Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ | ಏಕಾಏಕಿ ಏರಿದ ನದಿಗಳ ನೀರು...

ಬೆಳ್ತಂಗಡಿ | ಏಕಾಏಕಿ ಏರಿದ ನದಿಗಳ ನೀರು ; ಭೂಕುಸಿತದ ಶಂಕೆ

ವಾರ್ತಾಭಾರತಿವಾರ್ತಾಭಾರತಿ19 Aug 2024 9:13 PM IST
share
ಬೆಳ್ತಂಗಡಿ | ಏಕಾಏಕಿ ಏರಿದ ನದಿಗಳ ನೀರು ; ಭೂಕುಸಿತದ ಶಂಕೆ

ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಮಳೆ ಕಡಿಮೆಯಾಗಿ ಶಾಂತವಾಗಿದ್ದ ನೇತ್ರಾವತಿ ಮತ್ತು ಮೃತ್ಯುಂಜಯ ನದಿಗಳಲ್ಲಿ ಏಕಾಏಕಿ ನೀರು ಉಕ್ಕಿ ಹರಿದು ಸೋಮವಾರ ಸಂಜೆ ಪ್ರವಾಹದ ಪರಿಸ್ಥಿತಿ ಕಂಡು ಬಂತು.

ತಾಲೂಕಿನಾದ್ಯಂತ ಹೆಚ್ಚಿನ ಮಳೆ ಇಲ್ಲದಿದ್ದರೂ ಈ ನದಿಗಳ ಉಗಮ ಸ್ಥಾನದಲ್ಲಿ ಭಾರಿ ಮಳೆಯಾಗಿರುವ ಸಾಧ್ಯತೆ ಇದ್ದು ನದಿಗಳಲ್ಲಿ ಪ್ರವಾಹದಂತೆ ನೀರು ಹರಿದಿದೆ.

ಜುಲೈ ತಿಂಗಳಲ್ಲಿ ಆಗಾಗ ಸಾಮಾನ್ಯ ಪ್ರವಾಹ ಸ್ಥಿತಿಯಲ್ಲಿ ಹರಿದ ಈ ನದಿಗಳು ಮತ್ತೆ ಸೋಮವಾರ ಪ್ರವಾಹದ ಭೀತಿ ಸೃಷ್ಟಿಸಿದವು ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಸೋಮವಾರ ಮಧ್ಯಾಹ್ನ ಸಾಮಾನ್ಯ ಮಳೆಯಾಗಿತ್ತು ಆದರೆ ಸಂಜೆ 5ರ ವೇಳೆಗೆ ನದಿಗಳು ಏಕಾಏಕಿ ತುಂಬಿ ಹರಿಯ ತೊಡಗಿದವು.

ಮುಂಡಾಜೆ, ಕಲ್ಮಂಜ, ಕಡಿರುದ್ಯಾವರ, ಮಿತ್ತಬಾಗಿಲು ಮೊದಲಾದ ಕಡೆ ನದಿ ನೀರು ದಡಮೀರಿ ಹರಿದಿದ್ದು ಹೆಚ್ಚಿನ ತೋಟಗಳಿಗೆ ಪ್ರವಾಹದ ನೀರು ನುಗ್ಗಿದೆ. ಕಡಿರುದ್ಯಾವರದಿಂದ 10 ಕಿಮಿ ದೂರದಲ್ಲಿರುವ ಬಂಡಾಜೆ ಜಲಪಾತ ತುಂಬಿ ಹರಿಯುವ ದೃಶ್ಯ ಕಡಿರುದ್ಯಾವರದಲ್ಲಿ ಗೋಚರಿಸುತ್ತಿತ್ತು.

ಜನರಲ್ಲಿ ಭೀತಿ

ಮಳೆ ಇಲ್ಲದಿದ್ದರೂ ನದಿಗಳಲ್ಲಿ ಪ್ರವಾಹದಂತೆ ಹರಿದುಬಂದ ನೀರು ಕಂಡ ನದಿ ಪಾತ್ರಗಳಲ್ಲಿ ವಾಸಿಸುವ ಜನರು ಭೀತಿ ಗೊಳಗಾದರು. ಹಲವರು ತಮ್ಮ ವಾಸ್ತವ್ಯ ಬದಲಿಸಿದರು. ರಾತ್ರಿ 8:30ರ ಹೊತ್ತಿಗೆ ನದಿ ನೀರು ಇಳಿಕೆಯಾಗ ತೊಡಗಿತು. ಇದು ಈ ವರ್ಷ ಎರಡು ನದಿಗಳಲ್ಲಿ ಹರಿದ ಅತಿ ಹೆಚ್ಚಿನ ನೀರಿನ ಪ್ರಮಾಣವಾಗಿದೆ.

ಭೂ ಕುಸಿತದ ಅನುಮಾನ

ನದಿ ನೀರು ಸಂಪೂರ್ಣವಾಗಿ ಕೆಸರುಮಯವಾಗಿತ್ತು. ನೀರಿನ ವೇಗವೂ ತೀರಾ ಹೆಚ್ಚಾಗಿತ್ತು. ನದಿನೀರಿನಲ್ಲಿ ದೊಡ್ಡ ಮಟ್ಟ ದಲ್ಲಿ ಮರ‌ಮಟ್ಟುಗಳು ತೇಲಿ ಹೋಗುತ್ತಿರುವುದನ್ನು ಗಮನಿಸಿದರೆ ನದಿಗಳ ಉಗಮ ಪ್ರದೇಶದಲ್ಲಿ ಅರಣ್ಯದ ನಡುವೆ ಭೂಕುಸಿತಗೊಂಡಿರುವ ಅನುಮಾನ ವ್ಯಕ್ತವಾಗಿದೆ. ಸವಣಾಲಿನಲ್ಲಿ ನದಿಯಲ್ಲಿ ಮಣ್ಣು ಮಿಶ್ರಿತ ಕಪ್ಪು ಬಣ್ಣದ ನೀರು ಹರಿದಿದ್ದು ನದಿ ನೀರು ದುರ್ಗಂಧದಿಂದ ಕೂಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಿತ್ತಬಾಗಿಲು ಗ್ರಾಮದ ಗಣೇಶನಗರ, ಚಾರ್ಮಾಡಿ ಸೇರಿದಂತೆ ಹಲವು ಅಪಾಯಕಾರಿ ಪ್ರದೇಶಗಳಲ್ಲಿ ಶಾಲಾ ಮಕ್ಕಳನ್ನು ಸ್ಥಳೀಯರು ಸುರಕ್ಷಿತವಾಗಿ ಮನೆಗಳಿಗೆ ತಲುಪಿಸಿದರು. ಇಲ್ಲಿನ ಹಲವಾರು ತೋಡು, ಕಿರು ಸೇತುವೆಗಳು, ಕಿಂಡಿ ಅಣೆಕಟ್ಟು ಗಳು ಜಲಾವೃತವಾದ ಕಾರಣ ಶಾಲಾ ಮಕ್ಕಳು ಸುತ್ತು ಬಳಸಿದ ದಾರಿಯಲ್ಲಿ ಮನೆಗೆ ಸಾಗುವುದು ಅನಿವಾರ್ಯವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X