ವಿಜಯ ಲಕ್ಷ್ಮಿ ಶಿಬರೂರುಗೆ BSWT ವರ್ಷದ ವ್ಯಕ್ತಿ ಪ್ರಶಸ್ತಿ

ಮಂಗಳೂರು : ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು (BSWT) ಇದರ 2023ನೆ ಸಾಲಿನ BSWT ವರ್ಷದ ವ್ಯಕ್ತಿ ಪ್ರಶಸ್ತಿಗೆ ಪತ್ರಕರ್ತೆ ವಿಜಯ ಲಕ್ಷ್ಮಿ ಶಿಬರೂರು ಅವರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು 25 ಸಾವಿರ ರೂ.ನಗದು ಮತ್ತು ಪ್ರಶಸ್ತಿ ಪತ್ರ, ಫಲಕವನ್ನು ಒಳಗೊಂಡಿರುತ್ತದೆ.
ಮಂಗಳೂರು ಸಮೀಪದ ಶಿಬರೂರು ಗ್ರಾಮದಲ್ಲಿ ಜನಿಸಿದ ವಿಜಯ ಲಕ್ಷ್ಮಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು. ಬೆಂಗಳೂರಿನಲ್ಲಿ ಕಾನೂನು ವ್ಯಾಸಂಗ ಪೂರ್ತಿಗೊಳಿಸಿದ ಇವರು ಜನವಾಹಿನಿ ಪತ್ರಿಕೆಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಿದರು. ಬಳಿಕ ಆಕಾಶವಾಣಿ, ಸಂಯುಕ್ತ ಕರ್ನಾಟಕ, ETV ಕನ್ನಡದಲ್ಲಿ ಹಿರಿಯ ವರದಿಗಾರ್ತಿ/ಆ್ಯಂಕರ್ ಆಗಿ ಕೆಲಸ ಮಾಡಿದರು. ಏಷ್ಯಾನೆಟ್ ಗ್ರೂಪ್ಗಳ ಸುವರ್ಣ ನ್ಯೂಸ್ 24x7 ಕನ್ನಡ ಸುದ್ದಿ ವಾಹಿನಿಯಲ್ಲಿ ವಿಶೇಷ ತನಿಖಾ ವರದಿಗಾರ್ತಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ವಿಜಯ ಟೈಮ್ಸ್ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
2023ರ ಡಿಸೆಂಬರ್ 30ರಂದು ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.





