ಉದ್ಯಮಿ ಎಂ.ಎಂ.ಅಬ್ದುಲ್ ರೆಹಮಾನ್ ನಿಧನ

ಮಂಗಳೂರು: ಮೂಲತಃ ಮೂಡಿಗೆರೆಯ ಪ್ರಸಕ್ತ ಮಂಗಳೂರಿನಲ್ಲಿ ವಾಸವಿದ್ದ ಉದ್ಯಮಿ ಎಂ.ಎಂ. ಅಬ್ದುಲ್ ರೆಹಮಾನ್ (78)ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ನಗರದ ವೆಸ್ಟ್ಲೈನ್ ಬಿಲ್ಡರ್ಸ್ ಆಡಳಿತ ನಿರ್ದೇಶಕ ನಾಸಿರ್ ಮೊಹಿದಿನ್ , ನಿರ್ದೇಶಕ ಯಾಸಿರ್ ಮೊಹಿದಿನ್ ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಅಬ್ದುಲ್ ರೆಹಮಾನ್ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಹಲವು ವರ್ಷಗಳ ಕಾಲ ಮೂಡಿಗೆರೆ ಪ್ರದೇಶದಲ್ಲಿ ಪಕ್ಷಕ್ಕಾಗಿ ದುಡಿದಿದ್ದರು. ಮೂಡಿಗೆರೆ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರ ಅಂತ್ಯಕ್ರಿಯೆಯು ಗುರುವಾರ(ಜು.17) ಅಸರ್ ನಮಾಝ್ ಬಳಿಕ ನಗರದ ಬಿಕರ್ನಕಟ್ಟೆಯ ಅಹ್ಸನುಲ್ ಮಸಾಜಿದ್ ವಠಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ: ಎಂ.ಎಂ.ಅಬ್ದುಲ್ ರೆಹಮಾನ್ ಅವರ ನಿಧಾನಕ್ಕೆ ಬ್ಯಾರೀಸ್ ಗ್ರೂಪ್ ಅಧ್ಯಕ್ಷ ಸಯ್ಯದ್ ಮುಹಮ್ಮದ್ ಬ್ಯಾರಿ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
Next Story





