Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಅಡುಗೆ ಅನಿಲ’ ಗ್ರಾಹಕರಿಗೆ ‘ಕೆವೈಸಿ’...

‘ಅಡುಗೆ ಅನಿಲ’ ಗ್ರಾಹಕರಿಗೆ ‘ಕೆವೈಸಿ’ ಕಡ್ಡಾಯ ಎಂಬ ಗೊಂದಲ ಸೃಷ್ಟಿ

► ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶ ► ಗ್ಯಾಸ್ ಏಜೆನ್ಸಿ ಕಚೇರಿಗೆ ಅಲೆಯುತ್ತಿರುವ ಗ್ರಾಹಕರು

ವಾರ್ತಾಭಾರತಿವಾರ್ತಾಭಾರತಿ20 Dec 2023 4:56 PM IST
share
‘ಅಡುಗೆ ಅನಿಲ’ ಗ್ರಾಹಕರಿಗೆ ‘ಕೆವೈಸಿ’ ಕಡ್ಡಾಯ ಎಂಬ ಗೊಂದಲ ಸೃಷ್ಟಿ

ಮಂಗಳೂರು, ಡಿ.20: ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಗ್ಯಾಸ್ ಏಜೆನ್ಸಿ ನೀಡಿದ ಕಾರ್ಡ್... ಈ ಮೂರನ್ನು ಡಿಸೆಂಬರ್ 31ರೊಳಗೆ ಆಯಾ ಗ್ಯಾಸ್ ಏಜೆನ್ಸಿಯ ಕಚೇರಿಗೆ ತೆಗೆದುಕೊಂಡು ಹೋಗಿ ಕಡ್ಡಾಯವಾಗಿ ಕೆವೈಸಿ ಮಾಡಿಸಬೇಕು. ಕೆವೈಸಿ ಮಾಡಿಸಿದರೆ ಜನವರಿ 1ರಿಂದ ಪ್ರತೀ ಅನಿಲ ಗ್ರಾಹಕರಿಗೆ 500 ರೂ. ಸಬ್ಸಿಡಿ ಸಿಗುತ್ತದೆ. ಇಲ್ಲದಿದ್ದರೆ ‘ಅಡುಗೆ ಅನಿಲ’ವು 2024ರ ಜನವರಿ 1ರ ಬಳಿಕ ‘ವಾಣಿಜ್ಯ ಅನಿಲ’ವಾಗಿ ಮಾರ್ಪಾಡು ಹೊಂದಲಿದೆ. ಇದರಿಂದ ನಿಮಗೆ ನಷ್ಟವಾಗಲಿದೆ. ಹಾಗಾಗಿ ತಕ್ಷಣ ‘ಗ್ಯಾಸ್ ಏಜೆನ್ಸಿದಾರರ ಕಚೇರಿಗೆ ತೆರಳಿ ಕೆವೈಸಿ ಮಾಡಿಸಿರಿ’ ಎಂಬ ಸಂದೇಶವು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ದಿನಗಳಿಂದ ಹರಿದಾಡುತ್ತಿದೆ.

ಈ ಸಂದೇಶದ ಸತ್ಯಾಂಶ ಅರಿಯದ ಗ್ರಾಹಕರು ಗ್ಯಾಸ್ ಏಜೆನ್ಸಿಯ ಕಚೇರಿಗೆ ಅಲೆದಾಡುತ್ತಿದ್ದಾರೆ. ಕೆಲವರು ಕೆಲಸಕ್ಕೆ ರಜೆ ಹಾಕಿ ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ ನಿಲ್ಲುತ್ತಾರೆ. ಗ್ರಾಹಕರು ತಮ್ಮ ಬಳಿಗೆ ಯಾಕೆ ಬರುತ್ತಿದ್ದಾರೆ ಎಂಬ ಮಾಹಿತಿಯೂ ಬಹುತೇಕ ಏಜೆನ್ಸಿಗಳಿಗೂ ಇಲ್ಲ, ಕಚೇರಿಯ ಸಿಬ್ಬಂದಿಗಳಿಗೂ ಇಲ್ಲ. ಯಾರೋ ಹರಿಯಬಿಟ್ಟ ಸಂದೇಶವನ್ನು ನಂಬಿಕೊಂಡು ಏಜೆನ್ಸಿಯ ಕಚೇರಿಗೆ ತಡಕಾಡುವುದು ಇದೀಗ ಎಲ್ಲರಿಗೂ ಸಮಸ್ಯೆಯಾಗಿ ಪರಿಣಮಿಸಿದೆ. ಆಹಾರ ಮತ್ತು ನಾಗರಿಕ ಇಲಾಖೆಯ ಕಚೇರಿಗೂ ಕೆಲವರು ದೂರವಾಣಿ ಕರೆ ಮಾಡಿ ಮಾಹಿತಿ ಪಡೆಯುತ್ತಿದ್ದಾರೆ. ಇಲಾಖೆಯ ಅಧಿಕಾರಿ/ಸಿಬ್ಬಂದಿ ವರ್ಗಕ್ಕೆ ಸ್ಪಷ್ಟನೆ ನೀಡಿ ಗೊಂದಲ ನಿವಾರಿಸುವುದು ಅನಿವಾರ್ಯವಾಗಿದೆ. ಒಟ್ಟಿನಲ್ಲಿ ಈ ಸಂದೇಶದ ಮೂಲಕ ಗ್ರಾಹಕರಲ್ಲಿ ಗೊಂದಲ ಸೃಷ್ಟಿಯಾಗಿದೆ. ಇನ್ನು ಈ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದವರು ಯಾರು ಎಂಬುದು ಯಕ್ಷಪ್ರಶ್ನೆಯಾಗಿದೆ.

ಈ ಸಂದೇಶವನ್ನು ಗಮನಿಸಿದ ಬಹುತೇಕ ಗ್ರಾಹಕರು ಕೆಲಸಗಳಿಗೆ ರಜೆ ಹಾಕಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಗ್ಯಾಸ್ ಏಜೆನ್ಸಿ ನೀಡಿದ ಕಾರ್ಡ್‌ಗಳನ್ನು ಹಿಡಿದು ಸರದಿ ಸಾಲಿನಲ್ಲಿ ನಿಲ್ಲುವುದು, ಕೆಲವರು ಕಾದು ಕಾದು ನಿರಾಶೆಯಿಂದ ಮರಳುವುದು ಕೂಡ ಸಾಮಾನ್ಯವಾಗಿದೆ.

ಇಲಾಖೆಯ ಅಧಿಕಾರಿಗಳು ಹೇಳುವ ಪ್ರಕಾರ ಈವರೆಗೆ ಕೇಂದ್ರ ಸರಕಾರ ಅಂತಹ ಯಾವುದೇ ಆದೇಶವನ್ನು ಹೊರಡಿಸಿಲ್ಲ. ಭವಿಷ್ಯದ ದಿನಗಳಲ್ಲಿ ಇಂತಹ ನಿಯಮ ಜಾರಿಗೆ ಬಂದರೂ ಅಚ್ಚರಿ ಇಲ್ಲ. ಗ್ರಾಹಕರಲ್ಲಿ ಗೊಂದಲ ಸೃಷ್ಟಿಸಲು ಯಾರೋ ಮಾಡಿದ ಕುತಂತ್ರ ಇದಾಗಿದೆ. ಕೇಂದ್ರ ಸರಕಾರವು ಅಧಿಕೃತವಾಗಿ ಆದೇಶ ಹೊರಡಿಸುವವರೆಗೂ ಗ್ರಾಹಕರು ಗ್ಯಾಸ್ ಏಜೆನ್ಸಿಯ ಕಚೇರಿಗೆ ಅಲೆದಾಡಬೇಕಾಗಿಲ್ಲ. ಯಾವುದೇ ಗೊಂದಲಕ್ಕೆ ಒಳಗಾಗಬೇಕಿಲ್ಲ. ಯಾರ ಆಮಿಷಕ್ಕೂ ಮರುಳಾಗಬೇಕಿಲ್ಲ. ಕೆವೈಸಿ ಮಾಡಿಸಿದರೆ 500 ರೂ. ಸಬ್ಸಿಡಿ ಸಿಗುತ್ತದೆ ಎಂಬುದು ಸುಳ್ಳು ಸಂದೇಶವಾಗಿದೆ ಎಂದು ತಿಳಸಿದ್ದಾರೆ.

"ಅಡುಗೆ ಅನಿಲ ಪಡೆಯಲು ಕೆವೈಸಿ ಕಡ್ಡಾಯ ಎಂಬ ಸಂದೇಶವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಇಲಾಖೆಗೆ ಬಂದಿದೆ. ಈ ಸಂದೇಶದಲ್ಲಿ ಯಾವುದೇ ಹುರುಳಿಲ್ಲ. ಉಜ್ವಲ ಗ್ಯಾಸ್ ಸಂಪರ್ಕ ಪಡೆದಿರುವವರಿಗೆ ಮಾತ್ರ ಆಧಾರ್ ದೃಢೀಕರಣವು ಕಡ್ಡಾಯವಾಗಿದೆ. ಉಳಿದ ಬಳಕೆದಾರರಿಗೆ ಗ್ಯಾಸ್ ಸಬ್ಸಿಡಿಯ ಬಗ್ಗೆ ಕೇಂದ್ರ ಸರಕಾರವು ಯಾವುದೇ ಘೋಷಣೆ ಈವರೆಗೆ ಮಾಡಿಲ್ಲ. ಹಾಗಾಗಿ ಯಾವ ಕಾರಣಕ್ಕೂ ಗ್ಯಾಸ್ ಬಳಕೆದಾರರು ಯಾವುದೇ ಗೊಂದಲಕ್ಕೊಳಕ್ಕೆ ಒಳಗಾಗಬಾರದು".

-ಹೇಮಲತಾ, ಉಪನಿರ್ದೇಶಕರು
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ

"ನಮಗೆ ಅಧಿಕೃತವಾಗಿ ಯಾವುದೇ ಸೂಚನೆ ಬಂದಿಲ್ಲ. ಸಾಮಾಜಿಕ ಜಾಲತಾಣಗಳ ಸಂದೇಶ ಗಮನಿಸಿದ ಗ್ರಾಹಕರು ಕಚೇರಿಗೆ ಬಂದು ದಾಖಲೆಪತ್ರಗಳ ಝೆರಾಕ್ಸ್ ಪ್ರತಿಯನ್ನು ನೀಡಿ ಹೋಗುತ್ತಿದ್ದಾರೆ. ಸದ್ಯ ನಾವು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಮತ್ತು ಗ್ಯಾಸ್ ಸಂಪರ್ಕ ಸಂಖ್ಯೆಯುಳ್ಳ ಪ್ರತಿಯನ್ನು ಅನಿವಾರ್ಯವಾಗಿ ಸ್ವೀಕರಿಸುತ್ತಿದ್ದೇವೆ. ಯಾವತ್ತಾದರೊಂದು ದಿನ ಈ ಬಗ್ಗೆ ಅಧಿಕೃತ ಆದೇಶ ಬಂದರೂ ಅಚ್ಚರಿ ಇಲ್ಲ. ಆವಾಗ ಈ ದಾಖಲೆಗಳು ಉಪಯೋಗಕ್ಕೆ ಬಂದೀತು. ಅದಕ್ಕಾಗಿ ಇದು ನಮ್ಮ ಪೂರ್ವಭಾವಿ ಸಿದ್ಧತೆ ಎನ್ನಬಹುದಾಗಿದೆ. ನಾವು ಗ್ರಾಹಕರನ್ನು ಯಾವತ್ತೂ ನಿರಾಶೆಗೊಳಿಸಲು ಸಿದ್ಧರಿಲ್ಲ. ಉಜ್ವಲ ಗ್ಯಾಸ್ ಬಳಕೆದಾರರು ಆಧಾರ್ ದೃಢೀಕರಣ ಮಾಡಬೇಕಿದೆ ಎಂದು ಹೆಸರು ತಿಳಿಸಲು ಇಚ್ಛಿಸದ ಗ್ಯಾಸ್‌ ಏಜೆನ್ಸಿದಾರರೊಬ್ಬರು ಮಾಹಿತಿ ನೀಡಿದ್ದಾರೆ.

"ನಮಗೆ ಇದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ವಾಟ್ಸ್‌ಆ್ಯಪ್‌ನಲ್ಲಿ ಬಂದ ಮಾಹಿತಿಯನ್ನು ನಂಬಿ ಗ್ಯಾಸ್ ಏಜೆನ್ಸಿಯ ಕಚೇರಿಗೆ ಹೋಗಿ ವಾಪಸ್ ಬಂದೆ. ಯಾರು ಇಂತಹ ಸಂದೇಶವನ್ನು ಕಳುಹಿಸಿದ್ದಾರೋ ಗೊತ್ತಿಲ್ಲ. ನಮ್ಮಂತಹ ಜನಸಾಮಾನ್ಯರನ್ನು ಅಲೆದಾಡಿಸುವುದು ಸರಿಯಲ್ಲ".

- ಪ್ರಮೀಳಾ ಡಿಸೋಜ, ಮಂಗಳೂರು




share
ವಾರ್ತಾಭಾರತಿ
ವಾರ್ತಾಭಾರತಿ
Next Story
X