Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ...

ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ಇರಲಿ: ತಾಯ್ನಾಡಿಗೆ ಮರಳಿದ ಕಡಬದ ಯುವಕ ಚಂದ್ರಶೇಖರ್ ಮನವಿ

ವಾರ್ತಾಭಾರತಿವಾರ್ತಾಭಾರತಿ23 Nov 2023 7:24 PM IST
share
ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ಇರಲಿ: ತಾಯ್ನಾಡಿಗೆ ಮರಳಿದ ಕಡಬದ ಯುವಕ ಚಂದ್ರಶೇಖರ್ ಮನವಿ

ಮಂಗಳೂರು: ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗರೂಕರಾಗಿರಿ, ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳುವಾಗ ಎಚ್ಚರಿಕೆ ಅತೀ ಅಗತ್ಯ ಎನ್ನುತ್ತಾರೆ ಕಡಬ ತಾಲೂಕಿನ ಐತ್ತೂರು ನಿವಾಸಿ ಚಂದ್ರಶೇಖರ್.

ತಾನು ಮಾಡದ ತಪ್ಪಿಗೆ ರಿಯಾದ್‌ನಲ್ಲಿ ಸುಮಾರು ಒಂದು ವರ್ಷ ಕಾಲ ಜೈಲುವಾಸ ಅನುಭವಿಸಿ ತಾಯ್ನಾಡಿಗೆ ವಾಪಾಸಾಗಿರುವ ಅವರು ಗುರುವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮನವಿ ಮಾಡಿದರು.

ತನ್ನದೇ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿದ ಹ್ಯಾಕರ್‌ಗಳ ವಂಚನಾ ಜಾಲಕ್ಕೆ ಸಿಲುಕಿ ಏಳು ತಿಂಗಳು ರಿಯಾದ್‌ನ ಜೈಲಿನಲ್ಲಿ ಹಾಗೂ ನಾಲ್ಕು ತಿಂಗಳು ಅಲ್ಲಿನ ಪೊಲೀಸ್ ಠಾಣೆಯಲ್ಲಿ ಬಂಧಿಯಾಗಿದ್ದ ಚಂದ್ರಶೇಖರ್, ತನ್ನಂತೆ ಇನ್ನು ಯಾರೂ ಇಂತಹ ತೊಂದರೆಗೆ ಸಿಲುಕಬಾರದು ಎಂದು ಹೇಳಿದರು.

ಅಲ್ಲದೆ ತನ್ನಂತೆಯೇ ವಿನಾ ಕಾರಣ ಸಂಕಷ್ಟಕ್ಕೆ ಸಿಲುಕಿದ ಅನೇಕ ಮಂದಿ ಭಾರತೀಯರು ರಿಯಾದ್ ಜೈಲಿನಲ್ಲಿದ್ದಾರೆ, ಕನಿಷ್ಠ ಅವರ ನೆರವಿಗಾದರೂ ರಿಯಾದ್‌ನಲ್ಲಿರುವ ಭಾರತೀಯ ವಿದೇಶಾಂಗ ಇಲಾಖೆ ಪ್ರಮಾಣಿಕವಾಗಿ ಪ್ರಯತ್ನ ನಡೆಸಬೇಕು ಎಂದು ಅವರು ಹೇಳಿದರು.

ತಮ್ಮ ಘಟನೆಯ ಬಗ್ಗೆ ವಿವರ ನೀಡಿದ ಅವರು, ಕಳೆದ ವರ್ಷ ನವೆಂಬರ್‌ನಲ್ಲಿ ಇವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ ಅದಕ್ಕೆ ಸೌದಿಯ ಮಹಿಳೆಯೊಬ್ಬರ ಖಾತೆಯಿಂದ ಅನಾಮತ್ತಾಗಿ 22 ಸಾವಿರ ರಿಯಲ್ ಜಮೆ ಮಾಡಲಾಗಿತ್ತು. ಈ ಬಗ್ಗೆ ಮಹಿಳೆ ಚಂದ್ರಶೇಖರ್ ವಿರುದ್ಧ ಅಲ್ಲಿನ ಪೊಲೀಸರಿಗೆ ದೂರು ನೀಡಿದ್ದರು. ತನ್ನ ಖಾತೆ ಹ್ಯಾಕ್ ಆದ ಮಾಹಿತಿ ಇಲ್ಲದೆ ಚಂದ್ರಶೇಖರ್ ವಂಚನೆ ಆರೋಪದಲ್ಲಿ ಜೈಲು ಸೇರುವಂತಾಗಿತ್ತು. ಕೊನೆಗೆ ರಿಯಾದ್‌ನಲ್ಲಿರುವ ತನ್ನ ಕಂಪನಿಯ ಸ್ನೇಹಿತರ ನೆರವಿನಲ್ಲಿ ಮಹಿಳೆಯ 22 ಸಾವಿರ ರಿಯಲ್ (ಭಾರತೀಯ ಮೌಲ್ಯ 4.5 ಲಕ್ಷ ರೂ.) ಪಾವತಿಸಿ, ದೂರನ್ನು ವಾಪಸ್ ಪಡೆದು ಕೇಸುಗಳಿಂದ ಮುಕ್ತಿಗೊಂಡು ಈಗ ಮರಳಿದ್ದಾರೆ.

ವಂಚನೆ ಕೇಸಿನಿಂದ ಮುಕ್ತಗೊಂಡರೂ ನನ್ನ ಬಿಡುಗಡೆಗೆ ಅಲ್ಲಿನ ಅಧಿಕಾರಿಗಳು ಸಾಕಷ್ಟು ಸತಾಯಿಸಿದ್ದಾರೆ. ನನ್ನನ್ನು ಬಂಧಿಸಿದ ಕೂಡಲೇ ಪಾಸ್‌ಪೋರ್ಟ್‌ನ್ನು ಬ್ಲಾಕ್ ಮಾಡಿದ್ದರು. ಬಳಿಕ ಪಾಸ್‌ಪೋರ್ಟ್ ನವೀಕರಿಸಲು ಸೂಚಿಸಿ ಬಿಡುಗಡೆಗೆ ದಿನದೂಡುವ ಯತ್ನಕ್ಕೆ ಅಧಿಕಾರಿಗಳು ಕೈಹಾಕಿದ್ದರು. ಕೊನೆಗೂ ಪಾಸ್‌ಪೋರ್ಟ್ ನವೀಕರಣದ ಅಗತ್ಯವಿಲ್ಲ ಎಂಬುದನ್ನು ನನ್ನ ಸ್ನೇಹಿತರು ಅದನ್ನು ಹಾಜರುಪಡಿಸಿ ಮನವರಿಕೆ ಮಾಡಿದ ಬಳಿಕವೇ ಅಕಾರಿಗಳು ಸಮ್ಮತಿಸಿದರು. ಬಳಿಕ ತಾಯ್ನಾಡಿಗೆ ಮರಳಲು ಏರ್‌ಇಂಡಿಯಾ ಟಿಕೆಟ್ ಮಾಡಿದಾಗ, ನನ್ನ ಬಿಡುಗಡೆ ಬಗ್ಗೆ ಪತ್ರಿಕೆಗಳಲ್ಲಿ ಬಂದ ಸುದ್ದಿಯನ್ನು ಗಮನಿಸಿ ಮತ್ತೆ ಸತಾಯಿಸಲು ಮುಂದಾದರು. ಸೌದಿ ಏರ್‌ಲೈನ್ಸ್ ಇಲ್ಲದೆ ಬೇರೆ ವಿಮಾನದಲ್ಲಿ ಕಳುಹಿಸಲು ಸಾಧ್ಯವಿಲ್ಲ ಎಂದು ಸತಾಯಿಸಿದರು. ಕೊನೆಗೂ ಅಲ್ಲಿ ಉದ್ಯೋಗದಲ್ಲಿರುವ ಕರಾವಳಿ ಮೂಲದ ನನ್ನ ಸ್ನೇಹಿತರಾದ ಅರುಣ್ ಕುಮಾರ್, ಪ್ರಕಾಶ್ ಅಮೀನ್, ಫ್ರಾನ್ಸಿಸ್ ಹಾಗೂ ರಾಘವ್ ಮತ್ತಿತರರು ಸಾಕಷ್ಟು ಪ್ರಯತ್ನಿಸಿ ಒತ್ತಡ ಹಾಕಿಸಿ ಏರ್ ಇಂಡಿಯಾದಲ್ಲಿ ತೆರಳಲು ಅನುವು ಮಾಡಿಕೊಟ್ಟರು. ನನ್ನ ಸ್ನೇಹಿತರ ಸಹಕಾರಕ್ಕೆ ಕತಜ್ಞತೆ ವ್ಯಕ್ತಪಡಿಸುವುದಾಗಿ ಚಂದ್ರಶೇಖರ್ ಹೇಳಿದರು.

ನನ್ನ ಖಾತೆ ಹ್ಯಾಕ್ ಆಗಿದೆ ಎಂದು ಹೇಳಿದರೂ ಆ ಬಗ್ಗೆ ತನಿಖೆ ನಡೆಸದೆ ಮಹಿಳೆಗೆ ವಂಚನೆ ಎಸಗಿದ್ದನ್ನೇ ಗುರಿಯಾಗಿಸಿ ಏಕಪಕ್ಷೀಯವಾಗಿ ತನಿಖೆ ನಡೆಸಿ ನನ್ನನ್ನು ತಪ್ಪಿತಸ್ಥನನ್ನಾಗಿ ಮಾಡಲಾಗಿದೆ. ಒಮ್ಮೆ ಜೈಲು ಶಿಕ್ಷೆಗೆ ಒಳಗಾದರೆ ರಿಯಾದ್‌ನ ಕಾನೂನು ಪ್ರಕಾರ ಮತ್ತೆ ಐದು ವರ್ಷ ಅಲ್ಲಿ ಉದ್ಯೋಗ ಮಾಡುವಂತಿಲ್ಲ. ಹಾಗಾಗಿ ನಾನು ಮುಂದೆ ಬೇರೆ ದೇಶಕ್ಕೆ ತೆರಳಿ ಉದ್ಯೋಗ ಸೇರ್ಪಡೆ ಬಗ್ಗೆ ಯೋಚಿಸುತ್ತಿದ್ದೇನೆ ಎಂದರು. ಚಂದ್ರಶೇಖರ್ ಸಹೋದರ ಹರೀಶ್ ಕಡಬ, ಮುಖಂಡ ಬಾಲಕಷ್ಣ ಬಳಕ ಇದ್ದರು.

ಭಾರತೀಯರಿಗೇ ಕೈಕೊಟ್ಟ ವಿದೇಶಾಂಗ ಇಲಾಖೆ!

ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೆಂಗುಡೇಲು ಮಾತನಾಡಿ, ನಾವು ಇಲ್ಲಿನ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾರೂ ಮನಸ್ಸು ಮಾಡಲಿಲ್ಲ. ಭಾರತೀಯ ವಿದೇಶಾಂಗ ಇಲಾಖೆಗೆ ಪತ್ರ ಬರೆದರೆ, ಅವರು ರಿಯಾದ್ ಬದಲು ಬೇರೆ ರಾಷ್ಟ್ರಕ್ಕೆ ಕಳುಹಿಸಿದ್ದರು. ಅಲ್ಲಿ ತಪ್ಪಿತಸ್ಥನಾಗಿ ಜೈಲು ಸೇರಿ ಬಳಿಕ ಖುಲಾಸೆಗೊಂಡು ಬಿಡುಗಡೆಗೊಂಡರೂ ತಾಯ್ನಾಡಿಗೆ ಕಳುಹಿಸಿಕೊಡುವಲ್ಲಿ ಸಹಕಾರ ನೀಡಲು ಅಲ್ಲಿನ ವಿದೇಶಾಂಗ ಇಲಾಖೆ ನಿರಾಕರಿಸಿರುವುದು ಬೇಸರ ತರಿಸಿದೆ. ಹೀಗಾದಲ್ಲಿ ವಿದೇಶದಲ್ಲಿ ವಿನಾ ಕಾರಣ ತೊಂದರೆಗೆ ಸಿಲುಕಿದವರು ಭಾರತೀಯ ವಿದೇಶಾಂಗ‌ ಇಲಾಖೆಯನ್ನಲ್ಲದೆ ಬೇರೆ ಯಾರ ಮೊರೆ ಹೋಗಬೇಕು ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X