Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ವಕ್ಫ್ ತಿದ್ದುಪಡಿ ಕಾಯ್ದೆ...

ಭಟ್ಕಳ: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ "ಬತ್ತಿ ಗುಲ್ ಚಳವಳಿ" ಗೆ ಉತ್ತಮ ಪ್ರತಿಕ್ರಿಯೆ

► ಮುಸ್ಲಿಂ ಪ್ರದೇಶಗಳಲ್ಲಿ ಕತ್ತಲು, ಮಾರುಕಟ್ಟೆಯಲ್ಲೂ ಉರಿಯದ ದೀಪಗಳು

ವಾರ್ತಾಭಾರತಿವಾರ್ತಾಭಾರತಿ1 May 2025 10:45 AM IST
share
ಭಟ್ಕಳ: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಬತ್ತಿ ಗುಲ್ ಚಳವಳಿ ಗೆ ಉತ್ತಮ ಪ್ರತಿಕ್ರಿಯೆ

ಭಟ್ಕಳ: ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ನಿಂದ 2025ರ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಕರೆ ನೀಡಲಾಗಿದ್ದ "ಬತ್ತಿ ಗುಲ್ ಚಳವಳಿ"ಗೆ ಭಟ್ಕಳದಲ್ಲಿ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬುಧವಾರ ರಾತ್ರಿ 9 ಗಂಟೆಗೆ ಮುಸ್ಲಿಂ ಪ್ರದೇಶಗಳಲ್ಲಿ ಮನೆಗಳು, ಅಂಗಡಿಗಳು ಹಾಗೂ ಮಾರುಕಟ್ಟೆಗಳ ದೀಪಗಳು ಆರಿಸಲ್ಪಟ್ಟವು. ಇದರಿಂದಾಗಿ ಸಾಂಕೇತಿಕವಾಗಿ ಕತ್ತಲು ಆವರಿಸಿತು. 15 ನಿಮಿಷಗಳ ಕಾಲ ನಡೆದ ಈ ಮೌನ ಚಳವಳಿಯ ಸಂದರ್ಭದಲ್ಲಿ ಮಾರುಕಟ್ಟೆಯ ವ್ಯಾಪಾರವೂ ಸ್ಥಗಿತಗೊಂಡಿತು.

ರಾಷ್ಟ್ರವ್ಯಾಪಿ ಚಳವಳಿಯನ್ನು ಪರಿಣಾಮಕಾರಿಯಾಗಿಸಲು ಭಟ್ಕಳದ ಸಾಮಾಜಿಕ ಸಂಸ್ಥೆಯಾದ ಮಜ್ಲಿಸ್ ಇಸ್ಲಾಹ್ ವ ತಂಝೀಮ್ ಸಂಪೂರ್ಣ ಪ್ರಯತ್ನ ನಡೆಸಿತು. ನಗರದ 100ಕ್ಕೂ ಹೆಚ್ಚು ಮಸೀದಿಗಳ ಮೂಲಕ ಬೋರ್ಡ್‌ನ ಸಂದೇಶವನ್ನು ಜನರಿಗೆ ತಲುಪಿಸಿತು. 15 ನಿಮಿಷಗಳ ಕಾಲ ದೀಪಗಳನ್ನು ಆರಿಸಿಡುವಂತೆ ಸಂಸ್ಥೆಯು ಔಪಚಾರಿಕ ಮನವಿ ಮಾಡಿತ್ತು. ಇದರ ಮೂಲಕ ಕೇಂದ್ರ ಸರ್ಕಾರದ ವಿವಾದಾತ್ಮಕ ಕಾಯ್ದೆಯ ವಿರುದ್ಧ ಪ್ರತಿಭಟನೆಯನ್ನು ನಡೆಸಲಾಯಿತು.

ನಗರದ ಸುಲ್ತಾನ್ ಸ್ಟ್ರೀಟ್, ಜಾಮಿಯಾ ಸ್ಟ್ರೀಟ್, ಖಲೀಫಾ ಸ್ಟ್ರೀಟ್, ಕಾಝಿಯಾ ಸ್ಟ್ರೀಟ್, ಗೌಸಿಯಾ ಸ್ಟ್ರೀಟ್, ಫಾರೂಕಿ ಸ್ಟ್ರೀಟ್, ಕಿದ್ವಾಯ್ ರಸ್ತೆ, ಡೊಂಗರ್‌ ಪಳ್ಳಿ, ನವಾಯತ್ ಕಾಲೋನಿ, ಮದೀನಾ ಕಾಲೋನಿ, ಮಖ್ದೂಮ್ ಕಾಲೋನಿ, ಆಜಾದ್ ನಗರ, ಕಾರಗದ್ದೆ, ಬಂದರ್ ರಸ್ತೆ, ಜಾಮಿಯಾಬಾದ್ ರಸ್ತೆ, ಜಾಲಿ ರಸ್ತೆ ಸೇರಿದಂತೆ ಹಲವಾರು ಮುಸ್ಲಿಂ ಪ್ರದೇಶಗಳಲ್ಲಿ ಏಕಕಾಲದಲ್ಲಿ ದೀಪಗಳನ್ನು ಆರಿಸಲಾಯಿತು. ರಾತ್ರಿ 9:15ಕ್ಕೆ ದೀಪಗಳನ್ನು ಮತ್ತೆ ಹೊತ್ತಿಸಲಾಯಿತು. ಈ ಸಂದರ್ಭದಲ್ಲಿ ಹಲವು ಮನೆಗಳಲ್ಲಿ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಲಾಯಿತು.

ಪ್ರತಿಭಟನಾಕಾರರು ಪ್ರಸ್ತುತ‌ ವಕ್ಫ್ ಕಾಯ್ದೆಯನ್ನು ಶರೀಅತ್, ಸಂವಿಧಾನ ಹಾಗೂ ಧಾರ್ಮಿಕ ಸ್ವಾತಂತ್ರ್ಯಕ್ಕೆ ವಿರುದ್ಧವೆಂದು ಖಂಡಿಸಿದರು ಮತ್ತು ಶಾಂತಿಯುತವಾಗಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಒತ್ತಾಯಿಸಿದರು.

ಮಜ್ಲಿಸ್ ಇಸ್ಲಾಹ್ ವ ತಂಝೀಮ್‌ನ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಕೀಬ್ ಎಂ.ಜೆ.ನದ್ವಿ ಹಾಗೂ ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ಮುಬಶ್ಶಿರ್ ಹುಸೇನ್ ಹಲ್ಲಾರೆ ಅವರು ಜನರ ಸಹಕಾರಕ್ಕೆ ಧನ್ಯವಾದ ಸೂಚಿಸಿ, ಮುಂದಿನ ದಿನಗಳಲ್ಲಿ ಬೋರ್ಡ್‌ನ ಶಾಂತಿಯುತ ಚಳವಳಿಗಳಿಗೂ ಸಂಪೂರ್ಣ ಬೆಂಬಲ ನೀಡುವಂತೆ ಜನರಿಗೆ ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X