸ್ಯೆಗಳ ಬಗ್ಗೆ ಅರಿಯುವ ಪ್ರಯತ್ನ ಮಾಡಲಾಗಿದೆ ಎಂದರು.

ದ.ಕ.ಜಿಲ್ಲೆಯಲ್ಲಿ ಹಿಂದಿನಿಂದಲೂ ಇಲ್ಲಿಯದ್ದೇ ಸಮಸ್ಯೆ ಇದೆ. ಆರ್‌ಟಿಸಿ ಸಮಸ್ಯೆ ಪರಿಹಾರಕ್ಕೆ ಅಭಿಯಾನ, ಹಳೆ ದಾಖಲೆ ಗಳು ಶಿಥಿಲಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದಾಖಲೆಗಳನ್ನು ಡಿಜಿಟಲೀಕರಣ ಮಾಡುವ ಯೋಜನೆ ಇದೆ. ರಾಜ್ಯದ ಕೆಲವು ಭಾಗಗಳಲ್ಲಿ ಮೂಲ ದಾಖಲೆಗಳನ್ನು ತಿದ್ದುವ ಮೂಲಕ ಬೋಗಸ್ ದಾಖಲೆಗಳನ್ನು ನಿರ್ಮಿಸಿರುವುದು ಬೆಳಕಿಗೆ ಬಂದಿದೆ. ಇಂತಹ ಅವ್ಯವಹಾರ ತಡೆಗಟ್ಟಲು ಮತ್ತು ಜನರಿಗೆ ವಿಳಂಬವನ್ನು ತಡೆಗಟ್ಟಲು ಹಳೆಯ ಕಡತಗಳನ್ನು ಸ್ಕ್ಯಾನಿಂಗ್ ಮಾಡುವ ಮತ್ತು ಡಿಜಿಟಲೀಕರಣ ಮಾಡುವ ನಿಟ್ಟಿನಲ್ಲಿ ಪೈಲೆಟ್ ಪ್ರಾಜೆಕ್ಟ್ ಆಲೋಚನೆಯನ್ನು ಸರಕಾರ ಹೊಂದಿದೆ.

ಕಂದಾಯ ಇಲಾಖೆ ಜನಪರವಾಗಿ ಕೆಲಸ ಮಾಡಬೇಕು. ಕಂದಾಯ ಇಲಾಖೆಯಿಂದ ಜನರಿಗೆ ತೊಂದರೆಯಾಗಬಾರದು ಎನ್ನುವುದು ಸರಕಾರದ ಧ್ಯೇಯವಾಗಿದೆ. ಕಂದಾಯ ಇಲಾಖೆ ಜನಪರವಾಗಿ ಕೆಲಸ ಮಾಡಬೇಕು. ಜನರ ಸಮಸ್ಯೆಗಳಿಗೆ ಪರಿಹಾರ, ಸರಳೀಕರಣ, ತಂತ್ರಜ್ಞಾನ ಬಳಕೆಯ ಕಡೆಗೆ ಒತ್ತು ನೀಡಲಾಗುವುದು ಎಂದರು.

ಶಾಸಕರಾದ ಅಶೋಕ್ ಕುಮಾರ್ ರೈ, ವೇದವ್ಯಾಸ್ ಕಾಮತ್ ಮತ್ತು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಡಾ.ಮಂಜುನಾಥ್ ಭಂಡಾರಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X