Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆಯಲ್ಲಿ ಡಿ.13 ರಂದು...

ದ.ಕ. ಜಿಲ್ಲೆಯಲ್ಲಿ ಡಿ.13 ರಂದು ರಾಷ್ಟ್ರೀಯ ಲೋಕ್ ಅದಾಲತ್

ವಾರ್ತಾಭಾರತಿವಾರ್ತಾಭಾರತಿ6 Dec 2025 9:54 PM IST
share
ದ.ಕ. ಜಿಲ್ಲೆಯಲ್ಲಿ ಡಿ.13 ರಂದು ರಾಷ್ಟ್ರೀಯ ಲೋಕ್ ಅದಾಲತ್

ಮಂಗಳೂರು, ಡಿ.6 : ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ ತ್ವರಿತ ನ್ಯಾಯ ನೀಡಲು ಮಂಗಳೂರು ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಡಿ.13 ರಂದು ರಾಷ್ಟ್ರೀಯ ಲೋಕ್ ಅದಾಲತನ್ನು ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ್ ತಿಳಿಸಿದ್ಧಾರೆ.

ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅದಾಲತ್ ನಲ್ಲಿ ರಾಜೀ ಸಂಧಾನದ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾದ ಪ್ರಕರಣಗಳ ಮಾಹಿತಿ ನೀಡಿದರು.

ಮೋಟಾರು ವಾಹನ ಅಪಘಾತ ಪ್ರಕರಣಗಳು, ಚೆಕ್ಕು ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ, ಅಕ್ರಮ ಮರಳು ಸಾಗಾಣಿಕೆ, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಚೇದನ ಪ್ರಕರಣವನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು ಭೂಸ್ವಾಧೀನ ಹಾಗೂ ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಪಟ್ಟ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾನೂನಾತ್ಮಕವಾಗಿ ರಾಜೀಯಾಗಬಲ್ಲ ಎಲ್ಲಾ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಈ ಆದೇಶದ ವಿರುದ್ಧ ಯಾವುದೇ ಮೇಲ್ಮನವಿ ಇರುವುದಿಲ್ಲ, ಕಡಿಮೆ ಖರ್ಚಿನಲ್ಲಿ ತ್ವರಿತ ನ್ಯಾಯ ಪಡೆದುಕೊಂಡು ತಮ್ಮ ಸಮಯ ಹಾಗು ಸಂಬಂಧಗಳನ್ನು ಉಳಿಸಿಕೊಳ್ಳಲು ಇದೊಂದು ವಿಶೇಷ ಅವಕಾಶವಾಗಿದೆ ಎಂದರು.

ಒಟ್ಟು 55,555 ಪ್ರಕರಣ :

ಒಟ್ಟು 55,555 ಪ್ರಕರಣಗಳಲ್ಲಿ, ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಇತ್ಯರ್ಥಪಡಿಸಬಹುದಾದ 9,051 ಪ್ರಕರಣಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ, 3,818 ಪ್ರಕರಣಗಳನ್ನು ಲೋಕ ಅದಾಲತ್ ಉಲ್ಲೇಖಿಸಲಾಗಿದೆ. ಈ ಮಧ್ಯೆ, 957 ಪ್ರಕರಣಗಳು ರಾಜಿ ಸಂಧಾನದ ಮೂಲಕ ಬಗೆಹರಿಸಲು ಸಿದ್ದವಾಗಿದೆ. 52 ಪ್ರಕರಣಗಳನ್ನು ಈಗಾಗಲೇ ವಿಲೇವಾರಿ ಮಾಡಲಾಗಿದೆ ಮತ್ತು ಇದುವರೆಗೆ 15,47,49,578 ರೂ. ಗಳನ್ನು ವಸೂಲಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಹಿಂದಿನ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಸೆ.13 ರಂದು ಬಾಕಿ ಉಳಿದಿದ್ದ 3,684 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಅವರು ಹೇಳಿದರು.

ಪ್ರಕರಣಗಳನ್ನು ಬಗೆಹರಿಸಲು ಮಂಗಳೂರಿನಲ್ಲಿ 16 ಸೇರಿದಂತೆ ಜಿಲ್ಲೆಯಲ್ಲಿ 55 ಮಧ್ಯಸ್ಥಗಾರರು ಇದ್ದಾರೆ. ಇದು ಸಾಕಾಗುವುದಿಲ್ಲ ವಿವಿಧ ತಾಲೂಕುಗಳ ನ್ಯಾಯಾಲಯಗಳಿಗೆ ಆವಶ್ಯಕತೆ ಅನುಗುಣವಾಗಿ ಮಧ್ಯಸ್ಥಗಾರರ ನೇಮಕ ಮಾಡಲಾಗುವುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದರು.

ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯತಿ :

ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92ರಿಂದ 2019-20ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ, ನಿಯಮಗಳ ಉಲ್ಲಂಘನೆ ಸಂಬಂಧ ಪ್ರಕರಣ ದಾಖಲಾಗಿ ಬಾಕಿ ಇರುವ ಡಿಎಸ್‌ಎ(ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯತಿ ನೀಡಿ 2025 ನ.21ರಿಂದ ಡಿ.12ತನಕ ಪ್ರಕರಣಗಳ ಇತ್ಯರ್ಥಗೊಳಿಸಲು ಅವಕಾಶ ನೀಡಲಾಗಿದೆ.

ಪೊಲೀಸ್ ಇಲಾಖೆಯ ಇ - ಚನಲ್‌ನಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯತಿ ನೀಡಲಾಗಿದ್ದು, 2025 ನ.21ರಿಂದ ಡಿ.12ರ ವರೆಗೆ ಬಾಕಿ ಇರುವ ಪ್ರಕರಣಗಳಿಗೆ ಇದು ಅನ್ವಯವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X